ಐಪಿಎಲ್ | ಕೆಕೆಆರ್‌ಗೆ ಜಯ: ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದ ಮಿಚೆಲ್ ಸ್ಟಾರ್ಕ್

Date:

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 51ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲಿಸಿದ್ದು, ಪ್ಲೇ ಆಫ್ ಕನಸಿಗೆ ತಣ್ಣೀರೆರಚಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆಕೆಆರ್ ತಂಡವು, ಮುಂಬೈ ಪರ ಜಸ್ಪ್ರೀತ್ ಬುಮ್ರಾ ಮತ್ತು ನುವಾನ್ ತುಷಾರ ಬೌಲಿಂಗ್ ದಾಳಿಯ ನಡುವೆಯೂ ನಿಗದಿತ 20 ಓವರ್‌ಗಳಲ್ಲಿ ವೆಂಕಟೇಶ್‌ ಅಯ್ಯರ್‌ ಗಳಿಸಿದ ಅರ್ಧಶತಕದ ನೆರವಿನಿಂದ ಕೆಕೆಆರ್ 169 ರನ್ ಗಳಿಸಲಷ್ಟೆ ಶಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಾಧಾರಣ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ತಂಡ, ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್‌ಗೆ 145 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 24 ರನ್‌ಗಳಿಂದ ಸೋಲೊಪ್ಪಿಕೊಂಡಿತು.

ಕೆಕೆಆರ್ ತಂಡದ ಕರಾರುವಕ್ಕಾದ ಬೌಲಿಂಗ್‌ಗೆ ರನ್ ಗಳಿಸಲು ಪರದಾಡಿದ ಮುಂಬೈ ಬ್ಯಾಟರ್‌ಗಳು, ವಿಕೆಟ್ ಒಪ್ಪಿಸುವ ಮೂಲಕ ಪೆವಿಲಿಯನ್ ಪರೇಡ್ ನಡೆಸಿದರು.

ಮುಂಬೈ ಪರ ಆರಂಭಿಕರಾಗಿ ಕಣಕ್ಕೀಳಿದ ಇಶಾನ್‌ ಕಿಶಾನ್ ಮತ್ತು ರೋಹಿತ್‌ ಶರ್ಮಾ ಜೋಡಿ ಮತ್ತೆ ಉತ್ತಮ ರನ್‌ ಕಲೆ ಹಾಕುವುದಲ್ಲಿ ಎಡವಿತು. ಒಂದು ಸಿಕ್ಸರ್‌ ಹಾಗೂ ಬೌಂಡರಿಗಷ್ಟೆ ಸೀಮಿತವಾದ ಇಶಾನ್ (13) ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು. ಬಳಿಕ ರೋಹಿತ್‌ ಶರ್ಮಾ ಕೂಡ 11 ರನ್‌ಗೆ ಸುನಿಲ್‌ ನರೈನ್‌ ಅವರಿಗೆ ಔಟ್‌ ಆದರು.

ತಂಡಕ್ಕೆ ಆಸರೆಯಾಗಬೇಕಿದ್ದ ನಾಯಕ ಹಾರ್ದಿಕ್‌ ಪಾಂಡ್ಯ ಕೇವಲ ಒಂದು ರನ್‌ಗೆ ಆಂಡ್ರೆ ರಸೆಲ್‌ ಬೌಲಿಂಗ್‌ನಲ್ಲಿ ವಿಕೆಟ್‌ ಕಳೆದುಕೊಂಡರು.

ಮುಂಬೈನ ಸ್ಟಾರ್ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಅರ್ಧಶತಕ ಗಳಿಸಿ(56 ರನ್) ತಂಡವನ್ನು ಗೆಲುವಿಮ ಕಡೆಗೆ ಕೊಂಡೊಯ್ಯಲು ಶ್ರಮಿಸಿದರು. ಆದರೆ ಅದಕ್ಕೆ ಆ್ಯಂಡ್ರೂ ರಸೆಲ್ ಅವಕಾಶ ನೀಡಲಿಲ್ಲ. ತನ್ನ ಬೌಲಿಂಗ್‌ನಲ್ಲಿ ಸೂರ್ಯ ಕುಮಾರ್ ಕುಮಾರ್ ಅವರ ವಿಕೆಟ್ ಪಡೆಯುವ ಮೂಲಕ ಪಂದ್ಯವನ್ನು ಕೆಕೆಆರ್ ಕಡೆಗೆ ತಿರುಗಿಸಿದರು.

ಕೊನೆಯಲ್ಲಿ ಮುಂಬೈ ಗೆಲುವಿಗೆ ಹೋರಾಟ ನಡೆಸಿದ ಟಿಮ್‌ ಡೇವಿಡ್‌ 24 ರನ್‌ಗಳಿಸಿ ಮಿಚೆಲ್‌ ಸ್ಟಾರ್ಕ್‌ಗೆ ವಿಕೆಟ್‌ ನೀಡಿ ಹೊರ ನಡೆದರು. ಬಳಿಕ ಬಂದ ಪಿಯೂಷ್‌ ಚಾವ್ಲಾ ಹಾಗು ಕ್ರೀಸ್‌ನಲ್ಲಿದ್ದ ಜೆರಾಲ್ಡ್ ಕೋಟ್ಜಿ ಅವರನ್ನು ಮಿಚೆಲ್‌ ಸ್ಟಾರ್ಕ್‌ ಔಟ್‌ ಮಾಡಿದರು. ಹೀಗಾಗಿ ಮುಂಬೈ 18.5 ಓವರ್‌ಗಳಲ್ಲಿ ಅಲೌಟ್‌ ಆಗುವ ಮೂಲಕ ಕೆಕೆಆರ್‌ ಎದುರು ಪಂದ್ಯವನ್ನು 24 ರನ್‌ಗಳಿಂದ ಸೋಲಬೇಕಾಯಿತು.

ಮುಂಬೈನ‌ ವಾಂಖೆಡೆ ಸ್ಟೇಡಿಯಂನಲ್ಲಿ ಬರೋಬ್ಬರಿ 12 ವರ್ಷಗಳ ಬಳಿಕ ಕೆಕೆಆರ್ ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ.

ಕೆಕೆಆರ್‌ ಪರ ಮಿಚೆಲ್ ಸ್ಟಾರ್ಕ್ 4 ವಿಕೆಟ್‌ ಪಡೆದರೆ, ಸುನಿಲ್ ನರೈನ್, ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ 2 ವಿಕೆಟ್‌ ಕಬಳಿಸುವ ಮೂಲಕ ಕೆಕೆಆರ್‌ ಗೆಲುವಿನಲ್ಲಿ ತಮ್ಮದೇ ಕೊಡುಗೆ ನೀಡಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...