ಐಪಿಎಲ್ 2023 | ಟಾಸ್‌ ಗೆದ್ದ ಚೆನ್ನೈ; ಪ್ಲೇಆಫ್ ತಲುಪಲು ಧೋನಿ ಪಡೆಗೆ ಗೆಲುವು ಅನಿವಾರ್ಯ

Date:

ಐಪಿಎಲ್‌ 2023ರ ಟೂರ್ನಿಯ 67ನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಚೆನ್ನೈ ಸೂಪರ್‌ ಕಿಂಗ್ಸ್ ಬ್ಯಾಟಿಂಗ್‌ ಆಯ್ದುಕೊಂಡಿದೆ.

ದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಚೆನ್ನೈ 15 ಓವರ್‌ಗಳಲ್ಲಿ ಒಂದು ವಿಕೆಟ್ 148 ರನ್‌ ಗಳಿಸಿದೆ. ಋತುರಾಜ್ ಗಾಯಕ್ವಾಡ್ (79) ಹಾಗೂ ಡಿವೊನ್ ಕಾನ್ವೇ (65) ರನ್‌ಗಳಿಸಿದ್ದರು. ಪ್ಲೇಆಫ್​ ಸ್ಥಾನವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಗೆಲುವಿನ ಅನಿವಾರ್ಯತೆ ಹೊಂದಿರುವ ತಂಡವು ಚೆನ್ನೈ ಈಗಾಗಲೇ ಟೂರ್ನಿಯಿಂದ ಎಲಿಮನೇಟ್‌ ಆಗಿರುವ ಡೆಲ್ಲಿ ಪಡೆ ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿದೆ.

ಉಭಯ ತಂಡಗಳು ಒಟ್ಟು 28 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಸಿಎಸ್​ಕೆ 18 ಪಂದ್ಯ, ಡೆಲ್ಲಿ 10 ಪಂದ್ಯಗಳಲ್ಲಿ ಗೆಲುವು ಗಳಿಸಿವೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಬೇಕಾದರೆ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​​​ ತಂಡದ ವಿರುದ್ಧ ಜಯಗಳಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೊಂದೆಡೆ ಟೂರ್ನಿಯನ್ನು ಗೆಲುವಿನೊಂದಿಗೆ ಮುಗಿಸಬೇಕೆಂದು ಯೋಜನೆ ಹಾಕಿಕೊಂಡಿರುವ ಡೆಲ್ಲಿ ತಂಡದಲ್ಲಿ ಸಣ್ಣ ಬದಲಾವಣೆ ಮಾಡಲಾಗಿದ್ದು, ತಂಡಕ್ಕೆ ಲಲಿತ್‌ ಯಾದವ್‌ ಮರಳಿದ್ದಾರೆ. ‌

ಈ ಸುದ್ದಿ ಓದಿದ್ದೀರಾ? ಐಪಿಎಲ್ 2023 | ಪಂಜಾಬ್‌ ವಿರುದ್ಧ ಗೆದ್ದ ಆರ್‌ಆರ್‌ಗೆ ಪ್ಲೇಆಫ್‌ ಆಸೆ ಜೀವಂತ

ಚೆನ್ನೈ ಬ್ಯಾಟಿಂಗ್​ ಅತ್ಯಂತ ಬಲಿಷ್ಠವಾಗಿದ್ದು ಋತುರಾಜ್​ ಗಾಯಕ್ವಾಡ್​, ಡೆವೋನ್​ ಕಾನ್ವೆ, ಅಜಿಂಕ್ಯ ರಹಾನೆ, ಶಿವಂ ದುಬೆ ಉತ್ತಮ ಫಾರ್ಮ್​ನಲ್ಲಿದ್ದಾರೆ. ರವೀಂದ್ರ ಜಡೇಜಾ ಮತ್ತು ಮೊಯಿನ್​ ಅಲಿ ಆಲ್​ರೌಂಡ್​ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿದ್ದಾರೆ. ಬೌಲಿಂಗ್​ನಲ್ಲಿ ತುಷಾರ್​​ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ ಎದುರಾಳಿಗಳಿಗೆ ಬೆವರಿಳಿಸುತ್ತಿದ್ದಾರೆ.

ಪಿಚ್​ ವರದಿ​

ದೆಹಲಿಯ ಅರುಣ್‌ ಜೇಟ್ಲಿ ಮೈದಾನದಲ್ಲಿ ದಾಖಲಾದ ಮೊದಲ ಇನ್ನಿಂಗ್ಸ್ ಸರಾಸರಿ ಮೊತ್ತ 167. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಡೆಲ್ಲಿ ತಂಡವನ್ನು 136 ರನ್‌ಗಳಿಗೆ ಕಟ್ಟಿ ಹಾಕಿತ್ತು. ಮೈದಾನದಲ್ಲಿ ನಡೆದ ಕೊನೆಯ ಪಂದ್ಯದಲ್ಲಿ ಕಳೆದುಕೊಂಡಿದ್ದ 15 ವಿಕೆಟ್‌ಗಳ ಪೈಕಿ 9 ವಿಕೆಟ್‌ಗಳನ್ನು ಸ್ಪಿನ್ನರ್​ಗಳೇ ಪಡೆದಿದ್ದರು.

ಹನ್ನೊಂದರ ಬಳಗದಲ್ಲಿ ಆಡುವ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್​:

ರುತುರಾಜ್ ಗಾಯಕ್ವಾಡ್, ಡಿವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್‌ ಕೀಪರ್), ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ.

ಡೆಲ್ಲಿ ಕ್ಯಾಪಿಟಲ್ಸ್:

ಡೇವಿಡ್ ವಾರ್ನರ್ (ನಾಯಕ), ಯಶ್ ಧುಲ್, ಫಿಲಿಪ್ ಸಾಲ್ಟ್ (ವಿಕೆಟ್‌ ಕೀಪರ್), ರಿಲೀ ರೊಸೊವ್, ಅಮನ್ ಹಕೀಮ್ ಖಾನ್, ಅಕ್ಸರ್ ಪಟೇಲ್, ಲಲಿತ್ ಯಾದವ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಜೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...