ಐಪಿಎಲ್ 2023 | ಗುಜರಾತ್‌ಗೆ ಸೆಡ್ಡು ಹೊಡೆಯಲು ಸಜ್ಜಾದ ಪಂಜಾಬ್

Date:

  • ಪಂಜಾಬ್ ಮತ್ತು ಗುಜರಾತ್ ಎರಡು ಪಂದ್ಯಗಳು ಗೆದ್ದು ಒಂದು ಪಂದ್ಯ ಸೋತಿವೆ
  • ಟಾಸ್‌ ಗೆದ್ದರೆ ಬ್ಯಾಟಿಂಗ್‌ಗಿಂತ ಬೌಲಿಂಗ್‌ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು

ಮೊದಲ ಎರಡು ಪಂದ್ಯಗಳನ್ನು ಗೆದ್ದು, ಒಂದೊಂದು ಪಂದ್ಯ ಸೋತಿರುವ ಗುಜರಾತ್ ಟೈಟಾನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು 2023ರ ಐಪಿಎಲ್ ಟೂರ್ನಿಯಲ್ಲಿ ಮೊದಲ ಬಾರಿಗೆ ಸೆಣಸುತ್ತಿವೆ. ಅಂಕಪಟ್ಟಿಯಲ್ಲಿ ಉಭಯ ತಂಡ​ಗಳೂ ತಲಾ 4 ಅಂಕ ಗಳಿಸಿವೆ.

ರಿಂಕು ಸಿಂಗ್‌ ಸ್ಫೋಟಕ ಆಟದಿಂದಾಗಿ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ಮುಗ್ಗ​ರಿ​ಸಿದ್ದ ಗುಜ​ರಾತ್‌ ಟೈಟಾನ್ಸ್ ಪುನಃ ಗೆಲುವಿನ ಲಯಕ್ಕೆ ಮರಳಲು ಸಜ್ಜಾಗಿದೆ. ಇಂದು (ಏಪ್ರಿಲ್‌ 13) ನಡೆಯುವ ಪಂಜಾಬ್‌ ಕಿಂಗ್ಸ್‌ ಎದುರಿನ ಪಂದ್ಯದಲ್ಲಿ ಜಯ​ಗ​ಳಿ​ಸುವ ನಿರೀ​ಕ್ಷೆಯ​ಲ್ಲಿದೆ.

ಶಿಖರ್ ಧವನ್‌ ನಾಯ​ಕ​ತ್ವದ ಪಂಜಾಬ್‌ ಕಿಂಗ್ಸ್ ತಂಡ ಕೂಡಾ ಮೂರನೇ ಪಂದ್ಯ​ದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಎದುರು 8 ವಿಕೆಟ್‌ಗಳಿಂದ ಸೋತಿದ್ದು, ಮತ್ತೆ ಗೆಲು​ವನ್ನು ದಾಖಲಿಸಲು ತವಕಿಸತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಟಿಂಗ್‌ನಲ್ಲಿ ಉತ್ತಮ ಲಯದಲ್ಲಿರುವ ಶಿಖರ್ ಧವ​ನ್‌ ಪಂಜಾಬ್‌ನ ಪ್ರಮುಖ ಶಕ್ತಿ. ಈಗಾಗಲೇ ಮೂರು ಪಂದ್ಯಗಳಿಂದ 225 ರನ್‌ ಬಾರಿಸಿದ್ದಾರೆ. ಐಪಿ​ಎಲ್‌ ಹರಾ​ಜಿನ ದುಬಾರಿ ಆಟ​ಗಾರ ಸ್ಯಾಮ್‌ ಕರ್ರನ್‌ ನಾಲ್ಕನೇ ಪಂದ್ಯದಲ್ಲಿ ಮಿಂಚುವ ಉತ್ಸಾಹದಲ್ಲಿದ್ದಾರೆ. ಇಂದಿನ ಪಂದ್ಯದಲ್ಲಿ ಮತ್ತೊಬ್ಬ ಪ್ರಭಾವಿ ಆಟಗಾರ ಲಿವಿಂಗ್‌​ಸ್ಟೋನ್‌ ತಂಡ ಸೇರಿಕೊಳ್ಳುವ ಸಾಧ್ಯತೆಯಿದೆ.

ಪಂಜಾಬ್ ಪರವಾಗಿ ಪ್ರಭ್‌​ಸಿ​ಮ್ರಾನ್‌, ಜಿತೇಶ್‌ ಶರ್ಮಾ ಅವರೊಂದಿಗೆ ಶಾರೂಖ್‌ ಖಾನ್‌ ತಮ್ಮ ಶಕ್ತಿ ತೋರಿಸಲು ಸಿದ್ಧರಾಗಿದ್ದಾರೆ. ಬೌಲಿಂಗ್‌ ಪ್ರತಿಭೆಗಳಾದ ಕಗಿಸೋ ರಬಾಡ ಸೇರ್ಪ​ಡೆ​ ಬೌಲಿಂಗ್‌ ವಿಭಾ​ಗಕ್ಕೆ ಬಲ ಒದ​ಗಿ​ಸಿದ್ದು, ಅರ್ಶ​ದೀಪ್‌ ಸಿಂಗ್‌ ಹಾಗೂ ನೇಥನ್‌ ಎಲ್ಲಿಸ್‌ ಎದು​ರಾ​ಳಿ​ಗಳಿಗೆ ಟಾಂಗ್‌ ನೀಡಲು ಸಜ್ಜಾ​ಗಿ​ದ್ದಾರೆ.

ಇತ್ತ, ಹಾಲಿ ಚಾಂಪಿ​ಯನ್‌ ಗುಜ​ರಾತ್‌ ತಂಡದಲ್ಲಿ ಶುಭ್‌ಮನ್ ಗಿಲ್‌, ಸಾಯಿ ಸುದ​ರ್ಶನ್‌, ವಿಜಯ್‌ ಶಂಕರ್‌, ಡೇವಿಡ್ ಮಿಲ್ಲರ್‌, ರಾಹುಲ್ ತೆವಾ​ಟಿಯಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ರಶೀದ್‌ ಖಾನ್‌, ಹಾರ್ದಿಕ್‌ ಕೂಡಾ ಬ್ಯಾಟಿಂಗ್‌ನಲ್ಲಿ ಅಬ್ಬರಿಸುವುದರ ಜೊತೆಗೆ ಬೌಲಿಂಗ್‌ನಲ್ಲೂ ಎದುರಾಳಿ ತಂಡದ ಆಟಗಾರರ ನಿದ್ದೆಗೆಡಿಸುತ್ತಿದ್ದಾರೆ.

ವೇಗದ ಬೌಲರ್‌ಗಳಾದ ಮೊಹ​ಮದ್‌ ಶಮಿ ಮತ್ತು ಅಲ್ಜಾರಿ ಜೋಸೆಫ್‌ ವಿಕೆಟ್ ಪಡೆಯುವುದರೊಂದಿಗೆ ರನ್‌ಗಳನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದ್ದಾರೆ. ಪಾಂಡ್ಯ ನೇತೃತ್ವದ ಪಡೆಯಲ್ಲಿ ಟೀಮ್‌ ವರ್ಕ್‌ ಸದ್ಬಳಕೆಯಾಗುತ್ತಿದೆ.   

ಒಟ್ಟು ಮುಖಾಮುಖಿ: 02

ಗುಜ​ರಾ​ತ್‌: 01

ಪಂಜಾಬ್ : 01

ಸಂಭವನೀಯ ಆಟಗಾರರು

ಗುಜರಾತ್ ಟೈಟಾನ್ಸ್:

ವೃದ್ದಿಮಾನ್ ಸಾಹ , ಶುಭ್‌ಮನ್ ಗಿಲ್‌, ಸಾಯಿ ಸುದರ್ಶನ್‌, ಹಾರ್ದಿಕ್‌ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್‌, ರಾಹುಲ್ ತೆವಾಟಿಯಾ, ರಶೀದ್‌ ಖಾನ್, ಜೋಶ್ವಾ ಲಿಟ್ಲ್‌, ಅಲ್ಜಾರಿ ಜೋಸೆಫ್‌, ಯಶ್ ದಯಾಳ್‌, ಮೊಹಮ್ಮದ್ ಶಮಿ.

ಪಂಜಾಬ್‌ ಕಿಂಗ್ಸ್:

ಶಿಖರ್ ಧವನ್‌ (ನಾಯಕ), ಪ್ರಭ್‌ಸಿಮ್ರನ್‌ ಸಿಂಗ್, ಮ್ಯಾಥ್ಯೂ ಶಾರ್ಟ್‌, ಲಿಯಮ್ ಲಿವಿಂಗ್‌​ಸ್ಟೋನ್‌, ಜಿತೇಶ್‌ ಶರ್ಮಾ, ಸ್ಯಾಮ್ ಕರ್ರನ್‌, ಶಾರೂಖ್‌ ಖಾನ್, ಹಪ್ರೀರ್ತ್‌ ಬ್ರಾರ್, ರಾಹುಲ್‌ ಚಹರ್, ಅರ್ಶ್‌ದೀಪ್‌ ಸಿಂಗ್, ಕಗಿಸೋ ರಬಾ​ಡ

ಪಂದ್ಯ: ಸಂಜೆ 7.30ರಿಂದ

ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್, ಜಿಯೋ ಸಿನಿಮಾ ಆ್ಯಪ್

ಪಿಚ್ ರಿಪೋರ್ಚ್

ಮೊಹಾಲಿ ಕ್ರೀಡಾಂಗ​ಣದ ಪಿಚ್‌ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚಿನ ನೆರವು ನೀಡಿದ ಉದಾ​ಹ​ರಣೆ ಹಿಂದಿನ ಪಂದ್ಯಗಳಿಂದ ಗೊತ್ತಾಗಿದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಂಡರೆ ಮತ್ತೊಮ್ಮೆ ರನ್‌ ಮಳೆ ಹರಿ​ಯುವ ನಿರೀಕ್ಷೆ ಇದೆ.

ಅಲ್ಲದೆ ವೇಗಿ​ಗ​ಳಿಗೂ ಈ ಪಿಚ್‌ ಅನುಕೂ​ಲ​ವಾ​ಗುವ ಸಾಧ್ಯತೆಯಿದೆ. ಟಾಸ್‌ ಗೆಲ್ಲುವ ತಂಡ ಬ್ಯಾಟಿಂಗ್‌ಗಿಂತ ಹೆಚ್ಚು ಫೀಲ್ಡಿಂಗ್‌ ಆಯ್ಕೆ ಮಾಡಿ​ಕೊ​ಳ್ಳ​ಬ​ಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...