ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

Date:

ಐಪಿಎಲ್‌ ಪಂದ್ಯ ವೀಕ್ಷಿಸುತ್ತಿದ್ದ ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ದುಬಾರಿ ಮೊಬೈಲ್‌ ಫೋನ್‌ ಕಳ್ಳರ ʻಪಾಲಾಗಿರುವʼ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಏಪ್ರಿಲ್ 17ರಂದು ಉದ್ಯಾನ ನಗರಿಯ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ಆರ್‌ಸಿಬಿ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳ ನಡುವೆ ಪಂದ್ಯ ನಡೆದಿತ್ತು. ಆದಾಯ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಐಆರ್‌ಎಸ್ ಅಧಿಕಾರಿ ಬಿ ಆರ್ ರಮೇಶ್ ಎಂಬುವವರು ಈ ಪಂದ್ಯವನ್ನು ವೀಕ್ಷಿಸಲು ತೆರಳಿದ್ದರು. ಈ ವೇಳೆ ಇವರ ಬಳಿ ಇದ್ದ ದುಬಾರಿ ಮೌಲ್ಯದ ಮೊಬೈಲ್‌ ಫೋನ್‌ ಅನ್ನು ಕಳ್ಳರು ಎಗರಿಸಿದ್ದಾರೆ.

ಈ ಕುರಿತು ಸಹಕಾರ ನಗರದ ನಿವಾಸಿ ಬಿ ಆರ್ ರಮೇಶ್ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ರುದಾರೆ. ʻನಾನು ಗೇಟ್ ನಂ.6ರ ಮೂಲಕ ಕ್ರೀಡಾಂಗಣಕ್ಕೆ ಪ್ರವೇಶಿಸುತ್ತಿದ್ದ ವೇಳೆ ಕಳ್ಳತನವಾಗಿದೆ. ಕಳುವಾದ ಮೊಬೈಲ್ ಮೌಲ್ಯ 80 ಸಾವಿರ ರೂಪಾಯಿʼ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಮಣ್ಣಿನ ಹೆಣ್ಣು ದನಿಗಳು | ಸಮಾಜ ಸ್ಪಂದನಶೀಲೆ- ಸೌಭಾಗ್ಯ ಸಿ. 

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

​‘ಮುಂದಿನ ದಿನಗಳಲ್ಲಿ ಸವಾಲು ಇನ್ನಷ್ಟು ಕಠಿಣವಾಗಲಿದೆ’: ವಿರಾಟ್ ಕೊಹ್ಲಿ ಸಂದೇಶ ಯಾರಿಗೆ?

ಐಪಿಎಲ್ 2026ರ ಆವೃತ್ತಿಯು ಮಾರ್ಚ್ 28 ರಂದು ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ...

ಐಪಿಎಲ್ | 16 ವರ್ಷಗಳಲ್ಲೇ ಕಳಪೆ ಸಾಧನೆ: ಮೌನ ಮುರಿದ ಕೆಕೆಆರ್ ನಾಯಕ

2025ರ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್...

ಇಂದಿನಿಂದ ಪ್ಲಾಟ್‌ಫಾರ್ಮ್‌ ದರ ಏರಿಕೆ: ಗ್ರಾಹಕರಿಗೆ ಸ್ವಿಗ್ಗಿ, ಜೊಮಾಟೊ ಶಾಕ್‌!

ಜೊಮಾಟೊ ತನ್ನ ಪ್ಲಾಟ್‌ಫಾರ್ಮ್‌ ಬೆಲೆಯನ್ನು 19% ಹಚ್ಚಿಸಿದೆ. ಈ ಮೂಲಕ ಪ್ರತಿ...