ಆರ್‌ಸಿಬಿ ʻಅನ್‌ಬಾಕ್ಸ್‌ʼ; ಜೆರ್ಸಿ ಬಿಡುಗಡೆ, ಎಬಿಡಿ-ಗೇಲ್‌ ʻಹಾಲ್‌ ಆಫ್‌ ಫೇಮ್‌ʼ

Date:

ಐಪಿಎಲ್‌ನ 16ನೇ ಆವೃತ್ತಿಗೆ ಮುನ್ನುಡಿಯಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್‌ಸಿಬಿ ಹೊಸ ಜೆರ್ಸಿ ಬಿಡುಗಡೆ ಮಾಡಿದೆ.

ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಟೀಮ್‌ ಕ್ಯಾಪ್ಟನ್‌ ಫಾಫ್‌ ಡುಪ್ಲೆಸ್ಸಿಸ್‌ ಮತ್ತು ವಿರಾಟ್‌ ಕೊಹ್ಲಿ ಹೊಸ ವಿನ್ಯಾಸದ ಜೆರ್ಸಿಯನ್ನು ಅನಾವರಣಗೊಳಿಸಿದರು. ಖ್ಯಾತ ವಾಯುಯಾನ ಸೇವಾ ಸಂಸ್ಥೆ ಕತಾರ್‌ ಏರ್‌ವೇಸ್‌ ಆರ್‌ಸಿಬಿಯ ನೂತನ ಟೈಟಲ್ ಪ್ರಾಯೋಜಕತ್ವ ವಹಿಸಿದೆ.

ʻಆರ್‌ಸಿಬಿ ಅನ್‌ಬಾಕ್ಸ್‌ʼ ಹೆಸರಿನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ತಂಡದ ಮಾಜಿ ದಿಗ್ಗಜ ಆಟಗಾರರಾದ ಎಬಿಡಿ ವಿಲಿಯರ್ಸ್‌ ಮತ್ತು ಕ್ರಿಸ್‌ ಗೇಲ್‌ ಅವರಿಗೆ ʻಹಾಲ್‌ ಆಫ್‌ ಫೇಮ್‌ʼ ಗೌರವ ಸಮರ್ಪಿಸಲಾಯಿತು. ಫಾಫ್‌ ಡುಪ್ಲೆಸ್ಸಿಸ್‌ ಮತ್ತು ವಿರಾಟ್‌ ಕೊಹ್ಲಿ ಜೊತೆಗೆ ಮ್ಯಾಕ್ಸ್‌ವೆಲ್‌, ಹರ್ಷಲ್‌ ಪಟೇಲ್‌ ಸೇರಿದಂತೆ ಆರ್‌ಸಿಬಿಯ ಪ್ರಮುಖ ಆಟಗಾರರೆಲ್ಲರೂ ʻಅನ್‌ಬಾಕ್ಸ್‌ʼನಲ್ಲಿ ಪಾಲ್ಗೊಂಡಿದ್ದರು ಈ ವೇಳೆ ಗ್ಯಾಲರಿಯಲ್ಲಿ ಕಿಕ್ಕಿರಿದು ತುಂಬಿದ್ದ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು. ಖ್ಯಾತ ಗಾಯಕರಾದ ಸೋನು ನಿಗಮ್ ಮತ್ತು ಜೇಸನ್ ದೇರುಲೋ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿನ್ನಸ್ವಾಮಿ ಮೈದಾನದಲ್ಲಿ ಮೂರು ವರ್ಷಗಳ ಬಳಿಕ  ಇದೇ ಮೊದಲ ಬಾರಿಗೆ ಐಪಿಎಲ್‌ ಪಂದ್ಯಗಳು ನಡೆಯುತ್ತಿವೆ. ಟಿಕೆಟ್‌ ಬೆಲೆ ದುಬಾರಿಯಾಗಿದ್ದರೂ ಸಹ ಅಭಿಮಾನಿಗಳು ಟಿಕೆಟ್‌ ಕೊಳ್ಳಲು ಮುಗಿ ಬೀಳುತ್ತಿದ್ದಾರೆ.

ಏಪ್ರಿಲ್ 2ರಂದು ತವರು ಮೈದಾನದಲ್ಲಿ ಮೊದಲ ಪಂದ್ಯವನ್ನಾಡಲಿರುವ ಆರ್‌ಸಿಬಿ, ಐದು ಬಾರಿಯ ಚಾಂಪಿಯನ್‌ ತಂಡ ಮುಂಬೈ ಇಂಡಿಯನ್ಸ್ ಸವಾಲನ್ನು ಎದುರಿಸಲಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಈವರೆಗಿನ 15 ಆವೃತ್ತಿಗಳಲ್ಲಿ ಆರ್‌ಸಿಬಿ 3 ಬಾರಿ ಫೈನಲ್‌ ಪ್ರವೇಶಿಸಿದ್ದರೂ ಸಹ ಒಮ್ಮೆಯೂ ಚಾಂಪಿಯನ್‌ ಪಟ್ಟವನ್ನೇರಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...