ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

Date:

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಕೇವಲ 1 ರನ್‌ಗಳಿಂದ ಸೋತಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫಿಲ್ ಸಾಲ್ಟ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿ, ಆರ್‌ಸಿಬಿ ತಂಡಕ್ಕೆ 223 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ, ಕೊನೆಯ ಓವರ್‌ನಲ್ಲಿ ಎಡವಿದ ಪರಿಣಾಮ ಕೇವಲ 1 ರನ್‌ಗಳ ಅಂತರದಿಂದ ಸೋಲಿಗೆ ಶರಣಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ 21 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ ಕೆಕೆಆರ್‌ ಪರ ಬೌಲಿಂಗ್ ದಾಳಿಗಿಳಿದ ಮಿಚೆಲ್ ಸ್ಟಾರ್ಕ್‌ ಓವರ್‌ನಲ್ಲಿ ಕ್ರೀಸ್‌ನಲ್ಲಿದ್ದ ಆರ್‌ಸಿಬಿ ಸ್ಪಿನ್ ಬೌಲರ್ ಕರಣ್ ಶರ್ಮಾ, ಅನಿರೀಕ್ಷಿತವಾಗಿ ಮೂರು ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ನಿರೀಕ್ಷೆ ಹುಟ್ಟಿಸಿದರು. ಆದರೆ 5ನೇ ಎಸೆತದಲ್ಲಿ ಸ್ಟಾರ್ಕ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಕೊನೆಯ ಬಾಲ್‌ನಲ್ಲಿ ಮೂರು ರನ್‌ಗಳ ಅವಶ್ಯಕತೆ ಇದ್ದಾಗ ಬ್ಯಾಟಿಂಗ್‌ಗೆ ಬಂದ ಲಾಕಿ ಫರ್ಗೂಸನ್ ಬೌಂಡರಿ ಹೊಡೆಯುವ ಪ್ರಯತ್ನ ವಿಫಲವಾಯಿತು. ಎರಡು ರನ್‌ ಕದಿಯುವ ಯತ್ನದಲ್ಲಿ ವಿಫಲವಾದ ಫರ್ಗೂಸನ್, ಕೆಕೆಆರ್‌ನ ಫಿಲ್ ಸಾಲ್ಟ್‌ ಅವರು ಅದ್ಭುತ ಡೈವಿಂಗ್ ಮೂಲಕ ರನೌಟ್ ಮಾಡಿದ್ದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತವಾಗಿ ಸೋಲಿಗೆ ಶರಣಾಯಿತು.

ಒಂದು ವೇಳೆ ರನ್ ಪೂರ್ತಿಯಾಗಿದ್ದಿದ್ದರೆ ಪಂದ್ಯ ಟೈ ಆಗಿ, ಸೂಪರ್ ಓವರ್‌ ಆಗುತ್ತಿತ್ತು. ಆದರೆ ಆರ್‌ಸಿಬಿಗೆ ನಸೀಬು ಕೈಕೊಟ್ಟಿತು. ಆರ್‌ಸಿಬಿ ಸೋತ ಬಳಿಕ ಪಂದ್ಯವನ್ನು ರೋಚಕತೆಗೆ ಸಾಗಿಸಿದ್ದ ಕರಣ್ ಶರ್ಮಾ ಕಣ್ಣೀರಿಟ್ಟರು. 223 ರನ್ ಗುರಿ ಬೆನ್ನಟ್ಟಿದ ಆರ್‌ಸಿಬಿ 20 ಓವರ್‌ಗಳಲ್ಲಿ 221 ರನ್ ಗಳಿಸಿ ಆಲೌಟಾಯಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ 2024ರಲ್ಲಿ ಸೋಲಿನ ಕೂಪದಿಂದ ಎದ್ದು ಬರಲು ಮತ್ತೊಮ್ಮೆ ವಿಫಲವಾಗಿದ್ದು, ಪ್ಲೇ ಆಫ್ ಹಂತ ತಲುಪುವ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ. ಆಡಿದ 8 ಪಂದ್ಯಗಳಲ್ಲಿ 7 ಸೋಲು ಮತ್ತು 1 ಗೆಲುವು ಸಾಧಿಸಿದ್ದು, ಕೇವಲ 2 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲೇ ಮುಂದುವರೆದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...