ವಿಪರೀತ ಮಳೆ ಹಿನ್ನೆಲೆ : ಬೆಂಗಳೂರಿನಲ್ಲಿ ನಡೆಯಬೇಕಿದ್ದ ಮೇ 23ರ ಐಪಿಎಲ್ ಪಂದ್ಯ ಲಕ್ನೋಗೆ ಸ್ಥಳಾಂತರ

Date:

ಮೇ 23 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‍‌ಸಿಬಿ ಹಾಗೂ ಸನ್‌ರೈಸರ್ಸ್‌ ನಡುವಿನ ಪಂದ್ಯವನ್ನು ಬೆಂಗಳೂರಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಐಪಿಎಲ್ ಸಮಿತಿಯು, “ಬೆಂಗಳೂರಿನಲ್ಲಿ ಕಳೆದ ಭಾನುವಾರದಿಂದ ವಿಪರೀತ ಮಳೆಯಾಗುತ್ತಿದೆ. ಹವಾಮಾನ ವೈಪರೀತ್ಯವು ಇನ್ನಷ್ಟು ಮುಂದುವರಿಯುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಮೇ 23ರಂದು ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ ಆರ್‍‌ಸಿಬಿ ಹಾಗೂ ಸನ್‌ರೈಸರ್ಸ್‌ ನಡುವಿನ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ. ಪಂದ್ಯಕ್ಕಾಗಿ ಟಿಕೆಟ್ ಬುಕ್ ಮಾಡಿದ್ದ ಅಭಿಮಾನಿಗಳಿಗೆ ಹಣವನ್ನು ಮರುಪಾವತಿ ಮಾಡಲಾಗುವುದು” ಎಂದು ತಿಳಿಸಿದೆ.

ಸೋಮವಾರವಷ್ಟೇ ಲಕ್ನೋದಲ್ಲಿ ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್‌ ವಿರುದ್ಧದ ಪಂದ್ಯ ಆಡಿ ಗೆದ್ದಿರುವ ಹೈದರಾಬಾದ್, ಅದೇ ಮೈದಾನದಲ್ಲಿ ಮತ್ತೊಂದು ಪಂದ್ಯ ಆಡಲಿದೆ. ಅಲ್ಲದೇ, ಮೇ 23ರಂದು ಆರ್‌ಸಿಬಿ ಕೂಡ ಹೈದರಬಾದ್ ವಿರುದ್ಧ ಈ ಪಂದ್ಯ ಆಡಿದ ಬಳಿಕ ಮೇ 27 ರಂದು ತನ್ನ ಕೊನೆಯ ಲೀಗ್ ಪಂದ್ಯವನ್ನೂ ಲಕ್ನೋದಲ್ಲೇ ಆಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಈ ಬಾರಿಯ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಈಗಾಗಲೇ ಪ್ಲೇ ಆಫ್​ಗೆ ಲಗ್ಗೆ ಇಟ್ಟಿದೆ. ಮೇ 17ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್​ಸಿಬಿ ಹಾಗೂ ಕೆಕೆಆರ್ ಪಂದ್ಯ ಮಳೆಯಿಂದ ರದ್ದಾಗಿತ್ತು. ಈಗ ಮಳೆಯ ಕಾರಣಕ್ಕೆ ಮೇ 23ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹೈದರಾಬಾದ್ ಹಾಗೂ ಆರ್​ಸಿಬಿ ಪಂದ್ಯವನ್ನು ಲಕ್ನೋಗೆ ಶಿಫ್ಟ್ ಮಾಡಲಾಗಿದೆ.

ಈಗಾಗಲೇ ಆರ್​ಸಿಬಿ ಪ್ಲೇ ಆಫ್​ಗೆ ಪ್ರವೇಶಿಸಿದ್ದು, ಇನ್ನುಳಿದ ಈ ಎರಡು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಥವಾ ಎರಡನೇ ಸ್ಥಾನ ಪಡೆದುಕೊಂಡರೆ ಪ್ಲೇ ಆಫ್​ನಲ್ಲಿ ಸೋತರೂ ಸಹ ಇನ್ನೊಂದು ಅವಕಾಶ ಸಿಗಲಿದೆ. ಹೀಗಾಗಿ ಆರ್​ಸಿಬಿ ಅಂಕಪಟ್ಟಿಯಲ್ಲಿ ಟಾಪ್ ಒನ್ ಅಥವಾ ಎರಡನೇ ಸ್ಥಾನವನ್ನು ಕಾಯ್ದುಕೊಳ್ಳಲು ಯೋಜನೆ ಹಾಕಿಕೊಂಡಿದೆ.

ಕ್ವಾಲಿಫೈಯ್ಯರ್ ಹಾಗೂ ಫೈನಲ್ ಪಂದ್ಯದ ಸ್ಥಳ ಪ್ರಕಟಿಸಿದ ಬಿಸಿಸಿಐ

ಇದೇ ವೇಳೆ ಬಿಸಿಸಿಐ ಕ್ವಾಲಿಫೈಯ್ಯರ್ ಹಾಗೂ ಫೈನಲ್ ಪಂದ್ಯದ ಸ್ಥಳವನ್ನು ಕೂಡ ಬಿಸಿಸಿಐ ಪ್ರಕಟಿಸಿದೆ. ಕ್ವಾಲಿಫೈಯ್ಯರ್ 1 ಹಾಗೂ ಎಲಿಮಿನೇಟರ್ ಪಂದ್ಯವು ಚಂಡೀಗಡದ ಮೈದಾನದಲ್ಲಿ ನಡೆಯಲಿದ್ದು, ಕ್ವಾಲಿಫೈಯ್ಯರ್ 2 ಹಾಗೂ ಫೈನಲ್ ಪಂದ್ಯವು ಗುಜರಾತ್‌ನ ಅಹ್ಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇದನ್ನು ಓದಿದ್ದೀರಾ? ವಿಚಾರ ಹಂಚಿದರೆ ವಿಚಾರಣೆ, ಜೈಲು; ಇದು ನವಭಾರತದ ನವ ನಿಯಮವೆ?

ಮೇ 29 ರಿಂದ ಪ್ಲೇ-ಆಫ್ ಪಂದ್ಯಗಳು ನಡೆಯಲಿದ್ದು, ಜೂನ್ 3 ರಂದು ಫೈನಲ್ ಪಂದ್ಯ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...