ಮುಂಬೈ ಕೋಟೆ ಕೆಡವಿದ ಕರ್ನಾಟಕ: ರಾಹುಲ್ ಶತಕ, ಸ್ಮರಣ್–ವಿದ್ಯಾಧರ್ ಸಾಹಸ; ಸೆಮಿಸ್‌ಗೆ ಲಗ್ಗೆ

Date:

ರಣಜಿ ಇತಿಹಾಸದಲ್ಲೇ ಅತ್ಯಂತ ರೋಚಕ ಎನಿಸಿದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಬಲಿಷ್ಠ ಮುಂಬೈ ತಂಡವನ್ನು ಅವರದೇ ನೆಲದಲ್ಲಿ ಮಣಿಸಿದ ಕರ್ನಾಟಕ ತಂಡವು 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಮುಂಬೈನ ಬಿಕೆಸಿ ಮೈದಾನದಲ್ಲಿ ನಡೆದ ಪಂದ್ಯದ ಅಂತಿಮ ದಿನದಾಟದಲ್ಲಿ ಕೆ.ಎಲ್. ರಾಹುಲ್ ಅವರ ಶತಕ ಹಾಗೂ 7ನೇ ವಿಕೆಟ್‌ಗೆ ಆರ್. ಸ್ಮರಣ್ ಮತ್ತು ವಿದ್ಯಾಧರ್ ಪಾಟೀಲ್ ಜೋಡಿ ನಡೆಸಿದ ಕೆಚ್ಚೆದೆಯ ಹೋರಾಟವು ರಾಜ್ಯ ತಂಡಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟಿತು. ಎರಡನೇ ಇನಿಂಗ್ಸ್‌ನಲ್ಲಿ ​ಗೆಲ್ಲಲು 325 ರನ್‌ಗಳ ಕಠಿಣ ಗುರಿ ಪಡೆದಿದ್ದ ಕರ್ನಾಟಕ, ಸೋಮವಾರದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು.

ಗುರಿ ಬೆನ್ನಟ್ಟುವಾಗ ಆರಂಭಿಕ ಆಘಾತ ಎದುರಿಸಿದ ತಂಡಕ್ಕೆ ಕೆ.ಎಲ್. ರಾಹುಲ್ (130) ಆಸರೆಯಾದರು. ಅನುಭವಿ ಆಟ ಪ್ರದರ್ಶಿಸಿದ ಅವರು ಶತಕ ಸಿಡಿಸಿ ತಂಡವನ್ನು ಪಂದ್ಯದಲ್ಲಿ ಉಳಿಸಿದರು. ಆದರೆ, ರಾಹುಲ್ ಮತ್ತು ನಾಯಕ ಮಯಾಂಕ್ ಅಗರ್ವಾಲ್ ಔಟಾದ ಬಳಿಕ ತಂಡ 6 ವಿಕೆಟ್ ಕಳೆದುಕೊಂಡು ಸೋಲಿನ ದವಡೆಗೆ ಸಿಲುಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? 103 ಡಿಗ್ರಿ ಜ್ವರದ ನಡುವೆಯೂ ‘ಸ್ಮೃತಿ’ ಪರಾಕ್ರಮ: ಆರ್‌ಸಿಬಿ ನಾಯಕಿಯ ಬದ್ಧತೆಗೆ ಎಲ್ಲಡೆ ಪ್ರಶಂಸೆ

​ಈ ನಿರ್ಣಾಯಕ ಹಂತದಲ್ಲಿ ಒಂದಾದ ಎಡಗೈ ಬ್ಯಾಟರ್ ಆರ್. ಸ್ಮರಣ್ ಅಜೇಯ 83 ಮತ್ತು ಆಲ್ರೌಂಡರ್ ವಿದ್ಯಾಧರ್ ಪಾಟೀಲ್ ಅಜೇಯ 31 ರನ್‌ಗಳು ಮುಂಬೈ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. 7ನೇ ವಿಕೆಟ್‌ಗೆ ಈ ಜೋಡಿ ಮುರಿಯದ ಅಮೂಲ್ಯ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಒತ್ತಡದ ನಡುವೆಯೂ ತಣ್ಣನೆಯ ಮನಸ್ಥಿತಿಯಲ್ಲಿ ಬ್ಯಾಟ್ ಬೀಸಿದ ಸ್ಮರಣ್ ಮತ್ತು ವಿದ್ಯಾಧರ್, ಮುಂಬೈ ಕೈಯಲ್ಲಿದ್ದ ಪಂದ್ಯವನ್ನು ಕಸಿದುಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ 120 ಮತ್ತು 377 ರನ್ ಕಲೆಹಾಕಿತ್ತು. ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 173 ರನ್ ಗಳಿಸಿತ್ತು. 325 ರನ್‌ಗಳ ಸವಾಲಿನ ಗುರಿ ಪಡೆದ ಕರ್ನಾಟಕ, ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 325 ರನ್ ಗಳಿಸಿ ಐತಿಹಾಸಿಕ ಜಯ ದಾಖಲಿಸಿತು.

​ಸಂಕ್ಷಿಪ್ತ ಸ್ಕೋರ್:
​ಮುಂಬೈ: 120 ಮತ್ತು 377
​ಕರ್ನಾಟಕ: 173 ಮತ್ತು 325/6 (ಗುರಿ: 325)
​ಪ್ರಮುಖಾಂಶ: ಕೆ.ಎಲ್. ರಾಹುಲ್ (130), ಆರ್. ಸ್ಮರಣ್(83) ಮತ್ತು ವಿದ್ಯಾಧರ್ ಪಾಟೀಲ್(31)
​ಫಲಿತಾಂಶ: ಕರ್ನಾಟಕಕ್ಕೆ 4 ವಿಕೆಟ್‌ಗಳ ಜಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...