ಐಸಿಸಿ ಕೆಂಗಣ್ಣಿಗೆ ಗುರಿಯಾದ ರಿಷಭ್ ಪಂತ್: ಏನಿದು ವಿವಾದ, ಶಿಕ್ಷೆ?

Date:

ಲೀಡ್ಸ್ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಟೀಂ ಇಂಡಿಯಾದ ಆಟಗಾರ ರಿಷಭ್ ಪಂತ್​ ಅವರು ಐಸಿಸಿಯಿಂದ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಷಭ್ ಪಂತ್‌ಗೆ ವಾಗ್ದಂಡನೆ ವಿಧಿಸಲಾಗಿದ್ದು, ಪಂತ್ ಅವರು ಲೆವೆಲ್ 1 ರ ಅಡಿಯಲ್ಲಿ ತಪ್ಪಿತಸ್ಥನೆಂದು ಕಂಡುಬಂದಿದೆ. ಹೀಗಾಗಿ ಮ್ಯಾಚ್ ರೆಫರಿ, ಪಂತ್​ಗೆ ವಾಗ್ದಂಡನೆ ವಿಧಿಸಿದ್ದಾರೆ.

ಪಂತ್ ವಿರುದ್ಧ ಯಾವುದೇ ಮುಂದಿನ ಕ್ರಮ ಕೈಗೊಳ್ಳಲಾಗಿಲ್ಲ. ಐಸಿಸಿ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ, ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರವನ್ನು ಪ್ರತಿಭಟಿಸುವುದು ಅಥವಾ ಆಕ್ಷೇಪಿಸುವುದಕ್ಕೆ ಸಂಬಂಧಿಸಿದ ಆರ್ಟಿಕಲ್ 2.8 ರ ಅಡಿಯಲ್ಲಿ ಪಂತ್ ತಪ್ಪಿತಸ್ಥನೆಂದು ಕಂಡುಬಂದಿದ್ದಾರೆ. ಹೀಗಾಗಿ ಈ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪಂತ್ ಅವರ ಖಾತೆಗೆ 1 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ ಎಂದು ಐಸಿಸಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ವಿರುದ್ಧ ಮೊದಲ ಟೆಸ್ಟ್ | ಜೈಸ್ವಾಲ್‌ ಶತಕ: ರಾಹುಲ್‌ – ಗಿಲ್‌ ಐತಿಹಾಸಿಕ ದಾಖಲೆ

ಲೀಡ್ಸ್ ಟೆಸ್ಟ್‌ನ ಮೂರನೇ ದಿನದಂದು ಇಂಗ್ಲೆಂಡ್‌ನ ಮೊದಲ ಇನಿಂಗ್ಸ್‌ನ 61 ನೇ ಓವರ್‌ನಲ್ಲಿ ಚೆಂಡಿನ ಆಕಾರ ಬದಲಾಗಿದ್ದು ಅದನ್ನು ಬದಲಿಸುವಂತೆ ಪಂತ್, ಅಂಪೈರ್ ಬಳಿ ಮನವಿ ಮಾಡಿದರು. ಆದರೆ ಚೆಂಡನ್ನು ಗೇಜ್​ನಿಂದ ಪರೀಕ್ಷಿಸಿದ ಅಂಪೈರ್, ಚೆಂಡು ನಿಯಮಗಳಿಗನುಸಾರವಾಗಿ ಇದ್ದ ಕಾರಣ ಚೆಂಡನ್ನು ಬದಲಾಯಿಸಲು ನಿರಾಕರಿಸಿದರು. ಇದರಿಂದ ಅಸಮಾಧಾನಗೊಂಡ ಪಂತ್, ಅಂಪೈರ್ ಮುಂದೆ ಚೆಂಡನ್ನು ನೆಲದ ಮೇಲೆ ಎಸೆಯುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು. ಇದಕ್ಕಾಗಿ ಪಂತ್​ಗೆ ಇದೀಗ ವಾಗ್ದಂಡನೆ ವಿಧಿಸಲಾಗಿದೆ.

ಐಸಿಸಿ ಪತ್ರಿಕಾ ಪ್ರಕಟಣೆಯ ಪ್ರಕಾರ, ರಿಷಭ್ ಪಂತ್ ಆ ಪ್ರಕರಣದಲ್ಲಿ ತನ್ನ ತಪ್ಪನ್ನು ಮ್ಯಾಚ್ ರೆಫರಿ ರಿಚಿ ರಿಚರ್ಡ್ಸನ್ ಬಳಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಯ ಅಗತ್ಯವಿಲ್ಲ. ಆನ್-ಫೀಲ್ಡ್ ಅಂಪೈರ್‌ಗಳಾದ ಪಾಲ್ ರೈಫಲ್ ಮತ್ತು ಕ್ರಿಸ್ ಜಾಫ್ನಿ ಪಂತ್ ಅವರ ಪ್ರತಿಭಟನೆಯ ಬಗ್ಗೆ ಪಂದ್ಯದ ರೆಫರಿಗೆ ದೂರು ನೀಡಿದ್ದರು. ಅವರಲ್ಲದೆ, ಮೂರನೇ ಅಂಪೈರ್ ಶರ್ಫುದುಲ್ಲಾ ಮತ್ತು ನಾಲ್ಕನೇ ಅಂಪೈರ್ ಮೈಕ್ ಬರ್ನ್ಸ್ ಕೂಡ ಆರೋಪಗಳನ್ನು ಮಾಡಿದ್ದರು ಎಂದು ಐಸಿಸಿ ತಿಳಿಸಿದೆ.

ವಾಸ್ತವವಾಗಿ ಐಸಿಸಿ ನಿಯಮಗಳ ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಆಟಗಾರರಿಗೆ ಕನಿಷ್ಠ ಶಿಕ್ಷೆ ವಾಗ್ದಂಡನೆಯಾಗಿದೆ. ಗರಿಷ್ಠ ಶಿಕ್ಷೆಯೆಂದರೆ ಅವರ ಪಂದ್ಯ ಶುಲ್ಕದಲ್ಲಿ ಶೇಕಡಾ 50 ರಷ್ಟು ಕಡಿತ ಮತ್ತು ಒಂದು ಅಥವಾ ಎರಡು ಡಿಮೆರಿಟ್ ಅಂಕಗಳನ್ನು ನೀಡಲಾಗುವುದು. ಇದೀಗ ಪಂತ್, ಹಂತ 1 ರ ಅಡಿಯಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ವಾಗ್ದಂಡನೆ ವಿಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...