ಸಂತೋಷ್ ಟ್ರೋಫಿ | 54 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದ ಕರ್ನಾಟಕ

Date:

  • ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ನಡೆದ ಫೈನಲ್‌ ಪಂದ್ಯ
  • ಮೇಘಾಲಯ ವಿರುದ್ಧ 3-2 ಅಂತರದಿಂದ ಗೆದ್ದ ಕರ್ನಾಟಕ

ಕರ್ನಾಟಕದ ಫುಟ್‌ಬಾಲ್‌ ಅಭಿಮಾನಿಗಳ ಐದು ದಶಕಗಳ ಕನಸು ಕೊನೆಗೂ ನನಸಾಗಿದೆ. ಪ್ರತಿಷ್ಠಿತ ಸಂತೋಷ್‌ ಟ್ರೋಫಿ ಫುಟ್‌ಬಾಲ್‌ ಪಂದ್ಯಾವಳಿಯಲ್ಲಿ ಕರ್ನಾಟಕ, 54 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರಿದೆ.

ಸೌದಿ ಅರೆಬಿಯದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್‌ ಫಹದ್‌ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ 76ನೇ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪಂದ್ಯದಲ್ಲಿ ಕರ್ನಾಟಕ, ಮೇಘಾಲಯವನ್ನು 3-2 ಗೋಲುಗಳ ಅಂತರದಿಂದ ಮಣಿಸಿ ಸಂಭ್ರಮದಲ್ಲಿ ತೇಲಾಡಿತು. ಇದರೊಂದಿಗೆ ವಿದೇಶಿ ನೆಲದಲ್ಲಿ ರಾಷ್ಟ್ರೀಯ ಚಾಂಪಿಯನ್‌ಶಿಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಯೂ ಕರ್ನಾಟಕ ತಂಡದ್ದಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್‌) ಸೌದಿ ಅರೆಬಿಯ ಫುಟ್‌ಬಾಲ್ ಫೆಡರೇಶನ್‌ ಜೊತೆ ಎಂಒಯುಗೆ ಸಹಿ ಹಾಕಿದೆ. ಈ ಹಿನ್ನಲೆಯಲ್ಲಿ ಈ ಬಾರಿ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನ ಸೆಮಿಫೈನಲ್ ಮತ್ತು ಫೈನಲ್‌ ಪಂದ್ಯಗಳನ್ನು ಸೌದಿ ಮೈದಾನಗಳಿಗೆ ಸ್ಥಳಾಂತರಿಸಲಾಗಿತ್ತು.

ಪಂದ್ಯ ಪ್ರಾರಂಭವಾಗಿ ಎರಡೇ ನಿಮಿಷದಲ್ಲಿ ಕರ್ನಾಟಕ, ಎಂ ಸುನಿಲ್ ಕುಮಾರ್ ಮೂಲಕ ಗೋಲಿನ ಖಾತೆ ತೆರೆದಿತ್ತು. ಬಳಿಕ 19ನೇ ನಿಮಿಷದಲ್ಲಿ ಬೆಕಿ ಓರಮ್  ಹಾಗೂ ಮೊದಲಾರ್ಧದ ಅಂತಿಮ ನಿಮಿಷದಲ್ಲಿ ರಾಬಿನ್ ಯಾದವ್ ಗೋಲು ಗಳಿಸಿದ್ದರು. ಮತ್ತೊಂದೆಡೆ ಮೊದಲ ಬಾರಿಗೆ ರಾಷ್ಟ್ರೀಯ ಫುಟ್‌ಬಾಲ್ ಚಾಂಪಿಯನ್‌ಶಿಪ್‌ನ ಫೈನಲ್‌ ಪ್ರವೇಶಿಸಿದ್ದ ಮೇಘಾಲಯ ಪರ ಬ್ರೋಲಿಂಗ್ಟನ್ ವಾರ್ಲರ್‌ಪಿಹ್ (9ನೇ ನಿಮಿಷ) ಮತ್ತು 60ನೇ ನಿಮಿಷದಲ್ಲಿ ಶೀನ್ ಸ್ಟೀವನ್ಸನ್ ಗೋಲು ಗಳಿಸಿದ್ದರು. ಹೆಚ್ಚುವರಿ ಸಮಯದಲ್ಲಿ ಫಿಗೋ ಸಿಂಡೈ ಅವರ ಸುಂದರ ಪ್ರಯತ್ನವು ಗೋಲ್‌ ಪೋಸ್ಟ್‌ಗೆ ಬಡಿಯಿತಾದರೂ ಗೋಲು ದಾಖಲಾಗಲಿಲ್ಲ.

ಈ ಸುದ್ದಿ ಓದಿದ್ದೀರಾ?: ಐಎಸ್‌ಎಲ್‌; ಸುನಿಲ್‌ ಛೆಟ್ರಿ ಗೋಲಿನ ಬಳಿಕ ಹೈಡ್ರಾಮಾ, ಪಂದ್ಯದ ನಡುವೆಯೇ ಮೈದಾನ ತೊರೆದ ಕೇರಳ ಬ್ಲಾಸ್ಟರ್ಸ್

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...