ಐಪಿಎಲ್‌ 2023 | ಗೆಲುವಿನಂಚಿನಲ್ಲಿ ಎಡವಿದ ಹೈದರಾಬಾದ್‌; ಕೋಲ್ಕತ್ತಾಗೆ ರೋಚಕ ಗೆಲುವು

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌, ಕೆಕೆಆರ್ ತಂಡ‌ 4ನೇ ಗೆಲುವು ದಾಖಲಿಸಿದೆ.

ಹೈದರಾಬಾದ್‌ನ ರಾಜೀವ್‌ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಕೆಕೆಆರ್‌, ಆತಿಥೇಯ ಸನ್‌ರೈಸರ್ಸ್‌ ಹೈದರಾಬಾದ್‌, ಎಸ್‌ಆರ್‌ಎಚ್‌ ವಿರುದ್ಧ 5 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

ಮೂರು ಓವರ್‌ ಬೌಲಿಂಗ್‌ನಲ್ಲಿ 3 ಬೈ ಸೇರಿದಂತೆ ಕೇವಲ 12 ರನ್‌ ಬಿಟ್ಟುಕೊಟ್ಟ ಸ್ಪಿನ್ನರ್‌ ವರುಣ್‌ ಚಕ್ರವರ್ತಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚೇಸಿಂಗ್‌ ವೇಳೆ 15ನೇ ಓವರ್‌ವರೆಗೂ ಗೆಲುವಿನತ್ತ ಮುನ್ನಡೆದಿದ್ದ ಎಸ್‌ಆರ್‌ಎಚ್‌, ಕೊನೆಯ 5 ಓವರ್‌ಗಳಲ್ಲಿ ಬ್ಯಾಟಿಂಗ್‌ನಲ್ಲಿ ತೋರಿದ ನಿರ್ಲ್ಯಕ್ಷದಿಂದಾಗಿ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಕೆಕೆಆರ್‌ 9 ವಿಕೆಟ್‌ ನಷ್ಟದಲ್ಲಿ 171 ರನ್‌ಗಳಿಸಿತ್ತು. ಸವಾಲಿನ ಮೊತ್ತ ಬೆನ್ನಟ್ಟುವ ವೇಳೆ ಹೈದರಾಬಾದ್‌ ತಂಡ 15 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್‌ ನಷ್ಟದಲ್ಲಿ 134 ರನ್‌ಗಳಿಸಿತ್ತು. ಮುಂದಿನ 30 ಎಸೆತಗಳಲ್ಲಿ 38 ರನ್‌ಗಳಿಸಬೇಕಾದ ಸಾಮನ್ಯ ಗುರಿ ಆತಿಥೇಯ ತಂಡದ ಎದುರಿಗಿತ್ತು. ಈ ವೇಳೆ ನಾಯಕ ಮಾರ್ಕಮ್‌ ಮತ್ತು ಅಬ್ದುಲ್‌ ಸಮದ್‌ ಕ್ರೀಸ್‌ನಲ್ಲಿದ್ದರು. ಹೀಗಾಗಿ ಗೆಲುವಿನ ಅವಕಾಶ ಆತಿಥೇಯ ತಂಡ ಪಾಲಿಗೆ ಇತ್ತು.

ಆದರೆ ಅಂತಿಮ 5 ಓವರ್‌ಗಳಲ್ಲಿ ಬಿಗು ಬೌಲಿಂಗ್‌ ಪ್ರದರ್ಶನ ನೀಡಿದ ಕೆಕೆಆರ್‌ ಬೌಲರ್‌ಗಳು, ಕೈ ಬಿಟ್ಟು ಹೋಗಿದ್ದ ಪಂದ್ಯವನ್ನು ಮತ್ತೆ ತಮ್ಮ ವಶಕ್ಕೆ ಪಡೆದರು. ಕೊನೆಯ 5 ಓವರ್‌ಗಳಲ್ಲಿ ಕ್ರಮವಾಗಿ 4,8,5,12 ಹಾಗೂ ಕೊನೆಯ ಓವರ್‌ನಲ್ಲಿ ಕೇವಲ ಮೂರು ರನ್‌ಗಳಿಸಲಷ್ಟೇ ಎಸ್‌ಆರ್‌ಎಚ್‌ ಬ್ಯಾಟರ್‌ಗಳಿಗೆ ಸಾಧ್ಯವಾಯಿತು.

ಅಂತಿಮ  6 ಎಸೆತಗಳಲ್ಲಿ ಎಸ್‌ಆರ್‌ಎಚ್‌ ಗೆಲುವಿಗೆ ಕೇವಲ 9 ರನ್‌ಗಳ ಅಗತ್ಯವಿತ್ತು. ಆದರೆ ಸ್ಪಿನ್ನರ್ ವರುಣ್‌ ಚಕ್ರವರ್ತಿ,  ಕೇವಲ ಮೂರು ರನ್ ಮಾತ್ರ ಬಿಟ್ಟುಕೊಡುವ ಕೊಡುವ ತಂಡಕ್ಕೆ ಗೆಲುವು ತಂದುಕೊಟ್ಟರು.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...