ಕೆ ಎಲ್ ರಾಹುಲ್ ನಾಯಕನ ಹುದ್ದೆ ತೊರೆಯುವ ಸಾಧ್ಯತೆ: ಮುಂದಿನ ವರ್ಷ ತಂಡಕ್ಕೆ ಸೇರ್ಪಡೆ ಅಸಂಭವ

Date:

ಸನ್ ರೈಸರ್ಸ್‌ ಹೈದರಾಬಾದ್‌ ವಿರುದ್ಧದ 2024ರ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಹೀನಾಯವಾಗಿ ಸೋತ ನಂತರ ತಂಡದ ನಾಯಕ ಕೆ ಎಲ್‌ ರಾಹುಲ್ ನಾಯಕತ್ವ ಸ್ಥಾನವನ್ನು ತೊರೆಯುವ ಸಾಧ್ಯತೆಯಿದೆ.

ಲಖನೌ ಸೋತ ನಂತರ ತಂಡದ ಮಾಲೀಕ ಸಂಜೀವ್‌ ಗೋಯಂಕಾ ರಾಹುಲ್‌ ಅವರೊಂದಿಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಎಸ್‌ಆರ್‌ಹೆಚ್‌ ವಿರುದ್ಧ ಲಖನೌ ಪರಾಭವಗೊಂಡ ನಂತರ ತಂಡದ ಪ್ಲೇಆಫ್‌ ಹಾದಿ ದುರ್ಗಮವಾಗಿದೆ. 2022ರ ಹರಾಜಿನಲ್ಲಿ ಲಖನೌ ತಂಡ ಕೆ ಎಲ್‌ ರಾಹುಲ್‌ ಅವರನ್ನು ದಾಖಲೆಯ 17 ಕೋಟಿ ರೂ. ನೀಡಿ ಕೊಂಡುಕೊಂಡಿತ್ತು.

ಸಂಜೀವ್‌ ಗೋಯಂಕಾ ಈ ಮೊದಲು ಪುಣೆ ಸೂಪರ್‌ಜೈಂಟ್ಸ್‌ ತಂಡದ ಮಾಲೀಕರಾಗಿದ್ದರು. ಆಗ ಪುಣೆ ತಂಡದಲ್ಲಿ ಎಂ ಎಸ್‌ ಧೋನಿ ನಾಯಕರಾಗಿದ್ದರು. ಧೋನಿಯನ್ನು ಕೂಡ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವದಿಂದ ಕೈಬಿಟ್ಟು ಸ್ಟೀವ್‌ ಸ್ಮಿತ್‌ ಅವರನ್ನು ನೇಮಕ ಮಾಡಿಕೊಂಡಿದ್ದರು. ಪುಣೆ ತಂಡವನ್ನು ಕೈಬಿಟ್ಟ ನಂತರ ಲಖನೌ ಸೂಪರ್‌ ಜೈಂಟ್ಸ್‌ ತಂಡದ ಮಾಲೀಕರಾಗಿದ್ದರು. ಕಳಪೆಯಾಟವಾಡಿದರೆ ನಾಯಕತ್ವವನ್ನು ಬದಲಿಸುವುದು ಸಾಮಾನ್ಯವಾಗಿದೆ ಎಂಬುದು ಈ ನಿದರ್ಶನಗಳಿಂದ ತಿಳಿಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಕೆ ಎಲ್‌ ರಾಹುಲ್‌ ನಾಯಕತ್ವದಿಂದ ನಿರ್ಗಮಿಸಿದರೆ, ಉಪನಾಯಕನಾಗಿರುವ ನಿಕಲಸ್‌ ಪೂರನ್‌ ಮುಂದಿನ ಎರಡು ಪಂದ್ಯಗಳಲ್ಲಿ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಜೆಡಿಎಸ್-ಬಿಜೆಪಿ ಜಂಟಿ ಕೃತ್ಯ, ಘನಘೋರ ಲೈಂಗಿಕ ಹತ್ಯಾಕಾಂಡ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿರುವ ದೃಶ್ಯದಲ್ಲಿ ವಿಐಪಿ ಗ್ಯಾಲರಿಯಲ್ಲಿ ಲಖನೌ ಸೂಪರ್‌ ಜೈಂಟ್ಸ್‌ ಮಾಲೀಕರಾದ ಸಂಜೀವ್‌ ಗೋಯಂಕಾ ಅವರೊಂದಿಗೆ ಆಕ್ರೋಶಭರಿತವಾಗಿ ಮಾತನಾಡುತ್ತಿದ್ದರು. ಮಾಲೀಕರ ಮಾತನ್ನು ಕೇಳಿಸಿಕೊಳ್ಳುತ್ತಿದ್ದ ರಾಹುಲ್ ಸಮಜಾಯಿಷಿ ನೀಡಲು ಪ್ರಯತ್ನಿಸಿದರೂ ಗೋಯಂಕಾ ಮಾತು ಮುಂದುವರೆಸುತ್ತಿದ್ದರು. ದೃಶ್ಯ ಮಾತ್ರ ಕಾಣಿಸುತ್ತಿದ್ದರಿಂದ ಏನು ಮಾತನಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿರಲಿಲ್ಲ.

ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಖನೌ ತಂಡ 10 ವಿಕೆಟ್‌ಗಳ ಅಂತರದಲ್ಲಿ ಸೋಲು ಅನುಭವಿಸಿತು. ಎಲ್‌ಎಸ್‌ಜಿ ತಂಡ ನೀಡಿದ 165 ರನ್‌ಗಳ ಸವಾಲನ್ನು ಬೆನ್ನಟ್ಟಿದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ಕೇವಲ 9.4 ಓವರ್‌ಗಳಲ್ಲಿ ಗುರಿಯನ್ನು ಮುಟ್ಟಿತು. ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್‌ ಶರ್ಮಾ ಅವರ ಭರ್ಜರಿ ಆಟದಿಂದ ಎಲ್‌ಎಸ್‌ಜಿ ಸುಲಭವಾಗಿ ಗುರಿಯನ್ನು ಸಾಧಿಸಿತು. ಇಷ್ಟು ಕಡಿಮೆ ಓವರ್‌ಗಳಲ್ಲಿ ಗೆಲುವು ಸಾಧಿಸಿದ್ದು, ಟಿ20 ಮಾದರಿಯಲ್ಲಿ ದಾಖಲೆಯಾಗಿ ಪರಿಣಮಿಸಿದೆ.

ಟ್ರಾವಿಸ್‌ ಹೆಡ್‌ ಕೇವಲ 30 ಚೆಂಡುಗಳಲ್ಲಿ 8 ಬೌಂಡರಿ ಹಾಗೂ 8 ಸಿಕ್ಸರ್‌ಗಳೊಂದಿಗೆ 89 ರನ್‌ ಬಾರಿಸಿದರೆ, ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 6 ಸಿಕ್ಸರ್‌, 8 ಬೌಂಡರಿಯೊಂದಿಗೆ 75 ರನ್‌ ಸಿಡಿಸಿದರು.

ಈ ಸೋಲಿನೊಂದಿಗೆ ಎಲ್‌ಎಸ್‌ಜಿ ತಂಡ ಅಂಕಪಟ್ಟಿಯಲ್ಲಿ 12 ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ. ನೆಟ್‌ ರನ್‌ರೇಟ್‌ ಕಡಿಮೆಯಿರುವ ಕಾರಣ ಉಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಪ್ಲೇಆಫ್‌ ಸುತ್ತಿಗೆ ಪ್ರವೇಶಿಸುವುದು ಕಷ್ಟವಾಗಿದೆ. ಕೆಕೆಆರ್‌ ಹಾಗೂ ರಾಜಸ್ಥಾನ್‌ 11 ಪಂದ್ಯಗಳನ್ನು ಆಡಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿವೆ. ಹೈದರಾಬಾದ್‌ 14 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಈ ಮೂರು ತಂಡಗಳಿಗೆ ಪ್ಲೇಆಫ್‌ ಹಾದಿ ಸುಲಭ ಸಾಧ್ಯತೆಯಿದೆ.

ತಲಾ 12 ಅಂಕ ಗಳಿಸಿರುವ ಲಖನೌ, ಚೆನ್ನೈ, ದೆಹಲಿ ಪ್ಲೇಆಫ್‌ ಹಾದಿಗೆ ಪೈಪೋಟಿ ನಡೆಸಬೇಕಿದೆ. ಎಲ್ಲ ತಂಡಗಳ ಲೀಗ್‌ ಹಂತದ ಪಂದ್ಯಗಳು ಇನ್ನು ಮುಗಿಯದ ಕಾರಣ ಮೊದಲ ನಾಲ್ಕು ಸ್ಥಾನ ಗಳಿಸಲು ಪ್ರತಿ ತಂಡಕ್ಕೂ ಗೆಲುವು ಅನಿವಾರ್ಯವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...