ಐಪಿಎಲ್ | ಮೈದಾನದಲ್ಲಿ ಅನುಚಿತ ವರ್ತನೆ: ಕೆಕೆಆರ್‌ನ ಗೆಲುವಿನ ರೂವಾರಿ ಹರ್ಷಿತ್ ರಾಣಾಗೆ ದಂಡ

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಶನಿವಾರ ಸಂಜೆ ನಡೆದ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಕೊನೆಯವರೆಗೂ ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ ಗೆಲುವಿನ ರೂವಾರಿಯಾಗಿದ್ದ ಕೆಕೆಆರ್‌ನ ವೇಗಿ ಹರ್ಷಿತ್ ರಾಣಾ ನಡೆದುಕೊಂಡಿದ್ದ ಅನುಚಿತ ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಣಾಗೆ ದಂಡ ವಿಧಿಸಲಾಗಿದೆ.

ಐಪಿಎಲ್​ನ ಮೂರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 4 ರನ್​ಗಳ ರೋಚಕ ಜಯ ಸಾಧಿಸಿತ್ತು. ಈ ರೋಚಕ ಗೆಲುವಿನ ರೂವಾರಿ, ಯುವ ವೇಗಿ ಹರ್ಷಿತ್ ರಾಣಾ​ಗೆ ಪಂದ್ಯದ ಶುಲ್ಕದ ಶೇ.60 ರಷ್ಟು ದಂಡ ವಿಧಿಸಲಾಗಿದೆ.

ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಹರ್ಷಿತ್ ರಾಣಾ, ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ್ದರು. ಎಸ್​ಆರ್​ಹೆಚ್ ತಂಡದ ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದು ಫ್ಲೈಯಿಂಗ್ ಕಿಸ್ ನೀಡಿ ಬೀಳ್ಕೊಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಕೊನೆಯ ಓವರ್​ನಲ್ಲಿ ಹೆನ್ರಿ ಕ್ಲಾಸೆನ್ ವಿಕೆಟ್ ಕಬಳಿಸಿದ ಬಳಿಕ ಪೆವಿಲಿಯನ್​ಗೆ ದಾಟುವಂತೆ ಕೈ ಸನ್ನೆ ಮಾಡಿದ್ದರು. ಹೀಗೆ ಎರಡು ಬಾರಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಹರ್ಷಿತ್ ರಾಣಾ ಅವರ ಒಟ್ಟು ಪಂದ್ಯ ಶುಲ್ಕದ ಮೇಲೆ ಶೇಕಡಾ 60ರಷ್ಟು ದಂಡ ವಿಧಿಸಲಾಗಿದೆ.

ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಹರ್ಷಿತ್ ಒಟ್ಟು 33 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅದರಲ್ಲೂ ನಿರ್ಣಾಯಕವಾಗಿದ್ದ ಕೊನೆಯ ಓವರ್​ನಲ್ಲಿ ಅದ್ಭುತ ದಾಳಿ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

rana

ಕೊನೆಯ ಓವರ್​ನಲ್ಲಿ ಎಸ್​ಆರ್​ಹೆಚ್ ತಂಡಕ್ಕೆ 13 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ದಾಳಿಗಿಳಿದ ಹರ್ಷಿತ್ ರಾಣಾ ಅವರ ಮೊದಲ ಎಸೆತಕ್ಕೆ ಹೆನ್ರಿಕ್ ಕ್ಲಾಸೆನ್ ಸಿಕ್ಸ್​ ಸಿಡಿಸಿದರು. ಇದಾದ ಬಳಿಕ 5 ಎಸೆತಗಳಲ್ಲಿ 2 ವಿಕೆಟ್ ಕಬಳಿಸುವ ಮೂಲಕ ಕೇವಲ 2 ರನ್ ಮಾತ್ರ ಬಿಟ್ಟುಕೊಟ್ಟಿದ್ದರು. ಈ ಮೂಲಕ ಕೆಕೆಆರ್​ ತಂಡಕ್ಕೆ 4 ರನ್​ಗಳ ರೋಚಕ ಜಯ ತಂದುಕೊಡುವಲ್ಲಿ ಹರ್ಷಿತ್ ರಾಣಾ ಯಶಸ್ವಿಯಾಗಿದ್ದರು. ಇದೀಗ ಈ ಯಶಸ್ಸಿನ ಬೆನ್ನಲ್ಲೇ ಯುವ ವೇಗಿ ದಂಡದ ಶಿಕ್ಷೆಗೆ ಒಳಗಾಗಿದ್ದಾರೆ.

ಹರ್ಷಿತ್ ರಾಣಾ ನಡೆದುಕೊಂಡ ರೀತಿಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕೂಡ ಆಕ್ರೋಶ ಹೊರಹಾಕಿದ್ದರು. “ಮಯಾಂಕ್ ಅಗರ್ವಾಲ್ ವಿಕೆಟ್ ಪಡೆದ ಬಳಿಕ ಹರ್ಷಿತ್ ರಾಣಾ ನಡೆದುಕೊಂಡ ರೀತಿ ಒಳ್ಳೆಯ ಬೆಳವಣಿಗೆಯಲ್ಲ. ಇದು ಮುಂಬರುವ ಯುವ ಆಟಗಾರರಿಗೆ ಕೆಟ್ಟ ಸಂದೇಶ ರವಾನಿಸಿದಂತಾಗುತ್ತದೆ” ಎಂದು ತಿಳಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...