ಐಪಿಎಲ್‌ 16 ಎಲಿಮಿನೇಟರ್‌ | ಲಖನೌ ವಿರುದ್ಧ ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಮುಂಬೈ

Date:

ಐಪಿಎಲ್‌ 16ನೇ ಆವೃತ್ತಿಯ ಎಲಿಮಿನೇಟರ್​ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಚೆನ್ನೈನ ಚೆಪಾಕ್‌ ಮೈದಾನದಲ್ಲಿ ನಡೆಯುವ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡ, ಲಖನೌ ಸೂಪರ್ ​ಜೈಂಟ್ಸ್ ಸವಾಲನ್ನು ಎದುರಿಸಲಿದೆ.

ಬುಧವಾರದ ಪಂದ್ಯ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್​ಗೆ ಅರ್ಹತೆ ಪಡೆದರೆ, ಸೋತ ತಂಡ ಟೂರ್ನಿಯಿಂದಲೇ ಹೊರನಡೆಯಲಿದೆ. ಮಂಗಳವಾರ ನಡೆದ ಕ್ವಾಲಿಫೈಯರ್‌-1 ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಟೈಟನ್ಸ್‌ ತಂಡವನ್ನು ಮಣಿಸಿ 4 ಬಾರಿಯ ಚಾಂಪಿಯನ್‌ ಚೆನ್ನೈ, ದಾಖಲೆಯ 10ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ.

ಇಂದಿನ ಪಂದ್ಯದ ವಿಜೇತರು, ಶುಕ್ರವಾರ ಅಹಮದಾಬಾದ್‌ನಲಿ ನಡೆಯುವ ಎರಡನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ಸವಾಲನ್ನು ಎದುರಿಸಬೇಕಿದೆ. ಐಪಿಎಲ್‌ನಲ್ಲಿ ಇದುವರೆಗೂ 9ಬಾರಿ ಪ್ಲೇ ಆಫ್‌ ಪ್ರವೇಶಿಸಿರುವ ಮುಂಬೈ ಇಂಡಿಯನ್ಸ್‌ ಕೇವಲ 1 ಪಂದ್ಯದಲ್ಲಿ ಮಾತ್ರ ಸೋಲು ಕಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಆವೃತ್ತಿಯಲ್ಲಿ ಐಪಿಎಲ್‌ಗೆ ಎಂಟ್ರಿ ಪಡೆದಿದ್ದ ಲಖನೌ ಸೂಪರ್​ ಜೈಂಟ್ಸ್​, ಮೊದಲ ಆವೃತ್ತಿಯಲ್ಲೇ ಪ್ಲೇಆಫ್​ ಪ್ರವೇಶಿಸಿತ್ತು. ಆದರೆ ಎಲಿಮಿನೇಟರ್​ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ  ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರನಡೆದಿತ್ತು. ಇದೀಗ ಸತತ ಎರಡನೇ ಆವೃತ್ತಿಯಲ್ಲೂ ಪ್ಲೇ ಆಫ್‌ ಪ್ರವೇಶಿಸಿರುವ ಲಖನೌ, ರೋಹಿತ್‌ ಬಳಗವನ್ನು ಮಣಿಸಿ ಮುಂದಿನ ಹಂತ ಪ್ರವೇಶ ನಿರೀಕ್ಷೆಯಲ್ಲಿದೆ. ನಾಯಕ ಕೆ.ಎಲ್.ರಾಹುಲ್​, ಗಾಯಗೊಂಡು ಟೂರ್ನಿಯಿಂದಲೇ ಹೊರನಡೆದರೂ ಸಹ, ಆಲ್‌ರೌಂಡರ್ ಕೃನಾಲ್​ ಪಾಂಡ್ಯ ತಂಡದ ಸಾರಥ್ಯವನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ.

ಮತ್ತೊಂದೆಡೆ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡ ಈ ಬಾರಿ ಕಷ್ಟಪಟ್ಟು ಪ್ಲೇ ಆಫ್​​ಗೇರಿದೆ. ಲೀಗ್‌ ಹಂತದಲ್ಲಿ  ಆಡಿದ 14 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಮತ್ತು 6ರಲ್ಲಿ ಸೋಲು ಕಾಣುವ ಮೂಲಕ 16 ಅಂಕ ಸಂಪಾದಿಸಿತ್ತು.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುಜರಾತ್​ ವಿರುದ್ಧ ಸೋತಿದ್ದು ಮುಂಬೈ ಪಾಲಿಗೆ ವರದಾನವಾಯಿತು.

ಮುಖಾಮುಖಿ: ಉಭಯ ತಂಡಗಳು ಐಪಿಎಲ್​ನಲ್ಲಿ ಒಟ್ಟು 3 ಬಾರಿ ಎದುರಾಗಿದ್ದು, ಮುಂಬೈ ತಂಡ ಗೆಲುವಿನ ಖಾತೆ ತೆರೆಯುವಲ್ಲಿ ವಿಫಲವಾಗಿದೆ.  

ಸಂಭಾವ್ಯ ತಂಡ:

ಲಖನೌ; ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್, ಪ್ರೇರಕ್ ಮಂಕಡ್, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ (ನಾಯಕ), ನಿಕೋಲಸ್ ಪೂರನ್, ಆಯುಷ್ ಬದೌನಿ, ಕೆ ಗೌತಮ್, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಯಶ್ ಠಾಕೂರ್.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ‌ (ನಾಯಕ), ಇಶಾನ್ ಕಿಶನ್, ಕ್ಯಾಮರೂನ್​ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ/ವಿಷ್ಣು ವಿನೋದ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಹೃತಿಕ್ ಶೋಕೀನ್.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...