ಐಪಿಎಲ್‌ 2023 | ಆರ್‌ಸಿಬಿ ತಂಡಕ್ಕೆ ಕನ್ನಡಿಗ ರಾಹುಲ್‌ ಪಡೆ ಸವಾಲು

Date:

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಭರ್ಜರಿ ಆರಂಭಪಡೆದ ಆರ್‌ಸಿಬಿ ಕೆಕೆಆರ್‌ಗೆ ಹೀನಾಯವಾಗಿ ಸೋತಿತ್ತು.

ಐಪಿಎಲ್​ 16ನೇ ಆವೃತ್ತಿಯ 15ನೇ ಪಂದ್ಯದಲ್ಲಿ ಸೋಮವಾರ (ಏಪ್ರಿಲ್‌ 10) ಆರ್‌ಸಿಬಿ ಕಣಕ್ಕಿಳಿಯಲಿದೆ. ತವರು ಮೈದಾನದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಲಕ್ನೋ ಸೂಪರ್ ಜೈಂಟ್ಸ್‌ ಸವಾಲನ್ನು ಎದುರಿಸಲಿದೆ.

ಐಪಿಎಲ್‌ ಪ್ರಸಕ್ತ ಆವೃತ್ತಿಯಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್​ ತಂಡವನ್ನು ಮಣಿಸುವ ಮೂಲಕ ಆರ್‌ಸಿಬಿ ಭರ್ಜರಿ ಆರಂಭ ಪಡೆದಿತ್ತು. ಆದರೆ ಈಡನ್​ ಗಾರ್ಡನ್​ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಹೀನಾಯ ಸೋಲನುಭವಿಸಿತ್ತು. ಇಂದು ಮತ್ತೆ ತವರು ಮೈದಾನದಲ್ಲಿ ಫಾಫ್​ ನೇತೃತ್ವದ ಹುಡುಗರು, ಕನ್ನಡಿಗ ಕೆಎಲ್​ ರಾಹುಲ್​ ಸಾರಥ್ಯದ ಎಲ್‌ಎಸ್‌ಜಿ  ಪಾಳಯವನ್ನು ಎದುರಿಸಲು ಸಜ್ಜಾಗಿದ್ದಾರೆ. ಈ ಪಂದ್ಯದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದ್ದು, ಅಮೋಘ ಫಾರ್ಮ್‌ನಲ್ಲಿರುವ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ಶತಕ ನಿರೀಕ್ಷೆಯಲ್ಲಿದ್ದಾರೆ.

ಕಳೆದ ಎರಡೂ ಪಂದ್ಯಗಳಲ್ಲಿ ಆರ್​ಸಿಬಿ ಅಂತಿಮ 5  ಓವರ್​ಗಳಲ್ಲಿ ಧಾರಾಳವಾಗಿ ರನ್​ಗಳನ್ನು ಬಿಟ್ಟುಕೊಟ್ಟಿದೆ. ಮೊದಲ ಪಂದ್ಯದಲ್ಲಿ ತಿಲಕ್​ ವರ್ಮ ಡೆತ್​ ಓವರ್​ಗಳಲ್ಲಿ ಸವಾರಿ ಮಾಡಿದರೆ, ಕೋಲ್ಕತ್ತಾ ಪಂದ್ಯದಲ್ಲಿ ಶಾರ್ದೂಲ್​ ಠಾಕೂರ್​ ಮನ ಬಂದಂತೆ ಆರ್‌ಸಿಬಿ ಬೌಲರ್‌ಗಳನ್ನು ದಂಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ರಿಂಕು ಸಿಂಗ್‌ ಸಿಕ್ಸರ್‌ಗಳ ಸುರಿಮಳೆ; ಗುಜರಾತ್‌ಗೆ ಮೊದಲ ಸೋಲು   

ಆರ್‌ಸಿಬಿಗೆ ಮೇಯರ್ಸ್ ಚಿಂತೆ

ಆರಂಭಿಕ ಕೈಲ್ ಮೇಯರ್ಸ್ ಅಬ್ಬರದ ಆಟ ಎಲ್​ಎಸ್​ಜಿಯ ಬ್ಯಾಟಿಂಗ್​ಗೆ ಬಲವಾಗಿದೆ. ಅವರು ಎರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದಾರೆ. ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯ್ನಿಸ್‌, ಕ್ವಿಂಟನ್ ಡಿ ಕಾಕ್ ತಂಡದ ಪ್ರಮುಖ ಬ್ಯಾಟರ್‌ಗಳಾಗಿದ್ದಾರೆ.

ಆರ್​ಸಿಬಿ ವಿರುದ್ಧದ ಪಂದ್ಯಗಳಲ್ಲಿ ತವರು ಮೈದಾನದ ಲಾಭ ಪಡೆದು ಕೆ ಎಲ್‌ ರಾಹುಲ್‌ ಉತ್ತಮವಾಗಿ ಬ್ಯಾಟ್‌ ಬೀಸಿದ್ದಾರೆ. ಹೀಗಾಗಿ ಆರ್​ಸಿಬಿ ವಿರುದ್ಧ ಮತ್ತೆ ರಾಹುಲ್​ ಅಬ್ಬರಿಸುವ ಸಾಧ್ಯತೆ ಇದೆ.

ಸಂಭಾವ್ಯ ತಂಡಗಳು

ರಾಯಲ್​ ಚಾಲೆಂಜರ್ಸ್​ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಮೈಕೆಲ್ ಬ್ರೇಸ್‌ವೆಲ್, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಕರ್ಣ್ ಶರ್ಮಾ, ಮುಹಮ್ಮದ್ ಸಿರಾಜ್

ಲಕ್ನೋ ಸೂಪರ್​ ಜೈಂಟ್ಸ್​​: ಕೆಎಲ್ ರಾಹುಲ್, ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೋಯ್ನಿಸ್/ ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ಕೆ ಗೌತಮ್/ ಅಮಿತ್ ಮಿಶ್ರಾ, ಯಶ್ ಠಾಕೂರ್, ಅವೇಶ್ ಖಾನ್/ ಜಯದೇವ್ ಉನಾದ್ಕತ್, ಮಾರ್ಕ್ ವುಡ್, ರವಿ ಬಿಷ್ಣೋಯ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...