ಭಾರತ – ಐರ್ಲೆಂಡ್‌ ಟಿ20 ಸರಣಿ: ಮೊದಲ ಪಂದ್ಯಕ್ಕೆ ಮಳೆಯ ಭೀತಿ?

Date:

ಭಾರತ ಮತ್ತು ಐರ್ಲೆಂಡ್‌ ನಡುವಿನ ಟಿ20 ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಇಂದಿನಿಂದ (ಆಗಸ್ಟ್ 18) ಪ್ರಾರಂಭವಾಗಲಿದೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿವೆ. ಹನ್ನೊಂದು ತಿಂಗಳ ವಿಶ್ರಾಂತಿ ಬಳಿಕ ತಂಡಕ್ಕೆ ಮರಳಿ ನಾಯಕತ್ವ ವಹಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ಅವರ ಮೇಲೆ ಅಭಿಮಾನಿಗಳ ಜೊತೆ ಆಯ್ಕೆ ಸಮಿತಿಯ ಕಣ್ಣು ಕೂಡ ನೆಟ್ಟಿದೆ.

ಬಹುತೇಕ ಒಂದು ವರ್ಷದ ನಂತರ ಟೀಂ ಇಂಡಿಯಾದಲ್ಲಿ ಪುನರಾಗಮನ ಮಾಡುತ್ತಿರುವ ಬುಮ್ರಾ ಮೇಲೆ ಹಲವು ನಿರೀಕ್ಷೆಗಳಿವೆ. ಭಾರತದ ಪ್ರಬಲ ವೇಗದ ದಾಳಿಯ ಅನಿವಾರ್ಯ ಭಾಗವಾಗಿರುವುದರಿಂದ, 29 ವರ್ಷದ ಬುಮ್ರಾ ಅವರ ಪುನರಾಗಮನವು ಭಾರತ ತಂಡ ಮುಂದೆ ಪಾಲ್ಗೊಳ್ಳುವ ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್ ಟೂರ್ನಿಗೆ ಈ ಸರಣಿ ನಿರ್ಣಾಯಕವಾಗಿದೆ.

ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಋತುರಾಜ್‌ ಗಾಯಕ್‌ವಾಡ್, ರಿಂಕು ಸಿಂಗ್ ಮತ್ತು ಜಿತೇಶ್ ಶರ್ಮಾ ಸರಣಿಯಲ್ಲಿ ಆಡುತ್ತಿದ್ದಾರೆ. ಕರ್ನಾಟಕದ ಪ್ರಸಿದ್ಧ ಕೃಷ್ಣ ಕೂಡ ಹಲವು ದಿನಗಳ ಬಿಡುವಿನ ಬಳಿಕ ತಂಡಕ್ಕೆ ಮರಳಿದ್ದಾರೆ. ಏಷ್ಯಾ ಕಪ್‌ನಲ್ಲಿ ಸ್ಥಾನ ಪಡೆಯಲು ಪ್ರಸಿದ್ಧ ಕೃಷ್ಣ ಅವರಿಗೆ ಪ್ರಸ್ತುತ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವುದು ಮುಖ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ತಂಡ ಇಲ್ಲಿಯವರೆಗೂ ಐರ್ಲೆಂಡ್ ವಿರುದ್ಧ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳೊಂದಿಗೆ ಎಂಟು ಪಂದ್ಯಗಳನ್ನು ಆಡಿದ್ದು, ಎಲ್ಲವನ್ನೂ ಗೆದ್ದಿದೆ. ಐರ್ಲೆಂಡ್‌ ತಂಡಕ್ಕೂ ತವರಿನಲ್ಲಿ ಆಡುವ ಸರಣಿ ಪ್ರಮುಖವಾಗಿದೆ.

ಮಳೆ ಭೀತಿ

ಮೂರು ಪಂದ್ಯಗಳ ಸರಣಿಯಾಡುವ ಡಬ್ಲಿನ್‌ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಕಾರಣ ಮಳೆಯ ಭೀತಿ ಎದುರಾಗಿದೆ. ಸ್ಥಳೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದು ಶೇ. 68 ರಷ್ಟು ಮಳೆ ಬೀಳುವ ಸಾಧ್ಯತೆಯಿದೆ. ಉಳಿದ ಪಂದ್ಯಗಳ ದಿನಗಳಲ್ಲಿ ಮಳೆ ಬೀಳುವ ಸಾಧ್ಯತೆ ಶೇ. 96 ಕ್ಕಿಂತ ಹೆಚ್ಚಾಗಿರುತ್ತದೆ ಎಂದು ಊಹಿಸಲಾಗಿದೆ.

ಭಾರತ – ಐರ್ಲೆಂಡ್ ಪ್ರವಾಸ ವೇಳಾಪಟ್ಟಿ:

18 ಆಗಸ್ಟ್ 2023 – 1 ನೇ ಟಿ20 ಪಂದ್ಯ – ದಿ ವಿಲೇಜ್, ಡಬ್ಲಿನ್

20 ಆಗಸ್ಟ್ 2023 – 2 ನೇ ಟಿ20 ಪಂದ್ಯ – ದಿ ವಿಲೇಜ್, ಡಬ್ಲಿನ್

23 ಆಗಸ್ಟ್ 2023 – 3 ನೇ ಟಿ20 ಪಂದ್ಯ – ದಿ ವಿಲೇಜ್, ಡಬ್ಲಿನ್

ಉಭಯ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ:

ಭಾರತ:

ಜಸ್ಪ್ರೀತ್ ಬುಮ್ರಾ (ನಾಯಕ), ರಿತುರಾಜ್ ಗಾಯಕ್ವಾಡ್ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಹಬಾಜ್ ಅಹ್ಮದ್ , ಪ್ರಸಿದ್ಧ ಕೃಷ್ಣ, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್ ಮತ್ತು ಅವೇಶ್ ಖಾನ್.

ಐರ್ಲೆಂಡ್:

ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್ (ವಿಕೆಟ್ ಕೀಪರ್‌), ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋರ್ಕೋಮ್ ಬೆಂಜಮಿನ್ ವೈಟ್ ಮತ್ತು ಕ್ರೇಗ್ ಯಂಗ್.

ಪಂದ್ಯ ಆರಂಭ: ಸಂಜೆ 7.30

ನೇರ ಪ್ರಸಾರ: ಜಿಯೋ ಸಿನಿಮಾ ಆಪ್,ಸ್ಪೋರ್ಟ್ಸ್ 18 ಮತ್ತು ಡಿಡಿ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...