ಐಪಿಎಲ್ 2023 | ಪಂಜಾಬ್‌ ಕಿಂಗ್ಸ್ – ಆರ್‌ಆರ್‌; ಪ್ಲೇ ಆಫ್‌ ಪ್ರವೇಶಕ್ಕೆ ಉಭಯ ತಂಡಗಳಿಗೆ ಗೆಲುವು ಅನಿವಾರ್ಯ

Date:

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಐಪಿಎಲ್‌ 2023ರ 16ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣಸಾಡಲಿವೆ. ಎರಡೂ ತಂಡಗಳಿಗೂ ಇದು ಲೀಗ್‌ ಹಂತದಲ್ಲಿ ಕೊನೆಯ ಪಂದ್ಯವಾಗಿದ್ದು ಪ್ಲೇಆಫ್ ಪ್ರವೇಶಕ್ಕೆ ಉಭಯ ತಂಡಗಳು ಗೆಲುವು ಸಾಧಿಸುವ ಅಗತ್ಯವಿದೆ.

ಪಂದ್ಯ ಆರಂಭಗೊಂಡಿದ್ದು ಟಾಸ್‌ ಗೆದ್ದ ಆರ್‌ಆರ್‌ ಫೀಲ್ಡಿಂಗ್‌ ಆಯ್ದುಕೊಂಡಿದೆ. ಪಂಜಾಬ್‌ ಕಿಂಗ್ಸ್ ಬ್ಯಾಟಿಂಗ್‌ ಆರಂಭಿಸಿದ್ದು 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 45 ರನ್‌ ಗಳಿಸಿದೆ.

ಪಂಜಾಬ್‌ ಹಾಗೂ ರಾಜಸ್ಥಾನ್ ತಲಾ 6 ಪಂದ್ಯಗಳನ್ನು ಗೆದ್ದು, 7ರಲ್ಲಿ ಸೋಲು ಕಂಡಿವೆ. ಆದರೆ ನಿವ್ವಳ ರನ್‌ರೇಟ್‌ನಲ್ಲಿ ಉತ್ತಮ ಸ್ಥಿತಿಯಲ್ಲಿರುವ ಆರ್‌ಆರ್‌ ಗೆಲುವು ಸಾಧಿಸಿದರೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಪಂಜಾಬ್‌ ಕಿಂಗ್ಸ್ ಕೂಡ ಅಂಕಪಟ್ಟಿಯ ಮೊದಲ ನಾಲ್ಕರ ಪಟ್ಟಿಯಲ್ಲಿ ಸ್ಥಾನ ಪಡೆಯಬೇಕೆಂದರೆ ಭಾರಿ ಅಂತರದಲ್ಲಿ ಜಯಗಳಿಸಬೇಕಿದೆ. ಇನ್ನೊಂದು ಪ್ರಮುಖ ಅಂಶವೆಂದರೆ ಎರಡೂ ತಂಡಗಳಲ್ಲಿ ಯಾರೇ ಗೆದ್ದರೂ ನಂತರದ ಪಂದ್ಯಗಳಲ್ಲಿ ಬರುವ ಫಲಿತಾಂಶದ ರನ್‌ರೇಟ್‌ ಲೆಕ್ಕಾಚಾರದವರೆಗೂ ಕಾಯುವುದು ಅನಿವಾರ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿಯ ಟೂರ್ನಿಯ ಒಂದು ಮುಖಾಮುಖಿಯ ಪಂದ್ಯವೂ ಸೇರಿದಂತೆ ಎರಡೂ ತಂಡಗಳು ಇಲ್ಲಿಯವರೆಗೂ ಒಟ್ಟು 25 ಐಪಿಎಲ್ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ರಾಜಸ್ಥಾನ್ 14 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 11 ಪಂದ್ಯಗಳಲ್ಲಿ ಜಯಗಳಿಸಿದೆ. ಎರಡೂ ತಂಡಗಳಿಗೂ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದೆ.

ಈ ಸುದ್ದಿ ಓದಿದ್ದೀರಾ? ಹೊರಗೆ ಮಾತನಾಡುವವರ ಕುರಿತು ತಲೆಕೆಡಿಸಿಕೊಳ್ಳುವುದಿಲ್ಲ; ವಿರಾಟ್ ಕೊಹ್ಲಿ ‌

ರಾಜಸ್ಥಾನ ತಂಡದ ಬ್ಯಾಟಿಂಗ್​ ಶಕ್ತಿ ಎನಿಸಿರುವ ಯಶಸ್ವಿ ಜೈಸ್ವಾಲ್​ ಅವರೇ ತಂಡಕ್ಕೆ ಆಧಾರವಾಗಿದ್ದಾರೆ. ತಂಡದಿಂದ ಗರಿಷ್ಠ ಮೊತ್ತ ಗಳಿಸಿರುವ ಆಟಗಾರ ಆಗಿದ್ದಾರೆ. ಜೋಸ್​ ಬಟ್ಲರ್, ಸಂಜು ಸ್ಯಾಮ್ಸನ್ ಆಗಾಗ್ಗೆ ಅಬ್ಬರಿಸಿದರೆ, ಉಳಿದವರಿಂದ ಅಂತಹ ಪ್ರದರ್ಶನವೂ ಬಂದಿಲ್ಲ. ಬೌಲಿಂಗ್‌ನಲ್ಲಿ​ ಚಹಲ್ ಹೊರತುಪಡಿಸಿ ಇತರೆ ಬೌಲರ್​ಗಳು ವಿಕೆಟ್​ ಪಡೆಯಲು ಪರದಾಟ ನಡೆಸುತ್ತಿದ್ದಾರೆ. ಮತ್ತೊಂದೆಡೆ ಪಂಜಾಬ್​ ತಂಡದಲ್ಲೂ ಲಿಯಾಮ್​ ಲಿವಿಂಗ್​ಸ್ಟೋನ್​ ಹೊರತುಪಡಿಸಿ ಯಾರೂ ಅಬ್ಬರಿಸುತ್ತಿಲ್ಲ. ಬೌಲಿಂಗ್​​ ವಿಭಾಗವೂ ಅತ್ಯಂತ ಕಳಪೆಯಾಗಿದೆ.

ಪಿಚ್ರಿಪೋರ್ಟ್

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಮೈದಾನವು ಬ್ಯಾಟಿಂಗ್ ಸ್ನೇಹಿಯಾಗಿದೆ. ಬ್ಯಾಟರ್​​ಗಳು ಉತ್ತಮವಾಗಿ ರನ್ ಗಳಿಸಲಿದ್ದಾರೆ. ಪಂದ್ಯ ಮುಂದುವರೆದಂತೆ ಸ್ಪಿನ್ನರ್‌ಗಳಿಗೂ ಕೊಂಚ ಮಟ್ಟಿಗೆ ನೆರವಾಗಲಿದೆ.

ಪಂಜಾಬ್ಕಿಂಗ್ಸ್​​ ತಂಡ

ಶಿಖರ್ ಧವನ್ (ನಾಯಕ), ಪ್ರಭಾ ಸಿಮ್ರಾನ್ ಸಿಂಗ್, ಅತರ್ವ ತೈಡೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್​ ಕೀಪರ್), ಸ್ಯಾಮ್ ಕರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಕಗ್ಗಿಸೋ ರಬಾಡ, ಆರ್ಷ್‌ದೀಪ್ ಸಿಂಗ್.

ರಾಜಸ್ಥಾನ್ರಾಯಲ್ಸ್ತಂಡ

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ, ವಿಕೆಟ್​ ಕೀಪರ್​), ದೇವದತ್ ಪಡಿಕ್ಕಲ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ನವದೀಪ್‌ ಸೈನಿ, ಯುಜ್ವೇಂದ್ರ ಚಹಲ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...