ಐಪಿಎಲ್ 2025 | ಗೆಲುವಿನತ್ತ ಸಮೀಪಿಸಿದ್ದ ರಾಜಸ್ಥಾನ ರಾಯಲ್ಸ್ ಮಣಿಸಿದ ಆ ಒಂದು ಕ್ಯಾಚ್‌

Date:

ಕ್ಯಾಚುಗಳು ಮ್ಯಾಚುಗಳನ್ನು ಗೆಲ್ಲಿಸುತ್ತವೆ ಎಂಬುದಕ್ಕೆ 2025ನೇ ಆವೃತ್ತಿಯ ಆರ್‌ಸಿಬಿ ಹಾಗೂ ಆರ್‌ಆರ್‌ ನಡುವೆ ನಡೆದ 42ನೇ ಪಂದ್ಯ ಮತ್ತೊಮ್ಮೆ ಸಾಕ್ಷಿಯಾಗಿದೆ. ಆರ್‌ಸಿಬಿ ವಿರುದ್ಧದ ಪಂದ್ಯವನ್ನು 11 ರನ್​​ಗಳಿಂದ ಪರಾಭವಗೊಂಡ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2025 ರ ಐಪಿಎಲ್ ಇನ್ನು ಮುಂದೆ ಕೇವಲ ಔಪಚಾರಿಕವಾಗಿದೆ. ಈಗಾಗಲೇ ಆಡಿರುವ 9 ಪಂದ್ಯಗಳಲ್ಲಿ 7 ಪಂದ್ಯಗಳಲ್ಲಿ ಸೋತಿರುವ ಆರ್‌ಆರ್‌ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದ್ದು, ತಂಡದ ಪ್ರದರ್ಶನವನ್ನು ನೋಡಿದರೆ, ಇನ್ನುಳಿದ ಪಂದ್ಯಗಳನ್ನು ಗೆಲ್ಲುವುದು ಅಸಾಧ್ಯವೆನ್ನುವಂತಾಗಿದೆ.

ರಾಜಸ್ಥಾನ್ ಪ್ಲೇ ಆಫ್ ಕನಸು ಬಹುತೇಕ ನುಚ್ಚು ನೂರಾಗಿದೆ. ತಂಡದ ಈ ಕಳಪೆ ಪ್ರದರ್ಶನಕ್ಕೆ ಮಧ್ಯಮ ಕ್ರಮಾಂಕದ ವೈಫಲ್ಯವೇ ಪ್ರಮುಖ ಕಾರಣ ಎನ್ನಬಹುದು. ಸತತ ಮೂರು ಪಂದ್ಯಗಳಲ್ಲಿ ಆರ್‌ಆರ್‌ ತಾನು ಮಾಡಿದ ತಪ್ಪುಗಳಿಂದಲೇ ಸೋತಿದೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ ಅದೇ ತಪ್ಪನ್ನು ಮಾಡಿ ಸೋತಿತ್ತಾದರೂ ಇಲ್ಲಿ ಆರ್​ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ತೋರಿದ ಚಾಣಾಕ್ಷತೆ ಆರ್​ಸಿಬಿ ಗೆಲುವಿಗೆ ಪ್ರಮುಖ ಕಾರಣವಾಯಿತು.

ಆರ್​ಸಿಬಿ ನೀಡಿದ 205 ರನ್​ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್​ಗೆ ನಿರೀಕ್ಷೆಗೂ ಮೀರಿದ ಆರಂಭ ನೀಡುವಲ್ಲಿ ಆರಂಭಿಕ ಬ್ಯಾಟರ್‌ಗಳು ಯಶಸ್ವಿಯಾದರು. ತಂಡ ಕೇವಲ 9 ಓವರ್​ಗಲ್ಲಿ 3 ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿತು. ಆದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ ರಾಜಸ್ಥಾನ​ ತಂಡಕ್ಕೆ ಮತ್ತೊಂದು ಸೋಲಿನ ಆಘಾತ ನೀಡಿತು. ಅದರಲ್ಲೂ 18ನೇ ಓವರ್​ನಲ್ಲಿ 22 ರನ್​ ಕಲೆಹಾಕಿ ರಾಜಸ್ಥಾನ್‌ಗೆ ಗೆಲುವಿನ ಭರವಸೆ ಮೂಡಿಸಿದ್ದ ಧೃವ್ ಜುರೇಲ್ 19ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದು ತಂಡವನ್ನು ಸೋಲಿನ ಕಡೆ ಸಿಲುಕಿಸಿತು. ಆದಾಗ್ಯೂ ಈ ವಿಕೆಟ್​ನ ಕ್ರೆಡಿಟ್ ಆರ್​ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾಗೆ ಸಲ್ಲಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಬೇಕು? IPL 2025 | ದಾಖಲೆಯ 27 ಕೋಟಿಗೆ ಹರಾಜು ಆಗಿದ್ದರೂ ಶೂನ್ಯಕ್ಕೆ ಔಟಾಗುತ್ತಿರುವ ಲಖನೌ ಆಟಗಾರ

ಹೇಜಲ್​ವುಡ್‌ನಿಂದ ಬೌಲಿಂಗ್‌, ಜಿತೇಶ್‌ ನಿರ್ಧಾರ!

ವಾಸ್ತವವಾಗಿ ರಾಜಸ್ಥಾನ್ ಗೆಲುವಿಗೆ ಕೊನೆಯ 3 ಓವರ್​ಗಳಲ್ಲಿ 40 ರನ್ ಬೇಕಾಗಿದ್ದವು. ಈ ವೇಳೆ ಆರ್​ಸಿಬಿ ಮೇಲುಗೈ ಸಾಧಿಸಿತ್ತು. ಆದರೆ 18ನೇ ಓವರ್ ಬೌಲ್ ಮಾಡಿದ ಭುವನೇಶ್ವರ್ ಬರೋಬ್ಬರಿ 22 ರನ್ ಬಿಟ್ಟುಕೊಟ್ಟರು. ಈ ಓವರ್​ನಲ್ಲಿ ಜುರೇಲ್ 1 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ ಆರ್​ಸಿಬಿಗೆ ಕಂಟಕವಾಗಿದ್ದರು. ಕೊನೆಯ 2 ಓವರ್​ಗಳಲ್ಲಿ 18 ರನ್ ಬೇಕಿದ್ದಾಗ ಗೆಲುವು ರಾಜಸ್ಥಾನ ಪರ ವಾಲಿದ್ದಂತೆ ಕಾಣುತ್ತಿತ್ತು. ಆದರೆ 19ನೇ ಓವರ್​ನಲ್ಲಿ ದಾಳಿಗಿಳಿದ ಜೋಶ್ ಹೇಜಲ್​ವುಡ್ ಪಂದ್ಯವನ್ನು ಮತ್ತೆ ಆರ್​ಸಿಬಿಯತ್ತ ತಿರುಗಿಸಿದರು.

ಈ ಓವರ್​ನಲ್ಲಿ ಹೇಜಲ್​ವುಡ್ ಕೇವಲ 1 ರನ್​ ನೀಡಿ 2 ಪ್ರಮುಖ ವಿಕೆಟ್‌ಗಳನ್ನು ಉರುಳಿಸಿದರು. ಅದರಲ್ಲೂ ಸ್ಫೋಟಕ ಬ್ಯಾಟಿಂಗ್‌ ಮಾಡುತ್ತಿದ್ದ ಜುರೇಲ್ ವಿಕೆಟ್ ಉರುಳಿಸುವ ಮೂಲಕ ಹೇಜಲ್​ವುಡ್​ ತಂಡದ ಗೆಲುವನ್ನು ಖಚಿತಪಡಿಸಿದರು. ಈ ವಿಕೆಟ್ ಉರುಳಿಸಿದ್ದು ಹೇಜಲ್​ವುಡ್ ಆದರೂ ವಿಕೆಟ್ ಕೀಪರ್ ಜಿತೇಶ್ ಅವರ ಚುರುಕುತನ ವಿಕೆಟ್ ಪಡೆಯುವಲ್ಲಿ ಪ್ರಮುಖ ಪಾತ್ರವಹಿಸಿತು.

ವಾಸ್ತವವಾಗಿ ಹೇಜಲ್​ವುಡ್ 19ನೇ ಓವರ್​ನ 3ನೇ ಎಸೆತವನ್ನು ಯಾರ್ಕರ್ ಬೌಲ್ ಮಾಡಿದರು. ಈ ಎಸೆತವನ್ನು ಸಿಕ್ಸರ್​ಗಟ್ಟಲು ಧೃವ್ ಜುರೇಲ್ ಯತ್ನಿಸಿದರು. ಆದರೆ ಆ ಯತ್ನದಲ್ಲಿ ಅವರು ಸಫಲರಾಗಲಿಲ್ಲ. ಚೆಂಡು ನೇರವಾಗಿ ವಿಕೆಟ್ ಕೀಪರ್​ ಕೈಗೆ ಹೋಯಿತು. ಈ ಹಂತದಲ್ಲಿ ಎಲ್ಲರೂ ಇದು ಡಾಟ್ ಬಾಲ್ ಎಂದು ಭಾವಿಸಿದ್ದರು. ಆದರೆ ಚೆಂಡು ಧೃವ್ ಅವರ ಬ್ಯಾಟ್​ಗೆ ತಾಗಿದೆ ಎಂಬುದು ಜಿತೇಶ್​ಗೆ ಮಾತ್ರ ಗೊತ್ತಿತ್ತು. ಹೀಗಾಗಿ ಮೊದಲು ಅಂಪೈರ್ ಬಳಿ ಔಟ್​ಗೆ ಮನವಿ ಮಾಡಿದ ಜಿತೇಶ್, ಅಂಪೈರ್ ಔಟ್ ನೀಡದಿದ್ದಾಗ ರಜತ್​ಗೆ ರಿವ್ಯೂ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಆರಂಭದಲ್ಲಿ ರಜತ್​ ಹಿಂದೇಟು ಹಾಕಿದರೂ, ಪಟ್ಟು ಬಿಡದ ಜಿತೇಶ್ ರಿವ್ಯೂ ತೆಗೆದುಕೊಳ್ಳುವಂತೆ ಕೇಳಿಕೊಂಡರು. ಕೊನೆಗೂ ಒತ್ತಡಕ್ಕೆ ಮಣಿದ ರಜತ್ ರಿವ್ಯೂ ತೆಗೆದುಕೊಂಡರು. ರಿವ್ಯೂನಲ್ಲಿ ಚೆಂಡು ಧೃವ್ ಅವರ ಬ್ಯಾಟ್​ಗೆ ತಾಗಿರುವುದು ಸ್ಪಷ್ಟವಾಗಿ ಗೋಚರಿಸಿತು. ಹೀಗಾಗಿ ಮೊದಲು ನಾಟೌಟ್ ನೀಡಿದ್ದ ಅಂಪೈರ್ ಆ ಬಳಿಕ ತಮ್ಮ ನಿರ್ಧಾರವನ್ನು ಬದಲಿಸಬೇಕಾಯಿತು. ಇತ್ತ ಧೃವ್ ಔಟಾದ ಬಳಿಕ ರಾಜಸ್ಥಾನದ ಸೋಲು ಬಹುತೇಕ ಖಚಿತವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...