ಐಪಿಎಲ್‌ 2023 | ಕೆಕೆಆರ್‌ ವಿರುದ್ಧ ತವರಿನಲ್ಲೇ ಮುಗ್ಗರಿಸಿದ ಆರ್‌ಸಿಬಿ

Date:

ಐಪಿಎಲ್‌ 16ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್‌ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ಕೆಕೆಆರ್‌ ತಡೆಒಡ್ಡಿದೆ.

ಗೆಲುವಿಗೆ ಕೆಕೆಆರ್‌ ಮುಂದಿಟ್ಟಿದ್ದ201 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟದಲ್ಲಿ 179 ರನ್‌ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ತವರು ಅಭಿಮಾನಿಗಳ ಸಮ್ಮುಖದಲ್ಲೇ 21 ರನ್‌ಗಳ ಅಂತರದಲ್ಲಿ ಕೋಲ್ಕತ್ತಾ ತಂಡಕ್ಕೆ ಶರಣಾಯಿತು.

ಈ ಗೆಲುವಿನೊಂದಿಗೆ ಪ್ರಸಕ್ತ ಟೂರ್ನಿಯಲ್ಲಿ ಸತತ 4 ಪಂದ್ಯಗಳ ಸೋಲಿನ ಸರಪಳಿಯನ್ನು ಕೆಕೆಆರ್‌ ತುಂಡರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ನಾಯಕ ವಿರಾಟ್‌ ಕೊಹ್ಲಿ 54 ರನ್‌, ಮಹಿಪಾಲ್ ಲೋಮ್ರೋರ್ 34 ಹಾಗೂ ದಿನೇಶ್ ಕಾರ್ತಿಕ್ 22 ರನ್‌ಗಳಿಸಿದರು. ಎಂದಿನಂತೆ ಮಧ್ಯಮ ಕ್ರಮಾಂಕದಲ್ಲಿ ಯಾವುದೇ ಬ್ಯಾಟರ್‌ಗಳು ತಂಡದ ಗೆಲುವಿಗಾಗಿ ಕ್ರೀಸ್‌ನಲ್ಲಿ ನೆಲೆಯೂರಲಿಲ್ಲ. ಗ್ಲೆನ್‌ ಮ್ಯಾಕ್ಸ್‌ವೆಲ್‌ 5 ಮತ್ತು ಶಹಬಾಝ್‌ ಅಹ್ಮದ್‌ 2 ರನ್‌ಗಳಿಸಲಷ್ಟೇ ಶಕ್ತರಾದರು.  

ಕೆಕೆಆರ್‌ ಪರ ವರುಣ್‌ ಚಕ್ರವರ್ತಿ 3,  ಆಂಡ್ರೆ ರಸೆಲ್‌ ಮತ್ತು ಸುಯಾಷ್‌ ಶರ್ಮಾ ತಲಾ 2 ವಿಕೆಟ್‌ ಪಡೆದರು.  ಇದರೊಂದಿಗೆ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್‌ ಚಾಲೆಂಜರ್ಸ್‌ ತಂಡದ ವಿರುದ್ಧ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸತತ 5ನೇ ಗೆಲುವು ಸಾಧಿಸಿದಂತಾಗಿದೆ.

ಇದಕ್ಕೂ ಮೊದಲು ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತ್ತು. ಆರಂಭಿಕ ಜೇಸನ್‌ ರಾಯ್‌ ಸತತ ಎರಡನೇ ಅರ್ಧಶತಕ ಮತ್ತು ನಾಯಕ ನಿತೀಶ್‌ ರಾಣಾ ಗಳಿಸಿದ ಬಿರುಸಿಬ 48 ರನ್‌ಗಳ ನೆರವಿನಿಂದ ಕೆಕೆಆರ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟದಲ್ಲಿ 200 ರನ್‌ ಗಳಿಸಿತ್ತು. ನಾರಾಯಣ್‌ ಜಗದೀಶನ್‌ 27, ವೆಂಕಟೇಶ್‌ ಅಯ್ಯರ್‌ 31 ಹಾಗೂ ಕೊನೆಯಲ್ಲಿ ರಿಂಕು ಸಿಂಗ್‌ 18 ರನ್‌ಗಳಿಸಿ ಅಜೇಯರಾಗುಳಿದರು.  

ಆರ್‌ಸಿಬಿ ಪರ ವಿಜಯಕುಮಾರ್‌ ವೈಶಾಕ್‌ ಮತ್ತು ಸ್ಪಿನ್ನರ್ ವನಿಂದು ‌ ಹಸರಂಗ ತಲಾ 2 ವಿಕೆಟ್‌ ಪಡೆದರೆ, ಆಂಡ್ರೆ ರಸೆಲ್‌ ವಿಕೆಟ್‌ ಸಿರಾಜ್‌ ಪಾಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...