ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು ಕಾಶ್ಮೀರ; ತವರಿನಲ್ಲಿ ಕರ್ನಾಟಕಕ್ಕೆ ನಿರಾಸೆ

Date:

67 ವರ್ಷಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ತಂಡ 2025-26ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಇನ್ನೊಂದೆಡೆ, ತವರಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಕರ್ನಾಟಕ ತಂಡ ತನ್ನ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.

​ಫೈನಲ್ ಪಂದ್ಯ ಕೊನೆಯ ದಿನ ಅಂತಿಮವಾಗಿ ‘ಡ್ರಾ’ನಲ್ಲಿ ಕೊನೆಗೊಂಡಿತು. ಆದರೆ, ಮೊದಲ ಇನಿಂಗ್ಸ್‌ನಲ್ಲಿ ಸಾಧಿಸಿದ ಬೃಹತ್ ಮುನ್ನಡೆಯ ಆಧಾರದ ಮೇಲೆ ಜಮ್ಮುಕಾಶ್ಮೀರ ತಂಡವನ್ನು ವಿಜೇತ ಎಂದು ಘೋಷಿಸಲಾಯಿತು. ಮೊದಲ ಬಾರಿಗೆ ರಣಜಿ ಪ್ರಶಸ್ತಿ ಎತ್ತಿ ಹಿಡಿದ ಜಮ್ಮು ಮತ್ತು ಕಾಶ್ಮೀರ ತಂಡದ ಆಟಗಾರರು ಸಂಭ್ರಮದಲ್ಲಿ ತೇಲಿದರು.

ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ತಂಡ ತನ್ನ ಮೊದಲ ಇನಿಂಗ್ಸ್‌ನಲ್ಲಿ 584 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡ, ಬಲಿಷ್ಠ ಜಮ್ಮು ಮತ್ತು ಕಾಶ್ಮೀರ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲಾಗದೆ ಕೇವಲ 293 ರನ್‌ಗಳಿಗೆ ಸರ್ವಪತನ ಕಂಡಿತು. ಇದರಿಂದ ಜಮ್ಮು ಮತ್ತು ಕಾಶ್ಮೀರ ತಂಡಕ್ಕೆ 291 ರನ್‌ಗಳ ನಿರ್ಣಾಯಕ ಮೊದಲ ಇನಿಂಗ್ಸ್ ಮುನ್ನಡೆ ಲಭಿಸಿತು.

ಇದನ್ನು ಓದಿದ್ದೀರಾ? ರಣಜಿ ಟ್ರೋಫಿ ಫೈನಲ್: ಮೈದಾನದಲ್ಲಿ ಜಗಳವಾಡಿದ ಕರ್ನಾಟಕ – ಜಮ್ಮು ಕಾಶ್ಮೀರದ ಆಟಗಾರರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ನಂತರ ತನ್ನ ಎರಡನೇ ಇನಿಂಗ್ಸ್ ಆರಂಭಿಸಿದ ಜಮ್ಮು ಮತ್ತು ಕಾಶ್ಮೀರ ತಂಡ, 4 ವಿಕೆಟ್ ನಷ್ಟಕ್ಕೆ 342 ರನ್ ಗಳಿಸಿದ್ದಾಗ ಪಂದ್ಯವನ್ನು ಡ್ರಾ ಎಂದು ಪರಿಗಣಿಸಲಾಯಿತು. ಪಂದ್ಯ ಡ್ರಾ ಆದಕಾರಣ, ಮೊದಲ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಕಣಿವೆ ತಂಡ ಚಾಂಪಿಯನ್ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿತು.

​ಹುಬ್ಬಳ್ಳಿಯ ತವರಿನ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕರ್ನಾಟಕ ತಂಡ ಸುಲಭವಾಗಿ ಗೆಲುವು ಸಾಧಿಸಲಿದೆ ಎಂಬ ಅಭಿಮಾನಿಗಳ ನಿರೀಕ್ಷೆ ಹುಸಿಯಾಗಿದೆ. ಮೊದಲ ಇನಿಂಗ್ಸ್‌ನಲ್ಲಿ ನಿರಾಶಾದಾಯಕ ಬ್ಯಾಟಿಂಗ್ ಪ್ರದರ್ಶನ ಕರ್ನಾಟಕದ ಹಿನ್ನಡೆಗೆ ಮುಖ್ಯ ಕಾರಣವಾಯಿತು. ಬಲಿಷ್ಠ ತಂಡವನ್ನು ಹೊಂದಿದ್ದರೂ, ನಿರ್ಣಾಯಕ ಸಮಯದಲ್ಲಿ ತಕ್ಕ ಹೋರಾಟ ನಡೆಸದೆ ಹೋದದ್ದು ಕರ್ನಾಟಕದ ಸೋಲಿಗೆ ಕಾರಣವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...