ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್ ಗೆಲುವಿನ ಆರಂಭ ಪಡೆದಿದೆ. ಅಹ್ಮದಾಬಾದ್‌ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾರ್ದಿಕ್‌ ಪಡೆ, ನಾಲ್ಕು 4 ಬಾರಿಯ ಚಾಂಪಿಯನ್​​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವವನ್ನು 5 ವಿಕೆಟ್‌ಗಳ ಅಂತರದಲ್ಲಿ ಮಣಿಸಿದೆ.

ಐಪಿಎಲ್‌ನಲ್ಲಿ ಈ ಬಾರಿ ಹೊಸದಾಗಿ ಪರಿಚಯಿಸಲಾಗಿರುವ ʻಇಂಪ್ಯಾಕ್ಟ್‌ ಪ್ಲೇಯರ್‌ʼ ಅವಕಾಶವನ್ನು ಬಳಸಿದ ಮೊದಲ ತಂಡ ಎಂಬ ಶ್ರೇಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತನ್ನದಾಗಿಸಿಕೊಂಡಿದೆ.

ಕ್ಷೇತ್ರರಕ್ಷಣೆಯ ವೇಳೆ ಅಂಬಟಿ ರಾಯುಡು ಬದಲಾಗಿ ಮಧ್ಯಮ ವೇಗಿ ತುಷಾರ್​ ದೇಶಪಾಂಡೆ ಅವರನ್ನು ಕಣಕ್ಕಿಳಿಸಿತು. ಆ ಮೂಲಕ ತುಷಾರ್, ಐಪಿಎಲ್‌ನಲ್ಲಿ ಇತಿಹಾಸದಲ್ಲಿ ಮೊದಲ ‘ಇಂಪ್ಯಾಕ್ಟ್ ಪ್ಲೇಯರ್’ ಎನಿಸಿಕೊಂಡರು. ಇದಾದ ಬಳಿಕ ಗುಜರಾತ್​ ಟೈಟಾನ್ಸ್​, ಗಾಯಾಳು ಕೇನ್‌ ವಿಲಿಯಮ್ಸನ್‌ ಬದಲಿಗೆ ‘ಇಂಪ್ಯಾಕ್ಟ್ ಪ್ಲೇಯರ್’  ಆಗಿ ಸಾಯಿ ಸುದರ್ಶನ್ ಅವರನ್ನು ಸೇರಿಸಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಪ್ಯಾಕ್ಟ್ ಆಗದ ಪ್ಲೇಯರ್ಸ್!​

ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಇಂಪ್ಯಾಕ್ಟ್‌ ಪ್ಲೇಯರ್‌ ಆಯ್ಕೆ ಶುಕ್ರವಾರ ಉಭಯ ತಂಡಗಳಿಗೂ ಪ್ರಯೋಜನವಾಗಲಿಲ್ಲ. ಚೆನ್ನೈ ಪರ 3.2 ಓವರ್ ಬೌಲಿಂಗ್​ ಮಾಡಿದ ದೇಶಪಾಂಡೆ, 51 ರನ್​ ನೀಡಿ ದುಬಾರಿಯಾದರು‌ ಕೇವಲ 1 ವಿಕೆಟ್‌ ಪಡೆಯಲಷ್ಟೇ ಶಕ್ತರಾದರು.

ಜಿಟಿ ತಂಡದಲ್ಲಿ ಸಾಯಿ ಸುದರ್ಶನ್​ ಸಹ ತಮಗೆ ಸಿಕ್ಕಿದ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ವಿಫಲರಾದರು. 17 ಎಸೆತಗಳನ್ನು ಎದುರಿಸಿದ ಸುದರ್ಶನ್ 3 ಬೌಂಡರಿಗನ್ನೊಳಗೊಂಡ 22 ರನ್​ ಗಳಿಸಿದರು.‌

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಆರ್‌ಸಿಬಿ ಪಂದ್ಯದ ಟಿಕೆಟ್‌ಗಳಿಗೆ ತಡರಾತ್ರಿಯಿಂದಲೇ ಕಾದು ಕುಳಿತ ಅಭಿಮಾನಿಗಳು

ಚೆನ್ನೈ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು; ತುಷಾರ್​ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ ಹಾಗೂ ನಿಶಾಂತ್ ಸಿಂಧು.

ಗುಜರಾತ್ ತಂಡದ ಹೆಚ್ಚುವರಿ ಆಟಗಾರರ ಪಟ್ಟಿಯಲ್ಲಿದ್ದವರು;‌ ಜಯಂತ್ ಯಾದವ್, ಮೋಹಿತ್ ಶರ್ಮಾ, ಅಭಿನವ್ ಮನೋಹರ್, ಕೆ ಎಸ್ ಭಾರತ್ ಜೊತೆಗೆ ಬಿ ಸಾಯಿ ಸುದರ್ಶನ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...