ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

Date:

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್ ಪ್ರವೇಶಿಸುವ ಮೂಲಕ ಪ್ರಶಸ್ತಿ ಸುತ್ತಿಗೆ ತಲುಪುವ ಭರವಸೆ ಮೂಡಿಸಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಎಡವಿದ್ದು, ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ.

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡವು ಆರ್‌ಸಿಬಿಯನ್ನು 4 ವಿಕೆಟ್‌ಗಳಿಂದ ಸೋಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜಸ್ಥಾನ ತಂಡದ ಸಂಘಟಿತ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ್ದ ಆರ್‌ಸಿಬಿಯ ಬ್ಯಾಟರ್‌ಗಳು, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ದಾಖಲಿಸಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು 19 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 174 ರನ್ ದಾಖಲಿಸುವ ಮೂಲಕ ಗೆಲುವು ದಾಖಲಿಸಿತು.

ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ ಮತ್ತು ಟಾಮ್ ಕ್ಯಾಡ್ಮೋರ್ 33 ಎಸೆತಗಳಲ್ಲಿ 46 ರನ್‌ ಹೊಡೆದರು. ಟಾಮ್ ಕ್ಯಾಡ್ಮೋರ್ 20 ರನ್‌ ಗಳಿಸಿ ಔಟಾದರೆ, ಯಶಸ್ವಿ ಜೈಸ್ವಾಲ್‌ 45 ರನ್‌(30 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌ ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌ 17 ರನ್‌ ಸಿಡಿಸಿ, ಸ್ಟಂಪ್ ಔಟಾದರು.

112 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ರಾಜಸ್ಥಾನ ವಿರಾಟ್‌ ಕೊಹ್ಲಿ ಅವರ ಅತ್ಯುತ್ತಮ ಥ್ರೋನಿಂದಾಗಿ 4ನೇ ವಿಕೆಟ್‌ ಕಳೆದುಕೊಂಡಿತು. 8 ರನ್‌ ಗಳಿಸಿದ್ದ ಧ್ರುವ್ ಜುರೆಲ್ ಎರಡನೇ ರನ್‌ ಓಡುವಾಗ ರನೌಟ್‌ಗೆ ಬಲಿಯಾದರು.

ಕೊನೆಯಲ್ಲಿ ರಿಯಾನ್ ಪರಾಗ್ 26 ಎಸೆತಗಳಲ್ಲಿ 36 ರನ್(2 ಬೌಂಡರಿ, 2 ಸಿಕ್ಸರ್‌) ಹಾಗೂ ಹೆಟ್ಮೇಯರ್‌ 26 ರನ್‌(14 ಎಸೆತ, 3 ಬೌಂಡರಿ, 1 ಸಿಕ್ಸರ್‌) ಗಳಿಸಿ, ಸಿರಾಜ್‌ಗೆ ವಿಕೆಟ್ ಒಪ್ಪಿಸಿದರು. ಪೊವೆಲ್‌ ಔಟಾಗದೇ 16 ರನ್‌ ಹೊಡೆದ ಪರಿಣಾಮ ರಾಜಸ್ಥಾನ ಪಂದ್ಯವನ್ನು 19 ಓವರ್‌ನಲ್ಲೇ ಗೆದ್ದುಕೊಂಡಿತು.

 

ಇಂದು ಗೆದ್ದಿರುವ ರಾಜಸ್ಥಾನ ತಂಡವು ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಆರ್‌ಸಿಬಿ ಸೋಲುವ ಮೂಲಕ ಟೂರ್ನಿಯಿಂದಲೇ ಹೊರಬಿದ್ದಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವು ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ. ಈ ಪಂದ್ಯವನ್ನು ಗೆದ್ದವರು ಫೈನಲ್‌ನಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡವನ್ನು ಎದುರಿಸಲಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...