ಏಪ್ಯಾ ಕಪ್ 2023 | ಮೊದಲ ಎರಡು ಪಂದ್ಯಗಳಿಂದ ಕೆ ಎಲ್ ರಾಹುಲ್ ಔಟ್!

Date:

  • ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡ ಬಿಸಿಸಿಐ
  • ಬುಧವಾರದಿಂದ ಆರಂಭವಾಗಲಿರುವ ಏಪ್ಯಾ ಕಪ್ ಟೂರ್ನಿ

ಬುಧವಾರದಿಂದ ಪ್ರಾರಂಭವಾಗಲಿರುವ ಮಹತ್ವದ ಏಷ್ಯಾ ಕಪ್‌ ಟೂರ್ನಿಯ ಮೊದಲ ಎರಡು ಪಂದ್ಯಗಳಿಂದ ಭಾರತದ ವಿಕೆಟ್‌ಕೀಪರ್, ಬ್ಯಾಟ್ಸ್‌ಮನ್ ಕೆ ಎಲ್ ರಾಹುಲ್ ಹೊರಗುಳಿದಿದ್ದಾರೆ.

ಗಾಯದಿಂದ ಚೇತರಿಸಿಕೊಂಡ ನಂತರ ತಂಡದಲ್ಲಿ ಹೆಸರಿಸಲಾದ 31 ವರ್ಷದ ಕನ್ನಡಿಗ ಕೆ ಎಲ್ ರಾಹುಲ್, ಪಾಕಿಸ್ತಾನ ಮತ್ತು ನೇಪಾಳ ವಿರುದ್ಧದ ಮೊದಲ ಎರಡು ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ಪ್ರಕಟಿಸಿದ್ದಾರೆ.

ಇದಕ್ಕೂ ಮುನ್ನ ತಂಡವನ್ನು ಪ್ರಕಟಿಸುವ ಸಂದರ್ಭದಲ್ಲಿ ಬಿಸಿಸಿಐ ಮುಖ್ಯ ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಕೆ ಎಲ್ ರಾಹುಲ್ ಸಣ್ಣಪುಟ್ಟ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆ ಎಲ್ ರಾಹುಲ್ ನಮ್ಮೊಂದಿಗೆ ಉತ್ತಮವಾಗಿ ಮುನ್ನಡೆಯುತ್ತಿದ್ದಾರೆ. ಆದರೆ ಕ್ಯಾಂಡಿ ಪ್ರವಾಸದ ಮೊದಲ ಭಾಗಕ್ಕೆ ಅವರು ಅಲಭ್ಯರಾಗುತ್ತಾರೆ” ಎಂದು ಪ್ರವಾಸ ಹೊರಡುವ ಮುನ್ನ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ರಾಹುಲ್ ಟೂರ್ನಿಯಲ್ಲಿ ಭಾಗವಹಿಸುವ ಕುರಿತು ಸೆಪ್ಟೆಂಬರ್ 4 ರಂದು ಕರೆ ನೀಡಲಾಗುವುದು ಎಂದು ದ್ರಾವಿಡ್ ಮಾಹಿತಿ ನೀಡಿದ್ದಾರೆ.

“ಮುಂದಿನ ಕೆಲವು ದಿನಗಳವರೆಗೆ ‘ನ್ಯಾಷನಲ್ ಕ್ರಿಕೆಟ್ ಅಕಾಡೆಮಿ’ ಅವರನ್ನು ನೋಡಿಕೊಳ್ಳುತ್ತದೆ. ಸೆಪ್ಟೆಂಬರ್ 4ರಂದು ಮರುಮೌಲ್ಯಮಾಪನ ಮಾಡಿದ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಆದರೆ, ಅವರು ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗುತ್ತಾರೆ” ದ್ರಾವಿಡ್ ತಿಳಿಸಿದರು.

ಅಲ್ಲದೇ, ಈ ಬಗ್ಗೆ ಬಿಸಿಸಿಐ ಕೂಡ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ‘ಏಷ್ಯಾ ಕಪ್‌ ಟೂರ್ನಿಯ ಪಾಕಿಸ್ತಾನ ಮತ್ತು ನೇಪಾಳ ವಿರುದ್ಧ ಕೆ ಎಲ್ ರಾಹುಲ್ ಲಭ್ಯವಿರುವುದಿಲ್ಲ’ ಎಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಮೀಸಲು ಆಟಗಾರನಾಗಿ ಪ್ರವಾಸಗೈಯಲಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.

ಏಷ್ಯಾ ಕಪ್‌ನ ಮೊದಲ ಪಂದ್ಯವು ಬುಧವಾರ ಮುಲ್ತಾನ್‌ನಲ್ಲಿ ಆತಿಥೇಯ ಪಾಕಿಸ್ತಾನ ಮತ್ತು ನೇಪಾಳ ನಡುವೆ ನಡೆಯಲಿದೆ.

ಟೀಂ ಇಂಡಿಯಾ ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...