ಐಪಿಎಲ್ 2023 | ಸತತ ಸೋಲಿನ ಸುಳಿಯಿಂದ ಪಾರಾಗುವುದೇ ಕೆಕೆಆರ್ ?

Date:

  • ಆರು ಪಂದ್ಯಗಳಲ್ಲಿ ನಾಲ್ಕು ಸೋತು ಎರಡರಲ್ಲಿ ಜಯ ದಾಖಲಿಸಿರುವ ಕೆಕೆಆರ್
  • ನಾಲ್ಕು ಗೆಲುವು ಸಾಧಿಸಿ ವಿಶ್ವಾಸದಲ್ಲಿರುವ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್  

ಸತತ 3 ಪಂದ್ಯಗಳಲ್ಲಿ ಸೋತು ಒತ್ತಡಕ್ಕೆ ಸಿಲುಕಿರುವ ನಿತೀಶ್ ರಾಣಾ ನೇತೃತ್ವದ ಕೆಕೆಆರ್ ತಂಡ ಭಾನುವಾರ (ಏ.23) ಐಪಿಎಲ್‌ 16ನೇ ಆವೃತ್ತಿಯ 33ನೇ ಪಂದ್ಯದಲ್ಲಿ ತವರು ಕ್ರೀಡಾಂಗಣ ಈಡನ್‌ ಗಾರ್ಡನ್‌ನಲ್ಲಿ ಬಲಿಷ್ಠ ಚೆನ್ನೈ ತಂಡವನ್ನು ಎದುರಿಸಲಿದೆ.

ಕೆಕೆಆರ್ ಈ ಆವೃತ್ತಿಯಲ್ಲಿ 6 ಪಂದ್ಯಗಳನ್ನಾಡಿದೆ. ಮೊದಲ ಪಂದ್ಯ ಪಂಜಾಬ್‌ ವಿರುದ್ಧ ಸೋತರೂ ಆರ್‌ಸಿಬಿ, ಗುಜರಾತ್‌ ಟೈಟಾನ್ಸ್ ವಿರುದ್ಧ ಗೆಲುವುಗಳಿಸಿ ವಿಶ್ವಾಸ ಮೂಡಿಸಿತ್ತು. ಆದರೆ ನಂತರದ ಮೂರು ಪಂದ್ಯಗಳಲ್ಲಿ ಹೈದರಾಬಾದ್‌ ಸನ್‌ ರೈಸರ್ಸ್‌, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪರಾಭವಗೊಂಡಿದೆ.

ಕೆಕೆಆರ್‌ ಮಧ್ಯಮ ಕ್ರಮಾಂಕವೂ ದುರ್ಬಲವಾಗಿದೆ. ತಂಡಕ್ಕಿರುವ ಮತ್ತೊಂದು ದೊಡ್ಡ ಸಮಸ್ಯೆ ವೇಗದ ಬೌಲಿಂಗ್‌. 6 ಪಂದ್ಯಗಳಲ್ಲಿ ಕೆಕೆಆರ್‌ ವೇಗಿಗಳು ಒಟ್ಟಾರೆ ಕೇವಲ 9 ವಿಕೆಟ್‌ ಪಡೆದು, 11.3ರ ರನ್‌ ಸರಾಸರಿಯಲ್ಲಿ ರನ್‌ ಬಿಟ್ಟುಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಕೆಆರ್‌ ತಂಡ ಬ್ಯಾಟಿಂಗ್‌ನಲ್ಲಿ ಹೆಚ್ಚಾಗಿ ವೆಂಕಟೇಶ್ ಅಯ್ಯರ್, ನಾಯಕ ನಿತೀಶ್ ರಾಣಾ ಹಾಗೂ ರಿಂಕು ಸಿಂಗ್ ಅವರನ್ನು ನೆಚ್ಚಿಕೊಂಡಿದೆ. ವಿದೇಶಿ ಆಟಗಾರರಾದ ಜೇಸನ್ ರಾಯ್ ಹಾಗೂ ಆಂಡ್ರೆ ರಸೆಲ್‌ ಜವಾಬ್ದಾರಿಯುತ ಆಟ ಪ್ರದರ್ಶಿಸಬೇಕಿದೆ. ಸ್ಪಿನ್ನರ್‌ಗಳಾದ ಸುನಿಲ್‌ ನರೈನ್‌, ವರುಣ್‌ ಚಕ್ರವರ್ತಿ ಜತೆಗೆ ಅನುಕೂಲ್ ರಾಯ್ ಕೂಡ ಚೆನ್ನೈ ಬ್ಯಾಟ್ಸ್‌ಮನ್‌ಗಳನ್ನು ಸದೆಬಡಿಯಲು ಸಜ್ಜಾಗಬೇಕಿದೆ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2023 | ಚೆನ್ನೈvs ಎಸ್​ಆರ್​ಎಚ್​; ಧೋನಿ ಪಡೆಗೆ 7 ವಿಕೆಟ್ ಭರ್ಜರಿ ಜಯ

ಮತ್ತೊಂದೆಡೆ ಚೆನ್ನೈ ತಂಡ ಆಡಿರುವ ಆರು ಪಂದ್ಯಗಳಲ್ಲಿ ಎರಡು ಪಂದ್ಯ ಸೋತು ನಾಲ್ಕರಲ್ಲಿ ಜಯಗಳಿಸಿ ಉತ್ತಮ ಫಾರ್ಮ್‌ನಲ್ಲಿದೆ. ಸಂಘಟಿತ ಆಟದೊಂದಿಗೆ ಎದುರಾಳಿ ತಂಡಕ್ಕೆ ಪೆಟ್ಟು ನೀಡುತ್ತಿದೆ.

ಡೆವೊನ್‌ ಕಾನ್‌ವೇ ಸತತ ಮೂರು ಅರ್ಧಶತಕ ಸಿಡಿಸಿದ್ದು, ತಂಡದ ಬ್ಯಾಟಿಂಗ್‌ ಆಧಾರಸ್ತಂಭವಾಗಿದ್ದಾರೆ. ಕಾನ್‌ವೇ ಜತೆಗೆ ಋತುರಾಜ್ ಗಾಯಕ್ವಾಡ್, ಮೋಯಿನ್ ಅಲಿ, ಶಿವಂ ದುಬೆ, ಅಜಿಂಕ್ಯ ರಹಾನೆ ಕೂಡ ಯಾವುದೇ ಸಂದರ್ಭದಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ. ರವೀಂದ್ರ ಜಡೇಜಾ ಹಾಗೂ ನಾಯಕ ಮಹೇಂದ್ರ ಸಿಂಗ್‌ ಧೋನಿ ಗೆಲುವಿನ ರುವಾರಿಗಳಾಗಿದ್ದಾರೆ. ಯುವ ವೇಗಿ ಪತಿರಣ ಹಾಗೂ ಸ್ಪಿನ್ನರ್ ಮಹೀಶ್ ತೀಕ್ಷಣ ಎದುರು ರನ್‌ಗಳಿಸಲು ಕೆಕೆಆರ್ ಬ್ಯಾಟ್ಸಮನ್‌ಗಳು ಎಚ್ಚರಿಕೆಯ ಆಟವಾಡಬೇಕಿದೆ.

ಪಿಚ್‌ ರಿಪೋರ್ಟ್

ಈಡನ್‌ ಗಾರ್ಡನ್ಸ್‌ನಲ್ಲಿ ಈ ವರ್ಷ  4 ಇನ್ನಿಂಗ್ಸ್‌ಗಳಲ್ಲಿ 3 ಬಾರಿ 200ಕ್ಕೂ ಹೆಚ್ಚು ಮೊತ್ತ ದಾಖಲಾಗಿದೆ. ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟ್‌ ಮಾಡಿದ ತಂಡ ಗೆದ್ದಿದೆ. ಸ್ಪಿನ್ನರ್‌ಗಳಿಗೆ ತಕ್ಕಮಟ್ಟಿನ ನೆರವು ಸಿಗಬಹುದು.

ಒಟ್ಟು ಮುಖಾಮುಖಿ: 26

ಚೆನ್ನೈ: 17

ಕೆಕೆಆರ್: 09

ಆಡುವ ಹನ್ನೊಂದರ ಬಳಗ

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ಋುತುರಾಜ್‌ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೋಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಎಂ ಎಸ್ ಧೋನಿ (ನಾಯಕ), ಪತಿರನ, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ, ಆಕಾಶ್‌.

ಕೋಲ್ಕತಾ ನೈಟ್ ರೈಡರ್ಸ್: ಜೇಸನ್ ರಾಯ್‌, ಲಿಟನ್‌ ದಾಸ್, ವೆಂಕಟೇಶ್ ಅಯ್ಯರ್‌, ನಿತೀಶ್ ರಾಣಾ(ನಾಯಕ), ಮಂದೀಪ್‌ ಸಿಂಗ್, ಆಂಡ್ರೆ ರಸೆಲ್‌, ರಿಂಕು ಸಿಂಗ್, ಸುನಿಲ್‌ ನರೇನ್‌, ಶಾರ್ದೂಲ್‌ ಠಾಕೂರ್, ಉಮೇಶ್‌ ಯಾದವ್, ವರುಣ್‌ ಚಕ್ರವರ್ತಿ.

ಪಂದ್ಯ ಆರಂಭ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...