ಐಪಿಎಲ್ ಫೈನಲ್ | ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಹೈದರಾಬಾದ್!

Date:

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್ ಕಮ್ಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್ ತಂಡ, ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಮಾರಕ ಬೌಲಿಂಗ್‌ ದಾಳಿಗೆ ಫೈನಲ್‌ನಲ್ಲಿ ಮಕಾಡೆ ಮಲಗಿದೆ.

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್‌ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ ಟಾಸ್ ಗೆದ್ದಿದ್ದು, ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಇದನ್ನು ಸಮರ್ಥವಾಗಿ ಬಳಸಿಕೊಳ್ಳಲು ಮೊದಲ ಓವರ್‌ನಿಂದಲೇ ವಿಫಲರಾದ ಹೈದರಾಬಾದ್ ಬ್ಯಾಟರ್‌ಗಳು, 18.3 ಓವರ್‌ಗಳಲ್ಲಿ ಕೇವಲ 113 ರನ್ ಗಳಿಸುವಷ್ಟರಲ್ಲಿ ಆಲೌಟ್ ಆದರು. ಐಪಿಎಲ್‌ನಲ್ಲಿ 4ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಕೆಕೆಆರ್ ತಂಡ, ಮೂರನೇ ಬಾರಿಗೆ ಚಾಂಪಿಯನ್ ಆಗಲು 114 ರನ್‌ಗಳನ್ನು ದಾಖಲಿಸಬೇಕಿದೆ.

ಬಾಲಿವುಡ್‌ ನಟ ಶಾರೂಖ್ ಖಾನ್ ಮಾಲೀಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು, 4ನೇ ಬಾರಿಗೆ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಈ ಮೊದಲು 2012, 2014 ಹಾಗೂ 2021ರಲ್ಲಿ ಫೈನಲ್ ಪ್ರವೇಶಿಸಿತ್ತು. ಈ ಪೈಕಿ 2012ರಲ್ಲಿ ಚೆನ್ನೈಯನ್ನು ಹಾಗೂ 2014ರಲ್ಲಿ ಕಿಂಗ್ಸ್ ಎಲೆವೆನ್ ಪಂಜಾಬ್ ಅನ್ನು ಸೋಲಿಸಿ ಐಪಿಎಲ್ ಟ್ರೋಫಿ ಎತ್ತಿ ಹಿಡಿಯುವ ಮೂಲಕ, ಚಾಂಪಿಯನ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2021ರಲ್ಲಿ ಕೂಡ ಫೈನಲ್ ಪ್ರವೇಶಿಸಿದ್ದರೂ ಕೂಡ, ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡವು 27 ರನ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಸೋಲನುಭವಿಸಿ, ರನ್ನರ್ ಅಪ್ ಆಗಿತ್ತು.

ಆರಂಭದಲ್ಲೇ ಕೈಕೊಟ್ಟ ಹೈದರಾಬಾದ್ ಬ್ಯಾಟರ್‌ಗಳು

ಇಂದಿನ ಪಂದ್ಯದಲ್ಲಿ ಹೈದರಾಬಾದ್ ಪರ ಇನ್ನಿಂಗ್ಸ್‌ ಆರಂಭಿಸಿ, ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಫೈನಲ್‌ನಲ್ಲಿ ಮಂಕಾದರು. ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಮೊದಲ ಓವರ್‌ ಎಸೆದ ಸ್ಟಾರ್ ಬೌಲರ್ ಮಿಚೆಲ್ ಸ್ಟಾರ್ಕ್‌ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾರನ್ನು ಇನ್‌ಸ್ವಿಂಗ್ ಮೂಲಕ ಕ್ಲೀನ್ ಬೌಲ್ಡ್‌ ಮಾಡುವಲ್ಲಿ ಸಫಲರಾದರು. ಆ ಮೂಲಕ ಆರಂಭಿಕ ಜೋಡಿಯನ್ನು ಬೇರ್ಪಡಿಸಿದರು.

ಆ ಬಳಿಕ ಎರಡನೇ ಓವರ್‌ ಎಸೆದ ವೈಭವ್ ಅರೋರಾ, ತನ್ನ ಪಾಲಿನ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಟ್ರಾವಿಸ್ ಹೆಡ್ ಅವರ ವಿಕೆಟ್ ಪಡೆಯುವ ಮೂಲಕ ಹೈದರಾಬಾದ್‌ಗೆ ಮತ್ತೊಂದು ಆಘಾತ ನೀಡಿದರು. ಟ್ರಾವಿಸ್ ಹೆಡ್ ತಾನೆದುರಿಸಿದ ಮೊದಲ ಎಸೆತ ಅದಾಗಿತ್ತು. ವಿಕೆಟ್‌ ಕೀಪೆರ್ ಗುರ್ಬಾಝ್‌ಗೆ ಕ್ಯಾಚಿತ್ತು ನಿರ್ಗಮಿಸಿ, ಶೂನ್ಯಕ್ಕೆ ಔಟಾದರು.

ಆ ಬಳಿಕ 9 ರನ್ ಗಳಿಸಿದ್ದಾಗ ಬ್ಯಾಟರ್ ರಾಹುಲ್ ತ್ರಿಪಾಠಿ ಕೂಡ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾಗಿ, ರಮಣ್‌ದೀಪ್‌ಗೆ ಕ್ಯಾಚಿತ್ತು ಔಟಾದರು. ನಿತೀಶ್ ಕುಮಾರ್ ರೆಡ್ಡಿ ಹರ್ಷಿತ್ ರಾಣಾಗೆ ವಿಕೆಟ್ ಒಪ್ಪಿಸಿದರು. 7 ಓವರ್ ಮುಗಿಯುವುದರೊಳಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡ ಕೇವಲ 47 ರನ್ ಗಳಿಸುವಷ್ಟರಲ್ಲಿ ಪ್ರಮುಖ ನಾಲ್ಕು ವಿಕೆಟ್ ಕಳೆದುಕೊಂಡಿತ್ತು.

ಹೈದರಾಬಾದ್ ಪರ ನಾಯಕ ಪ್ಯಾಟ್ ಕಮ್ಮಿನ್ಸ್‌ 24 ರನ್ ಗಳಿಸಿದ್ದೇ ಅತಿದೊಡ್ಡ ಸ್ಕೋರ್ ಆಗಿದೆ. ಉಳಿದಂತೆ ಎಡೆನ್ ಮಾರ್ಕರಮ್ 20, ಹೆನ್ರಿ ಕ್ಲಾಸೆನ್ 16, ನಿತೀಶ್ ಕುಮಾರ್ ರೆಡ್ಡಿ 13 ಗಳಿಸುವ ಮೂಲಕ ಎರಡಂಕೆಯ ಸ್ಕೋರ್ ದಾಖಲಿಸಿದರು.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ನಾಯಕ ಶ್ರೇಯಸ್ ಅಯ್ಯರ್ವ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡ ಮಾರಕ ಬೌಲಿಂಗ್‌ಗೆ ನಲುಗಿ, ಕೊನೆಯಲ್ಲಿ 18.3 ಓವರ್‌ಗಳಲ್ಲಿ ಕೇವಲ 113 ರನ್ ಗಳಿಸುವಷ್ಟರಲ್ಲಿ ಹೈದರಾಬಾದ್ ತಂಡ ಆಲೌಟ್ ಆಯಿತು.

ಕೋಲ್ಕತ್ತಾ ನೈಟ್ ರೈಡರ್ಸ್‌ ಪರ ಬೌಲಿಂಗ್‌ನಲ್ಲಿ ಆಂಡ್ರೆ ರಸ್ಸೆಲ್ 19ಕ್ಕೆ 3, ಮಿಚೆಲ್ ಸ್ಟಾರ್ಕ್ ಹಾಗೂ ಹರ್ಷಿತ್ ರಾಣಾ ತಲಾ 2 ವಿಕೆಟ್ ಪಡೆಯುವಲ್ಲಿ ಸಫಲರಾದರು. ಉಳಿದಂತೆ ವರುಣ್ ಚಕ್ರವರ್ತಿ, ಸುನಿಲ್ ನರೇನ್ ಹಾಗೂ ವೈಭವ್ ಅರೋರಾ ತಲಾ ಒಂದೊಂದು ವಿಕೆಟ್ ಗಳಿಸಿದರು. ಆ ಮೂಲಕ ಬೌಲಿಂಗ್ ದಾಳಿ ನಡೆಸಿದ ಎಲ್ಲ ಕೆಕೆಆರ್‌ನ ಬೌಲರ್‌ಗಳು ವಿಕೆಟ್ ಪಡೆದುಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...