ಐಪಿಎಲ್‌ 2023 | ಲಕ್ನೋ vs ಚೆನ್ನೈ ಪಂದ್ಯ ಮಳೆಯಿಂದ ರದ್ದು

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಮಳೆಯಿಂದ ರದ್ದ್ದಾಗಿದೆ.

ಬುಧವಾರ  ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಟಾಸ್‌ ಗೆದ್ದಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌  ಆತಿಥೇಯ ಲಕ್ನೋ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು.

ರಾಹುಲ್‌ ಪಡೆ 19.2 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟದಲ್ಲಿ 125 ರನ್‌ಗಳಿಸಿದ್ದ ವೇಳೆ‌  ಜೋರಾಗಿ ಮಳೆ ಆರಂಭವಾಯಿತು. ಈ ವೇಳೆ ಆಯುಷ್ ಬದೋನಿ 59 ರನ್‌ ಮತ್ತು ಕೃಷ್ಣಪ್ಪ ಗೌತಮ್ ಒಂದು ರನ್‌ಗಳಿಸಿ ಕ್ರೀಸ್‌ನಲ್ಲಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತತವಾಗಿ ಮಳೆ ಸುರಿದ ಕಾರಣ ರೆಫ್ರಿ ಪಂದ್ಯವನ್ನು ರದ್ದುಗೊಳಿಸಿದ ನಿರ್ಧಾರ ಪ್ರಕಟಿಸಿದರು. ಇದರಿಂದಾಗಿ ಸಿಎಸ್‌ಕೆ ಅನಿವಾರ್ಯವಾಗಿ ಲಕ್ನೋದ ಜೊತೆ ಅಂಕವನ್ನು ಹಂಚಿಕೊಳ್ಳಬೇಕಾಯಿತು.

ಈ ಸುದ್ದಿ ಓದಿದ್ದೀರಾ? : ಐಪಿಎಲ್ 2023 | ಕೊಹ್ಲಿ– ಗಂಭೀರ್‌ ನಡುವೆ ವಾಗ್ವಾದ; ಬಿಸಿಸಿಐನಿಂದ ಇಬ್ಬರಿಗೂ ಶೇ. 100 ದಂಡ

ಮೊದಲ 10 ಓವರ್‌ಗಳಲ್ಲಿ ಲಕ್ನೋ 44  ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಜೊತೆಗೂಡಿದ ಆಯುಷ್‌ ಬದೋನಿ ಮತ್ತು ನಿಕಲಸ್‌ ಪೂರನ್‌ ತಂಡವನ್ನು ನಿಧಾನಗತಿಯಲ್ಲಿ ಚೇತರಿಕೆಯತ್ತ ಕೊಂಡೊಯ್ದರು.

31 ಎಸೆತಗಳಲ್ಲಿ 21 ರನ್‌ಗಳಿಸಿ ಪೂರನ್‌ ನಿರ್ಗಮಿಸಿದರೆ, ಬದೋನಿ 59 ರನ್‌ ಗಳಿಸಿ (33 ಎಸೆತ 4×2 6×4) ಅಜೇಯರಾಗುಳಿದರು.

ಸಿಎಸ್‌ಕೆ ಪರ ಸ್ಪಿನ್ನರ್‌ಗಳಾದ ಮೊಯಿನ್‌ ಅಲಿ, ಮಹೇಶ್‌ ತೀಕ್ಷಣ ಹಾಗೂ ವೇಗಿ ಮಥೀಶಾ ಪತಿರಾನ ತಲಾ 2 ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...