ಐಪಿಎಲ್‌ 2023 | ಇಂದು ಮೊದಲ ಡಬಲ್‌ ಹೆಡ್ಡರ್‌, ನೂತನ ನಾಯಕತ್ವಕ್ಕೆ ಮೊದಲ ಸವಾಲು

Date:

  • ಕೋಲ್ಕತ್ತಾ ಮತ್ತು ಪಂಜಾಬ್ ನಡುವೆ ಮೊದಲ ಪಂದ್ಯ
  • ಲಖನೌ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಎರಡನೇ ಪಂದ್ಯ

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 16ನೇ ಆವೃತ್ತಿಯಲ್ಲಿ ಇಂದು (ಏಪ್ರಿಲ್‌ 1) ಎರಡು ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ 3.30ಕ್ಕೆ ಮೊಹಾಲಿಯಲ್ಲಿ ನಡೆಯುವ ಐಪಿಎಲ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ ಪಂಜಾಬ್‌ ಕಿಂಗ್ಸ್‌ ಸವಾಲು ಎದುರಾಗಲಿದೆ.

ಲಖನೌನ ಏಕನಾ ಸ್ಟೇಡಿಯಂನಲ್ಲಿ ನಡೆಯುವ ಎರಡನೇ ಪಂದ್ಯದಲ್ಲಿ ಕೆ ಎಲ್ ರಾಹುಲ್‌ ಸಾರಥ್ಯದ ಲಖನೌ ಸೂಪರ್‌ ಜಯಂಟ್ಸ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಏಕನಾ ಸ್ಟೇಡಿಯಂನಲ್ಲಿ ಆತಿಥೇಯ ತಂಡ ಮೊದಲ ಬಾರಿಗೆ ಕಣಕ್ಕಿಳಿಯಲಿದೆ. ಈ ಮೈದಾನದಲ್ಲಿ ಇದುವರೆಗೂ 6 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿದ್ದು, 5ರಲ್ಲೂ ಮೊದಲು ಬ್ಯಾಟ್‌ ಮಾಡಿದ ತಂಡ ಗೆಲುವು ಕಂಡಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯದಲ್ಲಿ ಟಾಸ್‌ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಶುಭಮನ್‌ ಅಮೋಘ ಆಟ; ಗುಜರಾತ್‌ಗೆ ರೋಚಕ ಜಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಆಟಗಾರರು ಗೈರು

ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಪಂಜಾಬ್‌ ಕಿಂಗ್ಸ್‌ ತಂಡಗಳ ಪ್ರಮುಖ ಆಟಗಾರರು ಶನಿವಾರದ ಪಂದ್ಯಕ್ಕೆ ಗೈರಾಗಲಿದ್ದಾರೆ. ನಾಯಕ ಶ್ರೇಯಸ್‌ ಅಯ್ಯರ್‌ ಗಾಯದ ಕಾರಣ ಸಂಪೂರ್ಣ ಐಪಿಎಲ್ ಟೂರ್ನಿಯಿಂದಲೇ ಹೊರನಡೆದಿದ್ದು, ಕೆಕೆಆರ್‌ ತಂಡವನ್ನು ನಿತೀಶ್‌ ರಾಣಾ ಮುನ್ನಡೆಸಲಿದ್ದಾರೆ. ಅನುಮತಿ ಪತ್ರ ದೊರೆಯದ ಕಾರಣ ಶಕೀಬ್‌ ಅಲ್‌ ಹಸನ್‌ ಇಂದಿನ ಪಂದ್ಯಕ್ಕೆ ಗೈರಾಗಲಿದ್ದಾರೆ.

ಪಂಜಾಬ್‌ ಐಪಿಎಲ್ ತಂಡಕ್ಕೆ ಹಿರಿಯ ಆಟಗಾರ ಶಿಖರ್‌ ಧವನ್‌ ನೂತನ ನಾಯಕನನ್ನಾಗಿ ನೇಮಕಗೊಂಡಿದ್ದಾರೆ. ಜಾನಿ ಬೇರ್‌ಸ್ಟೋ, ಕಗಿಸೋ ರಬಾಡಾ ಅನುಪಸ್ಥಿತಿಯಲ್ಲಿ ದುಬಾರಿ ಆಟಗಾರ ಸ್ಯಾಮ್‌ ಕರನ್‌ ಮೇಲೆ ಕಿಂಗ್ಸ್‌ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದೆ.  

ಡೆಲ್ಲಿಗೆ ಡೇವಿಡ್‌ ನಾಯಕ

ಟೀಮ್‌ ಇಂಡಿಯಾದಲ್ಲಿ ಖಾಯಂ ಸ್ಥಾನ ಗಿಟ್ಟಿಸಲು ಕೆ ಎಲ್‌ ರಾಹುಲ್‌ ಅವರಿಗೆ ಈ ಬಾರಿಯ ಐಪಿಎಲ್‌ ಅತ್ಯಂತ ಮಹತ್ವಾದ್ದಾಗಿದೆ. ರಿಷಭ್‌ ಪಂತ್‌ ಅನುಪಸ್ಥಿತಿಯಲ್ಲಿ ಡೇವಿಡ್‌ ವಾರ್ನರ್‌ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಬಲಿಷ್ಠ ಆಟಗಾರರನ್ನು ಹೊಂದಿರುವ ಡೆಲ್ಲಿ ಮೇಲ್ನೋಟಕ್ಕೆ ಲಖನೌ ವಿರುದ್ಧ ಗೆಲ್ಲುವ ಫೆವರಿಟ್‌ ತಂಡವಾಗಿ ಕಣಕ್ಕಿಳಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...