ಐಪಿಎಲ್‌ 2023 | ತವರಿನಂಗಳದ ಕೊನೆಯ ಪಂದ್ಯದಲ್ಲಿ ಎಡವಿದ ಧೋನಿ ಪಡೆ

Date:

  • ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
  • ಕೆಕೆಆರ್‌ ವಿರುದ್ಧ ಚೆನ್ನೈ ತಂಡಕ್ಕೆ ಸೋಲು

ಐಪಿಎಲ್‌ 16ನೇ ಆವೃತ್ತಿಯ ಪ್ಲೇ ಆಫ್‌ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಕೆಕೆಆರ್‌ ವಿರುದ್ಧ ಸೋಲು ಕಂಡಿದೆ. ಆ ಮೂಲಕ ಪ್ಲೇ ಆಫ್‌ ಪಯಣದಲ್ಲಿ ಧೋನಿ ಪಡೆ ಹಿನ್ನಡೆ ಕಂಡಿದೆ.

ಸಿಎಸ್‌ಕೆ ಮುಂದಿಟ್ಟಿದ್ದ 145 ರನ್‌ಗಳ ಸಾಮಾನ್ಯ ಸವಾಲನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ 18.3 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ ಸುಲಭವಾಗಿಯೇ ಚೇಸ್‌ ಮಾಡಿತು.

15 ಅಂಕಗಳನ್ನು ಹೊಂದಿರುವ ಚೆನ್ನೈ, ಮೇ 20ರಂದು ನಡೆಯುವ ಲೀಗ್‌ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಎದುರಿಸಲಿದೆ. ಪ್ಲೇ ಆಫ್‌ ಪ್ರವೇಶಿಸಲು ಚೆನ್ನೈ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

13 ಪಂದ್ಯಗಳಿಂದ ಕೆಕೆಆರ್‌ 12 ಅಂಕಗಳನ್ನು ಹೊಂದಿದ್ದು, ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಅಂತಿಮ ಪಂದ್ಯವನ್ನಾಡಲಿದೆ.

ಕೈ ಕೊಟ್ಟ ಬ್ಯಾಟಿಂಗ್‌!   

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡುವ ಧೋನಿ ನಿರ್ಧಾರ ತಂಡಕ್ಕೆ ನೆರವಾಗಲಿಲ್ಲ. ನಿಧಾನಗತಿಯಲ್ಲಿ ಬ್ಯಾಟಿಂಗ್‌ ನಡೆಸಿದ ಚೆನ್ನೈ ಮೊದಲ 10 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ 68 ರನ್‌ಗಳಿಸಿತ್ತು. ನಂತರದ 10 ಓವರ್‌ಗಳಲ್ಲಿ ಗಳಿಸಿದ್ದು 76 ರನ್‌.

ಶಿವಂ ದುಬೆ ಅಜೇಯ 48 ಮತ್ತು ಆರಂಭಿಕ ಡೆವೋನ್‌ ಕಾನ್ವೆ 30 ರನ್‌ಗಳಿಸಿದ್ದು ಹೊರತು ಪಡಿಸಿದರೆ ಉಳಿದ ಬ್ಯಾಟರ್‌ಗಳು ತಂಡಕ್ಕೆ ನೆರವಾಗಲಿಲ್ಲ.

ರಾಣಾ-ರಿಂಕು ಶತಕದ ಜೊತೆಯಾಟ

ಚೇಸಿಂಗ್‌ ವೇಳೆ ಕೆಕೆರ್‌ 33 ರನ್‌ಗಳಿಸುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಜೊತೆಯಾದ ನಾಯಕ ನಿತೀಶ್‌ ರಾಣಾ ಮತ್ತು ಎಡಗೈ ಬ್ಯಾಟರ್‌ ರಿಂಕು ಸಿಂಗ್‌ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ರಿಂಕು ಸಿಂಗ್‌ 54 ರನ್‌ಗಳಿಸಿದ್ದ ವೇಳೆ ರನೌಟ್‌ಗೆ ಬಲಿಯಾದರು. ರಾಣಾ 57 ರನ್‌ಗಳಿಸಿ ಅಜೇಯರಾಗುಳಿದರು.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...