ಐಪಿಎಲ್‌ 2023 | ಮುಂಬೈ vs ಚೆನ್ನೈ; ವಾಂಖೆಡೆಯಲ್ಲಿಂದು ʻಎಲ್‌ ಕ್ಲಾಸಿಕೊʼ

Date:

ಐಪಿಎಲ್‌ 16ನೇ ಆವೃತ್ತಿಯ ಬಹು ನಿರೀಕ್ಷಿತ ಬದ್ಧ ವೈರಿಗಳ ʻಎಲ್‌ ಕ್ಲಾಸಿಕೊʼ ಕದನಕ್ಕೆ ಶನಿವಾರ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.

ಐಪಿಎಲ್‌ ಟೂರ್ನಿಯ ಅತ್ಯಂತ ಯಶಸ್ವಿ ತಂಡಗಳಾದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ ಮತ್ತು 4 ಬಾರಿಯ ಚಾಂಪಿಯನ್‌ ಚೆನ್ನೈ ಸೂಪರ್‌ಕಿಂಗ್ಸ್‌ ತಂಡಗಳು ಇಂದು ಮುಂಬೈನಲ್ಲಿ ರಾತ್ರಿ ಮುಖಾಮುಖಿಯಾಗಲಿವೆ.

ಪ್ರಸಕ್ತ ಟೂರ್ನಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನಾಡಿರುವ ಚೆನ್ನೈ ತಲಾ ಒಂದು ಗೆಲುವು ಮತ್ತು ಸೋಲು ಕಂಡಿದೆ. ಮತ್ತೊಂದೆಡೆ ಮುಂಬೈ, ಬೆಂಗಳೂರಿನಲ್ಲಿ ಆಡಿದ ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಹೀನಾಯ ಸೋಲು ಕಂಡಿತ್ತು. 5 ದಿನಗಳ ವಿಶ್ರಾಂತಿಯ ಬಳಿಕ ತವರಿನ ಅಭಿಮಾನಗಳೆದುರು ಮೈದಾನಕ್ಕಿಳಿಯುತ್ತಿರುವ ಇಂಡಿಯನ್ಸ್‌ ಗೆಲುವಿನ ಲಯಕ್ಕೆ ಮರಳುವ ನಿರೀಕ್ಷೆಯಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹೇಂದ್ರ ಸಿಂಗ್ಸ್‌ ಧೋನಿ ಮತ್ತು ರೋಹಿತ್‌ ಶರ್ಮ ಮುಖಾಮುಖಿಯಾಗುತ್ತಿರುವುದು ಇಂದಿನ ಪಂದ್ಯದ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿಮಾನಿಗಳ ನೆಚ್ಚಿನ ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪಂದ್ಯ ನಡೆಯುವ ನಿರೀಕ್ಷೆ ಹೆಚ್ಚಾಗಿದೆ. ಮೇಲ್ನೋಟಕ್ಕೆ ತವರಿನಂಗಳದಲ್ಲಿ ರೋಹಿತ್‌ ಪಡೆ ಒತ್ತಡದಲ್ಲಿದೆ. ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಮುಂಬೈನ ಬ್ಯಾಟಿಂಗ್‌-ಬೌಲಿಂಗ್‌ ದೌರ್ಬಲ್ಯ ಸ್ಪಷ್ಟವಾಗಿ ಗೋಚರಿಸಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಬೆಟ್ಟಿಂಗ್ ದಂಧೆಯಲ್ಲಿ ಬೇಯುತ್ತಿರುವ ದೇಶ; ಅಮೃತಕಾಲ-ವಿಶ್ವಗುರು ಜಪಿಸುತ್ತಿರುವ ಬಿಜೆಪಿ

ಚೆನ್ನೈಗೆ ಋತುರಾಜ್‌ ಬಲ

ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನೇ ಚೆನ್ನೈ ಬಹುವಾಗಿ ನೆಚ್ಚಿಕೊಂಡಿದೆ. ಆರಂಭಿಕ ಋತುರಾಜ್‌ ಮೊದಲೆರಡು ಪಂದ್ಯಗಳಲ್ಲಿ ಕ್ರಮವಾಗಿ 92 ಮತ್ತು 57 ರನ್‌ಗಳಿಸಿರುವುದು ತಂಡಕ್ಕೆ ಬಲ ತುಂಬಿದೆ. 8 ಮಂದಿ ಬ್ಯಾಟರ್‌ಗಳು ತಂಡದಲ್ಲಿದ್ದಾರೆ. ಆದರೆ ಬೌಲಿಂಗ್‌ ವಿಭಾಗಕ್ಕೆ ರನ್‌ ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಪಂದ್ಯದಲ್ಲಿ ಮಿಂಚಿದ್ದ ಸ್ಪಿನ್ನರ್‌ ಮೊಯಿನ್‌ ಅಲಿ, ತನ್ನ 4 ಓವರ್‌ಗಳ ದಾಳಿಯಲ್ಲಿ 26 ರನ್‌ ನೀಡಿ 4 ಪ್ರಮುಖ ವಿಕೆಟ್‌ ಪಡೆಯುವ ಮೂಲಕ ಗೆಲುವಿನ ರುವಾರಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...