IPL ಉದ್ಘಾಟನಾ ಪಂದ್ಯ | ಕುಸಿದ ಆರ್‌ಸಿಬಿಗೆ ನೆರವಾದ ರಾವತ್-ದಿನೇಶ್ ಕಾರ್ತಿಕ್ ಜೋಡಿ: ಚೆನ್ನೈಗೆ ಸವಾಲಿನ ಗುರಿ

Date:

ಭಾರತೀಯ ಕ್ರಿಕೆಟ್ ಪ್ರೇಮಿಗಳ ಹಬ್ಬವಾಗಿರುವ ಐಪಿಎಲ್‌ 2024ಕ್ಕೆ ವರ್ಣರಂಜಿತ ಚಾಲನೆ ದೊರಕಿದ್ದು, ಇಂದು ಚೆನ್ನೈನ ಎಂ.ಚಿದಂಬರಂ ಅಂಗಳದಲ್ಲಿ ಐಪಿಎಲ್‌ ಉದ್ಘಾಟನಾ ಪಂದ್ಯ ನಡೆಯುತ್ತಿದೆ.

ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್‌ಸಿಬಿ ತಂಡಗಳು ಕಾದಾಟ ನಡೆಸುತ್ತಿದ್ದು, ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ, ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತ್ತು. ಮಧ್ಯಮ ಕ್ರಮಾಂಕದಲ್ಲಿ ಕುಸಿತ ಕಂಡರೂ ಅನುಜ್ ರಾವತ್-ದಿನೇಶ್ ಕಾರ್ತಿಕ್ ಜೋಡಿ ಉತ್ತಮ ಜೊತೆಯಾಟದ ಪರಿಣಾಮ ಸವಾಲಿನ ಗುರಿ ನೀಡುವಲ್ಲಿ ಸಫಲವಾಯಿತು. ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ದಾಖಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ಒದಗಿಸುವ ಮೂಲಕ ನಿಗದಿತ ಓವರ್‌ಗಳಲ್ಲಿ ಬೃಹತ್ ಮೊತ್ತ ಕಲೆ ಹಾಕುವ ಸೂಚನೆ ನೀಡಿದ್ದರು. ಮೊದಲ ನಾಲ್ಕು ಓವರ್‌ಗಳಲ್ಲಿ ಉತ್ತಮ ರನ್ ಪೇರಿಸಿದ ಈ ಜೋಡಿ, 4.3 ಓವರ್‌ಗಳಲ್ಲಿ 41 ರನ್ ಕಲೆ ಹಾಕಿತು. ಈ ವೇಳೆ ಚೆನ್ನೈ ಪರವಾಗಿ ದಾಳಿಗಿಳಿದ ಬಾಂಗ್ಲಾದ ಬೌಲರ್ ಮುಸ್ತಫಿಝ್ ರಹ್ಮಾನ್, ಫಾಫ್ ಡು ಪ್ಲೆಸಿಸ್ ಅವರನ್ನು ಔಟ್ ಮಾಡುವ ಮೂಲಕ ಈ ಜೋಡಿಯನ್ನು ಬೇರ್ಪಡಿಸಿದರು. ವಿಕೆಟ್ ಒಪ್ಪಿಸುವುದಕ್ಕೂ ಮುನ್ನ 23 ಎಸೆತಗಳನ್ನು ಎದುರಿಸಿದ್ದ ಆರ್‌ಸಿಬಿ ನಾಯಕ 23 ಎಸೆತಗಳಲ್ಲಿ 8 ಭರ್ಜರಿ ಬೌಂಡರಿಗಳ ನೆರವಿನೊಂದಿಗೆ 35 ರನ್ ಗಳಿಸಿದರು.

ಬಳಿಕ ಕ್ರೀಸ್‌ಗೆ ಬಂದ ರಜತ್ ಪಾಟೀದಾರ್ ಹಾಗೂ ಆರ್‌ಸಿಬಿಯ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾಗುವ ಮೂಲಕ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದರು. ರಜತ್ ಪಾಟೀದಾರ್ ಮುಸ್ತಫಿಝ್ ರಹ್ಮಾನ್ ಅವರಿಗೆ ವಿಕೆಟ್ ಒಪ್ಪಿಸಿದರೆ, ಮ್ಯಾಕ್ಸ್‌ವೆಲ್ ದೀಪಕ್ ಚಾಹರ್ ಎಸೆತದಲ್ಲಿ ವಿಕೆಟ್ ಕೀಪರ್ ಎಂ ಎಸ್ ಧೋನಿಗೆ ಕ್ಯಾಚಿತ್ತು, ಪೆವಿಲಿಯನ್‌ಗೆ ಮರಳಿದರು.

ಆ ಬಳಿಕ ಉತ್ತಮ ಜೊತೆಯಾಟ ನಡೆಸುವ ಭರವಸೆ ಮೂಡಿಸಿದ ವಿರಾಟ್ ಕೊಹ್ಲಿ ಹಾಗೂ ಕ್ಯಾಮರೂನ್ ಗ್ರೀನ್ ಅವರನ್ನು ಕೂಡ ಮುಸ್ತಫಿಝ್ ರಹ್ಮಾನ್ ಔಟ್ ಮಾಡುವಲ್ಲಿ ಯಶಸ್ವಿಯಾದರು. ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 1 ಸಿಕ್ಸ್‌ನ ನೆರವಿನಿಂದ 21 ರನ್ ಗಳಿಸಿದರೆ, ಕ್ಯಾಮರೂನ್ ಗ್ರೀನ್ 22 ಎಸೆತಗಳಲ್ಲಿ 18 ರನ್(1 ಬೌಂಡರಿ) ಗಳಿಸಿದರು.

ಸಾವಧಾನದ ಆಟವಾಡಿದ ಅನುಜ್ ರಾವತ್-ದಿನೇಶ್ ಕಾರ್ತಿಕ್ ಜೋಡಿ

ಬೆಂಗಳೂರು ತಂಡವು ಮುಸ್ತಫಿಝ್ ರಹ್ಮಾನ್ ಬೌಲಿಂಗ್‌ಗೆ ಕುಸಿದ ಪರಿಣಾಮ 78 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆ ಜೊತೆಯಾದ ಎಡಗೈ ಬ್ಯಾಟರ್ ಅನುಜ್ ರಾವತ್ ಹಾಗೂ ದಿನೇಶ್ ಕಾರ್ತಿಕ್ ಜೋಡಿಯು ಉತ್ತಮ ಜೊತೆಯಾಟ ನಡೆಸಿದ ಪರಿಣಾಮ ಚೆನ್ನೈಗೆ 174 ರನ್‌ಗಳ ಸವಾಲಿನ ಗುರಿ ನೀಡುವಲ್ಲಿ ಸಫಲವಾಯಿತು. ಈ ಜೋಡಿಯು 57 ಎಸೆತಗಳಲ್ಲಿ 97 ರನ್‌ಗಳನ್ನು ಕಲೆ ಹಾಕಿತು.

ಆರ್‌ಸಿಬಿ ಪರವಾಗಿ ಕೊನೆಯವರೆಗೂ ಹೋರಾಟ ನಡೆಸಿದ ಅನುಜ್ ರಾವತ್ 25 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸ್‌ನ ನೆರವಿನಿಂದ 48 ರನ್ ಗಳಿಸಿ, ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ರನೌಟ್ ಆದರು. 26 ಎಸೆತಗಳನ್ನು ಎದುರಿಸಿದ ದಿನೇಶ್ ಕಾರ್ತಿಕ್, 3 ಬೌಂಡರಿ ಹಾಗೂ 2 ಸಿಕ್ಸರ್‌ನ ನೆರವಿನಿಂದ 38 ರನ್ ಗಳಿಸಿ, ಔಟಾಗದೆ ಉಳಿದರು.

ಚೆನ್ನೈ ಸೂಪರ್ ಕಿಂಗ್ಸ್‌ ಪರವಾಗಿ ಬೌಲಿಂಗ್‌ನಲ್ಲಿ ಮುಸ್ತಫಿಝ್ ರಹ್ಮಾನ್ 29 ರನ್‌ಗಳಿಗೆ 4 ವಿಕೆಟ್ ಗಳಿಸಿ ಮಿಂಚಿದರೆ, ದೀಪಕ್ ಚಾಹರ್ 37 ರನ್ ನೀಡಿ, ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...