ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

Date:

  • 11ನೇ ದಿನಕ್ಕೆ ಕಾಲಿಟ್ಟ ಕುಸ್ತಿಪಟುಗಳ ಪ್ರತಿಭಟನೆ
  • ತೀವ್ರ ಟೀಕೆಯ ಬೆನ್ನಲ್ಲೇ ಎಚ್ಚೆತ್ತ ಪಿ ಟಿ ಉಷಾ

ಪ್ರತಿಭಟನಾ ನಿರತ ಕುಸ್ತಿಪಟುಗಳ ವಿರುದ್ಧ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದ ಹಿರಿಯ ಅಥ್ಲೀಟ್‌ ಪಿ ಟಿ ಉಷಾ ತಮ್ಮ ವರಸೆ ಬದಲಿಸಿದ್ದಾರೆ.

ದೆಹಲಿಯ ಜಂತರ್ ಮಂತರ್‌ನಲ್ಲಿ  ಕಳೆದ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ (ಐಒಎ) ಅಧ್ಯಕ್ಷೆ ಉಷಾ, ಬುಧವಾರ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದ್ದಾರೆ.

“ನಾನು ಮೊದಲು ಕ್ರೀಡಾಪಟು ಆ ಬಳಿಕ ಆಡಳಿತಾಧಿಕಾರಿ” ಎಂದು ಹೇಳುವ ಮೂಲಕ ಕುಸ್ತಿಪಟುಗಳ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೃಜ್‌ ಭೂಷಣ್‌ರನ್ನು ಬಂಧಿಸುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಕುಸ್ತಿಪಟುಗಳು ತಮ್ಮ ದೃಢನಿರ್ಧಾರವನ್ನು ತಿಳಿಸಿದ್ದು, ರಾಜಧಾನಿಯಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಪ್ರತಿಭಟನೆ ಅಶಿಸ್ತು ಎಂದಿದ್ದ ಉಷಾ

ಕೆಲ ದಿನಗಳ ಹಿಂದೆ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಟೀಕಿಸಿದ್ದ ಉಷಾ, “ಕುಸ್ತಿಪಟುಗಳದ್ದು ನಕಾರಾತ್ಮಕ ಧೋರಣೆ, ಪ್ರತಿಭಟನೆಯು ಅಶಿಸ್ತಿನ ವರ್ತನೆ” ಎಂದು ಹೇಳಿದ್ದರು.

ಆದರೆ, ಹಿರಿಯ ಅಥ್ಲೀಟ್‌ ಆಗಿರುವ ಉಷಾ, ಕ್ರೀಡಾಪಟುಗಳ ಬೆಂಬಲಕ್ಕೆ ನಿಲ್ಲುವ ಬದಲು ಅವರ ವಿರುದ್ಧವೇ ಹೇಳಿಕೆ ನೀಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು.

ಉಷಾ ಜೊತೆಗಿನ ಮಾತುಕತೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕುಸ್ತಿಪಟು ಭಜರಂಗ್‌ ಪುನಿಯಾ, “ಉಷಾ ಅವರು ನಮ್ಮ ಜೊತೆಗಿರುವುದನ್ನು ತಿಳಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಆದರೆ ಸಮಸ್ಯೆ ಪರಿಹಾರದ ಕುರಿತು ಅವರು ಯಾವುದೇ ಭರವಸೆ ನೀಡಿಲ್ಲ. ಹೀಗಾಗಿ ನಮಗೆ ನ್ಯಾಯ ಸಿಗುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ನಾವು ಅವರಿಗೆ ತಿಳಿಸಿದ್ದೇವೆ” ಎಂದು  ಪುನಿಯಾ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?:

ಐಪಿಎಲ್‌ 2023 | ಲಕ್ನೋ ತವರಲ್ಲಿ ಸೇಡು ತೀರಿಸಿಕೊಂಡ ಆರ್‌ಸಿಬಿ

“ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿಗಾಗಿ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆ ಕ್ರೀಡಾ ಕ್ಷೇತ್ರಕ್ಕೆ ಮತ್ತು ದೇಶಕ್ಕೆ ಒಳ್ಳೆಯದಲ್ಲ. ಇದು ನಕಾರಾತ್ಮಕ ಧೋರಣೆ” ಎಂದು ಈ ಹಿಂದೆ ಪಿ ಟಿ ಉಷಾ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...