ಐಪಿಎಲ್ 2025 | ಇಂದು ಮುಂಬೈ vs ಚೆನ್ನೈ ಹಾಗೂ ಆರ್‌ಆರ್‌ vs ಎಸ್‌ಆರ್‌ಎಚ್‌ 2 ರೋಚಕ ಪಂದ್ಯಗಳ ರಸದೌತಣ

Date:

ಇಂದು ಐಪಿಎಲ್ 2025ರ 18ನೇ ಆವೃತ್ತಿಯ 2 ಮತ್ತು 3ನೇ ಪಂದ್ಯಗಳು ನಡೆಯಲಿದ್ದು, ಎರಡೂ ಪಂದ್ಯಗಳು ಮಹತ್ವದ್ದಾಗಿದ್ದು, ಪ್ರೇಕ್ಷಕರಿಗೆ ರಸದೌತಣ ಬಡಿಸಲಿವೆ. ಮೊದಲ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಲೈನ್‌ಅಪ್ ಮತ್ತು ಅನುಭವಿ ಬೌಲರ್‌ಗಳನ್ನು ಹೊಂದಿರುವ ಹಾಲಿ ರನ್ನರ್ಸ್‌ ಅಪ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ ರಾಯಲ್ಸ್‌ ವಿರುದ್ಧ ತವರಿನ ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಅಭಿಯಾನ ಆರಂಭಿಸಲಿದೆ. ಎರಡನೇ ಪಂದ್ಯವು ಐಪಿಎಲ್‌ ಟೂರ್ನಿಯಲ್ಲಿ ತಲಾ ಐದು ಸಲ ಪ್ರಶಸ್ತಿ ಜಯಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ ರಾಯಲ್ಸ್‌ ವಿರುದ್ಧದ ಪಂದ್ಯದಲ್ಲಿ ಎರಡೂ ಟೀಂಗಳಲ್ಲಿ ಬಲಿಷ್ಠ ಆಟಗಾರರಿದ್ದಾರೆ. ಹೈದರಾಬಾದ್‌ ಪರ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರಂತಹ ಸ್ಫೋಟಕ ಆಟಗಾರರಿದ್ದಾರೆ. ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದಿಂದ ಚೇತರಿಸಿಕೊಂಡಿರುವುದು ತಂಡಕ್ಕೆ ಬಲ ಹೆಚ್ಚಿಸಿದೆ. ಅನುಭವಿ ವೇಗಿಗಳಾದ ನಾಯಕ ಪ್ಯಾಟ್ ಕಮಿನ್ಸ್, ಮೊಹಮ್ಮದ್ ಶಮಿ, ಸ್ಪಿನ್ನರ್ ಆ್ಯಡಂ ಜಂಪಾ ಅವರು ಬೌಲಿಂಗ್‌ ವಿಭಾಗದ ಪ್ರಮುಖ ಅಸ್ತ್ರವಾಗಿದ್ದಾರೆ.

ರಾಜಸ್ಥಾನ ತಂಡವನ್ನು ಮೊದಲ ಮೂರು ಪಂದ್ಯಗಳಲ್ಲಿ ರಿಯಾನ್‌ ಪರಾಗ್‌ ಮುನ್ನಡೆಸಲಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ಕಾಯಂ ನಾಯಕ ಸಂಜು ಸ್ಯಾಮ್ಸನ್ ಸಂಜು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದರೆ ಆಶ್ಚರ್ಯವಿಲ್ಲ. ಇಂಗ್ಲೆಂಡ್‌ನ ಜೋಸ್ ಬಟ್ಲರ್‌ ಅವರನ್ನು ತಂಡದಿಂದ ಬಿಡುಗಡೆ ಮಾಡಿರುವುದರಿಂದ ಬ್ಯಾಟಿಂಗ್ ಬಲ ಕೊಂಚ ಕಡಿಮೆಯಾಗಿದೆ. ಹೀಗಾಗಿ, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ನಿತೀಶ್ ರಾಣಾ ಮತ್ತು ಯಶಸ್ವಿ ಜೈಸ್ವಾಲ್ ಅವರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಐಪಿಎಲ್‌ ಅಖಾಡದಲ್ಲಿದ್ದಾರೆ 13 ಕನ್ನಡಿಗ ಆಟಗಾರರು: ‘ಆರ್‌ಸಿಬಿ’ಯಲ್ಲಿ ಯಾರ್‍ಯಾರಿದ್ದಾರೆ?

ಚೆಪಾಕ್‌ನಲ್ಲಿ ನಡೆಯಲಿರುವ ಮುಂಬೈ ಹಾಗೂ ಚೆನ್ನೈ ಪಂದ್ಯ ಕೂಡ ಮತ್ತಷ್ಟು ರೋಚಕವಾಗಿದೆ. ಋತುರಾಜ್ ಗಾಯಕವಾಡ್‌ ನಾಯಕತ್ವದ ಚೆನ್ನೈ ತಂಡವು ತನ್ನ ಸ್ಪಿನ್ ವಿಭಾಗದ ಮೇಲೆ ಹೆಚ್ಚು ವಿಶ್ವಾಸ ಇಟ್ಟುಕೊಂಡಿದೆ. ರವೀಂದ್ರ ಜಡೇಜ ಅವರೊಂದಿಗೆ ಆಫ್‌ಸ್ಪಿನ್ ದಂತಕಥೆ ಆರ್. ಅಶ್ವಿನ್, ನೂರ್ ಅಹಮದ್, ಕನ್ನಡಿಗ ಶ್ರೇಯಸ್ ಗೋಪಾಲ್ ಮತ್ತು ದೀಪಕ್ ಹೂಡಾ ತಂಡದಲ್ಲಿದ್ದಾರೆ. ಆಲ್‌ರೌಂಡರ್ ರಚಿನ್ ರವೀಂದ್ರ ಕೂಡ ಇವರಿಗೆ ಜೊತೆ ನೀಡುತ್ತಾರೆ. ನಾಯಕ ಋತುರಾಜ್, ರಾಹುಲ್ ತ್ರಿಪಾಠಿ, ಡೆವೊನ್ ಕಾನ್ವೆ ಹಾಗೂ ಮಹೇಂದ್ರಸಿಂಗ್ ಧೋನಿ ಅವರು ಬ್ಯಾಟಿಂಗ್ ವಿಭಾಗದ ಶಕ್ತಿಯಾಗಿದ್ದಾರೆ.

ಮುಂಬೈ ತಂಡದ ಬೌಲಿಂಗ್ ಶಕ್ತಿ ಜಸ್‌ಪ್ರೀತ್ ಬೂಮ್ರಾ ಕಣಕ್ಕಿಳಿಯುವುದು ಖಚಿತವಾಗಿಲ್ಲ. ನಾಯಕ ಹಾರ್ದಿಕ್ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಕಳೆದ ವರ್ಷದ ಟೂರ್ನಿಯ 3 ಪಂದ್ಯಗಳಲ್ಲಿ ನಿಗದಿತ ಅವಧಿಯಲ್ಲಿ ಓವರ್‌ಗಳನ್ನು ಮುಗಿಸದ ಕಾರಣ ಒಂದು ಪಂದ್ಯದ ಅಮಾನತು ಶಿಕ್ಷೆಗೆ ಒಳಗಾಗಿದ್ದರು. ಅದು ಈ ಪಂದ್ಯದಲ್ಲಿ ಜಾರಿಯಾಗಲಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವ ವಹಿಸುವರು. ಇದರಿಂದಾಗಿ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್, ದೀಪಕ್ ಚಾಹರ್ ಅವರ ಮೇಲೆ ಅವಲಂಬಿತವಾಗಬಹುದು. ಸ್ಪಿನ್ನರ್ ಮಿಚೆಲ್ ಸ್ಯಾಂಟನರ್ ಪ್ರಮುಖರಾಗಿದ್ದಾರೆ. ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. ಸೂರ್ಯ, ರೋಹಿತ್, ತಿಲಕ್ ವರ್ಮಾ, ರಿಯಾನ್ ರಿಕೆಲ್ಟನ್ ಅವರು ಅಬ್ಬರಿಸುವ ನಿರೀಕ್ಷೆಯಿದೆ.

ಪಂದ್ಯ ಆರಂಭ

ಆರ್‌ಆರ್‌ vs ಎಸ್‌ಆರ್‌ಎಚ್‌ : ಮಧ್ಯಾಹ್ನ 3.30
ಮುಂಬೈ vs ಚೆನ್ನೈ : ರಾತ್ರಿ 7.30ಕ್ಕೆ

ನೇರಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಜಿಯೊ ಹಾಟ್‌ ಸ್ಟಾರ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...