ಐಪಿಎಲ್‌ 2023 | ಅಂತಿಮ ಎಸೆತದಲ್ಲಿ ʻನೋ ಬಾಲ್‌ ಡ್ರಾಮʼ; ಸೋತು ಗೆದ್ದ ಹೈದರಾಬಾದ್!

Date:

ನಾಟಕೀಯ ತಿರುವು ಪಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಹೈದರಾಬಾದ್‌ 4 ವಿಕೆಟ್‌ಗಳ ವೀರೋಚಿತ ಜಯ ಸಾಧಿಸಿದೆ.

ಜೈಪುರದಲ್ಲಿ ಭಾನುವಾರ ನಡೆದ ಡಬಲ್‌ ಹೆಡ್ಡರ್‌ʼನ ಎರಡನೇ ಪಂದ್ಯ ಆತಿಥೇಯ ರಾಜಸ್ಥಾನ ರಾಯಲ್ಸ್‌ ತಂಡದ ಪಾಲಿಗೆ ʻಕೈಗೆ ಬಂದ ತುತ್ತು ಬಾಯಿಗೆ ಇಲ್ಲʼ ಎಂಬಂತಾಯಿತು.

ವಿಕೆಟ್-ನೋಬಾಲ್-ಸಿಕ್ಸರ್!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

215 ರನ್‌ ಗುರಿ ಬೆನ್ನಟ್ಟುವ ವೇಳೆ ಹೈದರಾಬಾದ್‌ ಗೆಲುವಿಗೆ ಅಂತಿಮ ಎಸೆತದಲ್ಲಿ 5 ರನ್‌ಗಳ ಅಗತ್ಯವಿತ್ತು. ಸ್ಟ್ರೈಕ್‌ನಲ್ಲಿದ್ದ ಸಮದ್‌ ಲಾಂಗ್‌ ಆಫ್‌ಗೆ ಬಾರಿಸಿದ್ದ ಚೆಂಡನ್ನು ಕ್ಷೇತ್ರರಕ್ಷಣೆಯಲ್ಲಿದ್ದ ಜಾಸ್‌ ಬಟ್ಲರ್‌ ಸುಲಭವಾಗಿಯೇ ಕ್ಯಾಚ್‌ ಹಿಡಿದಿದ್ದರು.

ರಾಯಲ್ಸ್‌ ಪಾಳಯದಲ್ಲಿ ವಿಜಯೋತ್ಸವ ಪ್ರಾರಂಭವಾಗುತ್ತಲೇ ಮೈದಾನದಲ್ಲಿ ʻನೋ ಬಾಲ್‌ ಸೈರನ್‌ʼ ಮೊಳಗಿತ್ತು. ಸಂದೀಪ್‌ ಶರ್ಮಾ ಎಸೆದ ಅಂತಿಮ ಎಸೆತ ನೋ ಬಾಲ್‌ ಏಂಬುದು ರೀಪ್ಲೇನಲ್ಲಿ ಸ್ಪಷ್ಟವಾಗಿತ್ತು. ಹೀಗಾಗಿ ಶರ್ಮಾ ಹೆಚ್ಚುವರಿಯಾಗಿ ಬೌಲ್‌ ಮಾಡಬೇಕಾಯಿತು.

ಫ್ರೀ ಹಿಟ್‌ ಅವಕಾಶವಿದ್ದ ಎಸೆತದಲ್ಲಿ ಹೈದರಾಬಾದ್‌ ಗೆಲುವಿಗೆ  4 ರನ್‌ಗಳ ಅಗತ್ಯವಿತ್ತು. ಮೂರು ರನ್‌ ಪಡೆದರೆ ಪಂದ್ಯ ಟೈ ಆಗುತ್ತಿತ್ತು. ಆದರೆ ಯಾವುದರ ತೆಲನೋವು ಬೇಡ ಎಂಬಂತೆ ಸಂದೀಪ್‌ ಶರ್ಮಾ ಎಸೆದ ಬಹುತೇಕ ಯಾರ್ಕರ್‌ ಎಸೆತವನ್ನು ಸಮದ್‌ ಸುಂದರವಾಗಿ ಸಿಕ್ಸರ್‌ಗೆ ಅಟ್ಟಿದರು. ಅಲ್ಲಿಗೆ ರಾಜಸ್ಥಾನ ‘ಗೆದ್ದ’ ಪಂದ್ಯವನ್ನು ಯಾರೂ ನಿರೀಕ್ಷಿಸದ ರೀತಿಯಲ್ಲಿ ಹೈದರಾಬಾದ್‌ ತನ್ನದಾಗಿಸಿಕೊಂಡಿತು.

ಅಂತಿಮ ಎಸೆತ ನೋಬಾಲ್‌ ಅಲ್ಲದೆ ಒಂದು ರನೌಟ್‌ ಅವಕಾಶ ಮತ್ತು ಎರಡು ಸುಲಭ ಕ್ಯಾಚ್‌ (ಮೆಕಾಯ್‌ ಮತ್ತು ಸಂಜು ಸ್ಯಾಮ್ಸನ್‌) ಅವಕಾಶಗಳನ್ನು ಕೈಚೆಲ್ಲಿದ್ದು ರಾಜಸ್ಥಾನ ಪಾಲಿಗೆ ಮುಳುವಾಯಿತು.

ಅಂತಿಮ ಎರಡು ಓವರ್‌ಗಳಲ್ಲಿ 43 ರನ್‌!

18 ಓವರ್‌ಗಳ ಮುಕ್ತಾಯಕ್ಕೆ ಹೈದರಾಬಾದ್‌ ತಂಡ 5 ವಿಕೆಟ್‌ ನಷ್ಟದಲ್ಲಿ 174 ರನ್‌ಗಳಿಸಿತ್ತು. ಇನ್ನುಳಿದ ಕೊನೆಯ 12 ಎಸೆತಗಳಲ್ಲಿ 41 ರನ್‌ಗಳಿಸಬೇಕಾದ ಕಠಿಣ ಗುರಿ ಎಸ್‌ಆರ್‌ಎಚ್‌ ಮುಂದಿತ್ತು. ಆದರೆ 19ನೇ ಓವರ್‌ ಎಸೆದ ಕುಲ್ದಿಪ್‌ ಯಾದವ್‌ ಅವರ ಮೊದಲ ಮೂರು ಎಸೆತಗಳನ್ನು ಫಿಲಿಪ್ಸ್‌ ಹ್ಯಾಟ್ರಿಕ್‌ ಸಿಕ್ಸರ್‌ಗೆ ಟ್ಟಿದರು. ನಂತರದ ಎಸೆತದಲ್ಲಿ ಬೌಂಡರಿಯೂ ದಾಖಲಾಯಿತು. ಹೀಗಾಗಿ ಕೊನೆಯ ಓವರ್‌ನಲ್ಲಿ ಗೆಲುವಿನ ಗುರಿ 17 ಆಗಿತ್ತು.  

ಇದಕ್ಕೂ ಮೊದಲು ತವರು ಅಭಿಮಾನಿಗಳೆದುರು ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆರ್‌ಆರ್‌ ತಂಡ ಆರಂಭಿಕ ಜಾಸ್‌ ಬಟ್ಲರ್‌ 95 ರನ್‌ (59 ಎಸೆತ 4×10, 6×4) ಮತ್ತು ನಾಯಕ ಸಂಜು ಸ್ಯಾಮ್ಸನ್‌ ಗಳಿಸಿದ ಬಿರುಸಿನ ಅರ್ಧಶತಕಗಳ (66 ರನ್‌, 38 ಎಸೆತ, 4×4, 6×5) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟದಲ್ಲಿ 214 ರನ್‌ ಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...