ಐಪಿಎಲ್ | ಹೈದ್ರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಜಯ : ಪ್ಲೇ ಆಫ್ ಆಸೆ ಜೀವಂತ!

Date:

ಮುಂಬೈ : ಆಕಾಶ್ ಮಧ್ವಾಲ್ 4 ವಿಕೆಟ್, ಕ್ಯಾಮರೂನ್ ಗ್ರೀನ್ ಅವರ ಐಪಿಎಲ್‌ನ ಚೊಚ್ಚಲ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ತಮ್ಮ ಐಪಿಎಲ್‌ನ 16ನೇ ಆವೃತ್ತಿಯ ಅಂತಿಮ ಲೀಗ್‌ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದ್ರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಪ್ಲೇ ಆಫ್ ಆಸೆ ಇನ್ನೂ ಜೀವಂತವಾಗಿರಿಸಿದೆ.

ಐಪಿಎಲ್‌ನ ಪ್ಲೇ ಆಫ್‌ಗೆ ಏರುವ ಹಾವು ಏಣಿ ಆಟದಲ್ಲಿ ತುದಿಗಾಲಲ್ಲಿ ನಿಂತಿರುವ ಮೂರು ತಂಡಗಳ ಪೈಕಿ ಮುಂಬೈ ಕೂಡ ಒಂದಾಗಿತ್ತು. ನಿರ್ಣಾಯಕ ಪಂದ್ಯವನ್ನಾಡಿದ ಮುಂಬೈಗೆ, ಹೈದ್ರಾಬಾದ್ ತಂಡ 201 ರನ್‌ಗಳ ಬೃಹತ್ ಗುರಿ ನೀಡಿತ್ತು.

ಆದರೆ ಅದನ್ನು ಸುಲಭವಾಗಿ ಬೆನ್ನಟ್ಟಿದ ಮುಂಬೈ, ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ಗೆದ್ದಿತು. ಇದರಿಂದ ರಾಜಸ್ಥಾನ್ ರಾಯಲ್ಸ್ ಪ್ಲೇ ಆಫ್ ಪೈಪೋಟಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಹೈದ್ರಾಬಾದ್, ವಿವ್ರಾಂತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಅವರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 200 ರನ್‌ಗಳ ಗುರಿ ನೀಡಿತ್ತು. ಈ ಆರಂಭಿಕ ಜೋಡಿ ಕೇವಲ 13.5 ಓವರ್‌ಗಳಲ್ಲಿ 140 ರನ್‌ಗಳನ್ನು ಕೂಡಿ ಹಾಕಿತ್ತು. ಆದರೆ, ಉಳಿದ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ನಿಗದಿತ 20 ಓವರ್‌ಗಳ ಅಂತ್ಯಕ್ಕೆ ಸನ್‌ರೈಸರ್ಸ್ ಹೈದ್ರಾಬಾದ್ ತಂಡ ಭರ್ತಿ 200 ರನ್‌ಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿತ್ತು.

ಮೊದಲ ಇನ್ನಿಂಗ್ಸ್ ಮುಗಿದಾಗ, ಮುಂಬೈ ಗೆಲುವು ಒಂದು ಹಂತದಲ್ಲಿ ದೂರದ ಸಂಗತಿ ಎನಿಸಿತ್ತು . ಆದರೆ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಂಡ ಮುಂಬೈ, ಇನ್ನೂ 12 ಎಸೆತಗಳು ಬಾಕಿ ಇರುವಂತೆಯೇ ಗೆದ್ದಿತು.

ಕ್ಯಾಮರೂನ್ ಗ್ರೀನ್ ಅವರು 47 ಎಸೆತಗಳಲ್ಲಿ ಔಟಾಗದೆ 100 ರನ್ ಗಳಿಸುವ ಮೂಲಕ ಚೊಚ್ಚಲ ಶತಕ ಗಳಿಸಿದರು. ಮುಂಬೈ ಪರವಾಗಿ ಆರಂಭಿಕನಾಗಿ ಆಗಮಿಸಿದ್ದ ಇಶನ್ ಕಿಶನ್ ಕೇವಲ 12 ಎಸೆತಗಳಲ್ಲಿ 14 ರನ್‌ ಗಳಿಸಿ, 2.5 ಓವರ್‌ನಲ್ಲಿ ಭುವನೇಶ್ವರ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ, ನಾಯಕ ರೋಹಿತ್ ಶರ್ಮಾ ಹಾಗೂ ಕ್ಯಾಮರೂನ್ ಗ್ರೀನ್ 128 ರನ್‌ಗಳ ಅಮೋಘ ಜೊತೆಯಾಟ ನೀಡಿದರು. ಕಳೆದ ಕೆಲ ಪಂದ್ಯಗಳಲ್ಲಿ ರನ್‌ಗಳಿಸಲು ವಿಫಲವಾಗಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ 37 ಎಸೆತಗಳಲ್ಲಿ 56 ರನ್‌ ಬಾರಿಸಿ, ಮಯಾಂಕ್ ಡಗಾರ್‌ಗೆ ವಿಕೆಟ್ ಒಪ್ಪಿಸಿದರು.

ಅದಾದ ಬಳಿಕ ಸೂರ್ಯಕುಮಾರ್ ಯಾದವ್ ಕ್ಯಾಮರೂನ್ ಗ್ರೀನ್‌ಗೆ ಜೊತೆಯಾದರು. ಸೂರ್ಯಕುಮಾರ್ ಯಾದವ್ 16 ಎಸೆತಗಳಲ್ಲಿ 25 ರನ್‌ಗಳಿಸಿ ಅಜೇಯವಾಗುಳಿದರು. ಈ ಮೂಲಕ ಈ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 18 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಮುಂಬೈ, ಪ್ಲೇ ಆಫ್ ಆಸೆ ಇನ್ನೂ ಜೀವಂತವಾಗಿರಿಸಿದೆ. ಆರ್‌ಸಿಬಿ ಹಾಗೂ ಗುಜರಾತ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಸೋತರೆ ಮಾತ್ರ, ಮುಂಬೈ ಪ್ಲೇ ಆಫ್‌ ಪ್ರವೇಶಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...