ಐಪಿಎಲ್ 2023 | ಕೆಕೆಆರ್‌ ಬೌಲಿಂಗ್‌ ದಾಳಿಗೆ ಆರ್‌ಸಿಬಿ ಧೂಳೀಪಟ; ಮೊದಲ ಗೆಲುವು ದಾಖಲಿಸಿದ ಕೋಲ್ಕತ್ತಾ

Date:

ತವರಿನಲ್ಲಿ ಮೊದಲ ಗೆಲುವು ದಾಖಲಿಸಿ ಹುಮ್ಮಸ್ಸಿನಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 81 ರನ್‌ಗಳ ಮುಖಭಂಗ ಅನುಭವಿಸಿತು.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌ ನೀಡಿದ 205 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ವರುಣ್ ಚಕ್ರವರ್ತಿ,ಸುನಿಲ್ ನರೈನ್ ಹಾಗೂ ಸುಯಶ್ ಶರ್ಮಾ ಅವರ ಅಮೋಘ ಬೌಲಿಂಗ್‌ ದಾಳಿಗೆ ಕುಸಿದು 17.4 ಓವರ್‌ಗಳಲ್ಲಿ 123 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ನಿತೀಶ್‌ ರಾಣಾ ಪಡೆಗೆ ಮೊದಲ ಗೆಲುವಿನ ಉಡುಗೊರೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರಂಭದಲ್ಲಿ ಉತ್ಸಾಹದೊಂದಿಗೆ ಬ್ಯಾಟಿಂಗ್‌ ಆರಂಭಿಸಿದ ನಾಯಕ ಫಾಫ್ ಡುಪ್ಲೆಸಿಸ್ 12 ಎಸೆತಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿಯೊಂದಿಗೆ 22 ಬಾರಿಸಿದರೂ ವರುಣ್ ಚಕ್ರವರ್ತಿ ಆಘಾತ ನೀಡಿದರು. ಇತ್ತ 21 ರನ್‌ ಗಳಿಸಿದ್ದ ವಿರಾಟ್‌ ಕೊಹ್ಲಿ ಕೂಡ ಸುನೀಲ್‌ ನರೈನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಪ್ರಮುಖ ಬ್ಯಾಟರ್‌ಗಳಾದ ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ಅವರು ಕೆಕೆಆರ್‌ ಬೌಲರ್‌ಗಳ ದಾಳಿಗೆ ಒಬ್ಬರ ಹಿಂದೆ ಒಬ್ಬರು ಪೆಲಿಯನ್‌ ಕಡೆ ಹೆಜ್ಜೆ ಹಾಕಿದರು.

ವರುಣ್‌ ಚಕ್ರವರ್ತಿ 15/4, ಸುಯೇಶ್ ಶರ್ಮಾ 30/3, ಸುನಿಲ್ ನರೈನ್ 16/2 ಹಾಗೂ ಶಾರ್ಧೂಲ್‌ ಠಾಕೂರ್ 15/1 ವಿಕೆಟ್ ಕಬಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರವಹಿಸಿದರು.

ಈ ಮೊದಲು ಟಾಸ್‌ ಸೋತ ಕೆಕೆಆರ್‌ ನಾಲ್ಕು ಓವರ್‌ಗಳಾಗುವಷ್ಟರಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಮಾತ್ರ ಬ್ಯಾಟ್‌ ಬೀಸುತ್ತಿದ್ದರೆ, ನಾಯಕ ನಿತೀಶ್ ರಾಣಾ,ಆಂಡ್ರೆ ರಸೆಲ್ ಸೇರಿ ಪ್ರಮುಖ ಬ್ಯಾಟರ್‌ಗಳು ಪೆವಿಲಿಯನ್‌ ಸೇರುತ್ತಿದ್ದರು.

ಹನ್ನೆರಡನೇ ಓವರ್‌ನಲ್ಲಿ 44 ಎಸೆತಗಳಲ್ಲಿ 57 ರನ್‌ ಗಳಿಸಿ ರಹ್ಮಾಮಾನುಲ್ಲಾ ಔಟಾದ ನಂತರ ಸ್ಫೋಟಕ ಆಟವನ್ನು ಆರಂಭಿಸಿದವರು ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್. ಶಾರ್ದೂಲ್‌ಗೆ ತಾಳ್ಮೆಯ ಆಟವಾಡಿ ರಿಂಕು ಸಿಂಗ್‌ ಜೊತೆಯಾದರು.

ಕೇವಲ 29 ಚಂಡುಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 9 ಆಕರ್ಷಕ ಬೌಂಡರಿಗಳ ಮೂಲಕ 69 ರನ್‌ ಸ್ಫೋಟಿಸಿದರು. ಇವರಿಬ್ಬರು 45 ಚಂಡುಗಳಲ್ಲಿ 103 ರನ್‌ ಜೊತೆಯಾಟವಾಡಿ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 204 ರನ್‌ಗೆ ಕೊಂಡೊಯ್ದರು.

ರಿಂಕು ಸಿಂಗ್‌ ಕೂಡ 33 ಎಸೆತಗಳಲ್ಲಿ 2 ಬಾಂಡರಿ ಹಾಗೂ 3 ಸಿಕ್ಸರ್‌ನೊಂದಿಗೆ 46 ರನ್‌ ಗಳಿಸಿದರು. ಆರ್‌ಸಿಬಿ ಪರ ಕರಣ್‌ ಶರ್ಮಾ , ಡೇವಿಡ್‌ ವಿಲ್ಲಿ ತಲಾ 2 ವಿಕೆಟ್‌ ಪಡೆದರೆ, ಮೈಕಲ್ ಬ್ರೇಸ್‌ವೆಲ್, ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...