ಐಪಿಎಲ್ 2023 | ಕಾಯುವಿಕೆಗೆ ಅಂತ್ಯ; ಅರ್ಜುನ್ ತೆಂಡೂಲ್ಕರ್ ಐಪಿಎಲ್ ಪದಾರ್ಪಣೆ

Date:

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಕೊನೆಗೂ ಐಪಿಎಲ್ ಟೂರ್ನಿಗೆ ಪದಾರ್ಪಣೆ ಮಾಡಿದ್ದಾರೆ.

ಕಳೆದ ಕೆಲ ವರ್ಷಗಳಿದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಭಾಗವಾಗಿದ್ದ ಅರ್ಜುನ್, ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದಾರೆ.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಾಯಕ ರೋಹಿತ್​ ಶರ್ಮಾ, ಕ್ಯಾಪ್​ ನೀಡುವ ಮೂಲಕ ಅರ್ಜುನ್’ರನ್ನು ಮೊದಲ ಬಾರಿಗೆ ಆಡುವ ಹನ್ನೊಂದರ ಬಳಗಕ್ಕೆ ಬರಮಾಡಿಕೊಂಡರು. ಈ ವೇಳೆ ಸಹೋದರಿ ಸಾರಾ ತೆಂಡೂಲ್ಕರ್​ ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಐಪಿಎಲ್ 2023 | ಮಹಿಳಾ ಚಾಂಪಿಯನ್ ತಂಡದ ಜೆರ್ಸಿ ಧರಿಸಲಿರುವ ಮುಂಬೈ ಇಂಡಿಯನ್ಸ್

ಕಾಕತಾಳೀಯವೆಂದರೆ ಸಚಿನ್ ತೆಂಡೂಲ್ಕರ್ ಅವರು ಮುಂಬೈ ಇಂಡಿಯನ್ಸ್ ಪರ‌ ಆಡುತ್ತಿದ್ದ ವೇಳೆ, ಐಪಿಎಲ್‌ನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲ ಬಾರಿಗೆ ಬೌಲಿಂಗ್ ಮಾಡಿದ್ದರು. ತಮ್ಮ ಚೊಚ್ಚಲ ಓವರ್‌ನಲ್ಲಿ ಸಚಿನ್ 5 ರನ್ ಬಿಟ್ಟು ಕೊಟ್ಟಿದ್ದರು. ಭಾನುವಾರದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ 5 ರನ್ ಬಿಟ್ಟುಕೊಟ್ಟರು.

2022ರ ಐಪಿಎಲ್ ಮೆಗಾ ಹರಾಜಿನಲ್ಲಿ ₹30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ತನ್ನಲ್ಲೇ ಉಳಿಸಿಕೊಂಡಿತ್ತು.

ಇದಕ್ಕೂ ಮೊದಲು 2021ರಲ್ಲಿ ಮುಂಬೈ ತಂಡವು ಅವರನ್ನು ₹20 ಲಕ್ಷ ಮೂಲ ಬೆಲೆಗೆ ಖರೀದಿಸಿತ್ತು.

ಕಳೆದ ಆವೃತ್ತಿಯ ರಣಜಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸುವ ಮೂಲಕ ತಂದೆ ಸಚಿನ್​ ಅವರ ದಾಖಲೆ ಸರಿಗಟ್ಟಿದ್ದರು.

ಇದುವರೆಗೆ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅರ್ಜುನ್ 12 ವಿಕೆಟ್ ಪಡೆದಿದ್ದು,‌ ಬ್ಯಾಟಿಂಗ್‌ನಲ್ಲಿ 233 ರನ್ ಗಳಿಸಿದ್ದಾರೆ.

​ಕೆಕೆಆರ್ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ತಂಡದ ಖಾಯಂ ನಾಯಕ ರೋಹಿತ್​ ಶರ್ಮ ಕ್ಷೇತ್ರ ರಕ್ಷಣೆ ಸಂದರ್ಭ ಮೈದಾನಕ್ಕೆ ಇಳಿಯದ ಕಾರಣ ಸೂರ್ಯಕುಮಾರ್​ ಯಾದವ್​ ತಂಡವನ್ನು ಮುನ್ನಡೆಸಿದರು.

ಮುಂಬೈ vs ಕೆಕೆಆರ್

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯ 22ನೇ ಪಂದ್ಯ ಅಭಿಮಾನಿಗಳಿಗೆ ವಿಶೇಷ ಅನುಭವ ನೀಡಲಿದೆ.

ಹೆಣ್ಣು ಮಕ್ಕಳಿಗೆ ವಿಶೇಷ ಗೌರವ ನೀಡುವ ಉದ್ದೇಶದಿಂದ, ಇತ್ತೀಚೆಗಷ್ಟೇ ಮುಕ್ತಾಯ ಕಂಡ ಚೊಚ್ಚಲ ಪ್ರೀಮಿಯರ್‌ ಲೀಗ್‌‌ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನೇರಿರುವ ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿ ಭಾನುವಾರ ರೋಹಿತ್ ಶರ್ಮಾ ಪಡೆ ವಾಂಖೆಡೆಯಲ್ಲಿ ಕಣಕ್ಕಿಳಿದಿದೆ.

ಮುಂಬೈ ಇಂಡಿಯನ್ಸ್ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಜೊತೆ ಟಾಸ್‌ನಲ್ಲಿ ಭಾಗವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...