ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈ ವೋಲ್ಟೇಜ್ ಪಂದ್ಯ

Date:

ಐಪಿಎಲ್ 16ನೇ ಆವೃತ್ತಿಯಲ್ಲಿ ಅತ್ಯಂತ ಕುತೂಹಲ ಕೆರಳಿಸಿರುವ ಪಂದ್ಯ ಸೋಮವಾರ [ ಏಪ್ರಿಲ್ 17] ನಡೆಯಲಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಹೈ ವೋಲ್ಟೇಜ್ ಕದನದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು- ಆರ್‌ಸಿಬಿ ಮತ್ತು ಎಂಎಸ್ ಧೋನಿ ಸಾರಥ್ಯದ ಬಲಿಷ್ಠ ಚೆನೈ ಸೂಪರ್ ಕಿಂಗ್ಸ್ – ಸಿಎಸ್‌ಕೆ ತಂಡಗಳು ಮುಖಾಮುಖಿಯಾಗಲಿವೆ.

ಘಟಾನುಘಟಿ ಬ್ಯಾಟಿಂಗ್ ಲೈನ್ ಅಪ್ ಹೊಂದಿರುವ ಚೆನ್ನೈ ತಂಡ ಮೇಲ್ನೋಟಕ್ಕೆ ಪಂದ್ಯ ಗೆಲ್ಲುವ ನೆಚ್ಚಿನ ತಂಡವಾಗಿ ಕಾಣಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿರುವ ಡುಪ್ಲೆಸಿಸ್ ತಂಡ ಸಿಎಸ್‌ಕೆ ವಿರುದ್ಧವೂ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.

ಮಾಜಿ‌ ನಾಯಕ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಕಳೆದ ನಾಲ್ಕು ಪಂದ್ಯಗಳಲ್ಲಿ 3 ಅರ್ಧ ಶತಕ ಗಳಿಸಿ ಉತ್ತಮ ಫಾರ್ಮ್‌ನಲ್ಲಿರುವುದು ಆರ್‌ಸಿಬಿ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಿರ್ಣಾಯಕ ರನ್‌ಗಳಿಸುವ ಮೂಲಕ ತಂಡಕ್ಕೆ ನೆರವಾಗುತ್ತಿದ್ದಾರೆ.

ಆದರೆ ಕಳೆದ ಋತುವಿನಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚು ಹರಿಸಿದ್ದ ವಿಕೆಟ್‌ ಕೀಪರ್‌ ಹಾಗೂ ಫಿನಿಶರ್‌ ದಿನೇಶ್‌ ಕಾರ್ತಿಕ್‌, ಈ ಆವೃತ್ತಿಯಲ್ಲಿ ಇದುವರೆಗೂ ಆಡಿದ ನಾಲ್ಕು ಪಂದ್ಯಗಳಲ್ಲಿ ಒಟ್ಟು 10 ರನ್ [0, 9, 1, 0] ಗಳಿಸಲಷ್ಟೇ ಶಕ್ತರಾಗಿದ್ದಾರೆ. ಹಿನ್ನೆಲೆಯಲ್ಲಿ

ಈ ಹಿನ್ನೆಲೆಯಲ್ಲಿ ಇಂದಿನ ಮಹತ್ವದ ಪಂದ್ಯದಲ್ಲಿ ಫಾರ್ಮ್ ಕಂಡುಕೊಳ್ಳುವುದು ಕಾರ್ತಿಕ್ ಪಾಲಿಗೆ ಅನಿವಾರ್ಯವಾಗಿದೆ‌.

ಉಭಯ ತಂಡಗಳು ಪ್ರಸಕ್ತ ಟೂರ್ನಿಯಲ್ಲಿ ತಲಾ ನಾಲ್ಕು ಪಂದ್ಯಗಳನ್ನಾಡಿವೆ. ಇದರಲ್ಲಿ ತಲಾ 2 ಸೋಲು ಮತ್ತು ಗೆಲುವು ಕಂಡಿವೆ. ಸೋಮವಾರ ತವರಿನ ಅಂಗಣದಲ್ಲಿ ಆರ್‌ಸಿಬಿ ಸತತ 2ನೇ ಗೆಲುವನ್ನು ಎದುರು ನೋಡುತ್ತಿದೆ.

ರಾಜಸ್ಥಾನ ರಾಯಲ್ಸ್‌ ವಿರುದ್ಧದ ಕೊನೆಯ ಪಂದ್ಯದಲ್ಲಿ ಚೆನೈ ನಾಯಕ ಎಂಎಸ್ ಧೋನಿ ಅಂತಿಮ ಎಸೆತದವರೆಗೂ ಗೆಲುವಿಗಾಗಿ ಹೋರಾಟ ನಡೆಸಿದ್ದರು. ಆದಾಗ್ಯೂ ತಂಡದ 2ನೇ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಆದರೆ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸೋಮವಾರ ಧೋನಿ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದಾರೆ. ಡೆವೊನ್‌ ಕಾನ್ವೆ , ಋತುರಾಜ್‌ ಗಾಯಕ್ವಾಡ್‌ ಮತ್ತು ಅಜಿಂಕ್ಯ ರಹಾನೆ ಉತ್ತಮ ಫಾರ್ಮ್‌ನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...