ಐಪಿಎಲ್ 2025 | ರಿಂಕು ಸಿಂಗ್​​ಗೆ ಕುಲ್‌ದೀಪ್‌ ಯಾದವ್‌ ಕಪಾಳ ಮೋಕ್ಷ; ಅಭಿಮಾನಿಗಳ ಆಕ್ರೋಶ

Date:

ನಿನ್ನೆ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್‌ ಆವೃತ್ತಿಯ 48ನೇ ಪಂದ್ಯದಲ್ಲಿ ಕುಲದೀಪ್ ಯಾದವ್ ಮತ್ತು ರಿಂಕು ಸಿಂಗ್ ನಡುವೆ ಅನಿರೀಕ್ಷಿತ ಘಟನೆ ನಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್‌ದೀಪ್‌ ಯಾದವ್ ಕೆಕೆಆರ್ ಆಟಗಾರ ರಿಂಕು ಸಿಂಗ್‌ಗೆ ಕಪಾಳಮೋಕ್ಷ ಮಾಡಿದ್ದು, ಈ ದೃಶ್ಯ ಎಲ್ಲಡೆ ವೈರಲ್ ಆಗಿದೆ.

ಪಂದ್ಯ ಮುಕ್ತಾಯವಾದ ನಂತರ ರಿಂಕು ಮಾತನಾಡುತ್ತಿರುವ ಸಂದರ್ಭದಲ್ಲಿ ಮೊದಲಿಗೆ ಕುಲದೀಪ್‌ ಕಪಾಳ ಮೋಕ್ಷ ಮಾಡಿದ್ದಾರೆ. ಹಾಗೆಯೇ ಮತ್ತೆ ಏನೋ ಹೇಳಲು ಹೋದಾಗ ಎರಡನೇ ಬಾರಿಯೂ ಕುಲದೀಪ್‌ ಹಲ್ಲೆ ಮಾಡಿದ್ದಾರೆ. ಆದರೆ ಕುಲದೀಪ್ ಯಾದವ್ ಏಕೆ ಹೊಡೆದರು ಎಂಬುದು ತಿಳಿದಿಲ್ಲ. ಈ ಘಟನೆ ಇಬ್ಬರ ನಡುವೆ ತಮಾಷೆಯಾಗಿ ನಡೆಯಿತೋ ಅಥವಾ ಗಂಭೀರವಾಗಿ ನಡೆಯಿತೋ ಎಂಬ ಮಾಹಿತಿಗೆ ಉತ್ತರ ದೊರಕಿಲ್ಲ.

ಈ ಸುದ್ದಿ ಓದಿದ್ದೀರಾ? ಐಪಿಎಲ್ 2025 | ಇದು ನನ್ನ ಮೈದಾನ: ಗೆದ್ದ ನಂತರ ಕೆ ಎಲ್ ರಾಹುಲ್‌ಗೆ ಟಾಂಗ್‌ ಕೊಟ್ಟ ವಿರಾಟ್ ಕೊಹ್ಲಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ, ಕುಲದೀಪ್ ಬೌಲಿಂಗ್‌ನಲ್ಲಿ ರಿಂಕು ಸಿಂಗ್ 22 ರನ್ ಗಳಿಸಿದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಲು ವಿಭಿನ್ನವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕೆಲವರು ಇದನ್ನು ತಮಾಷೆಯ ಘಟನೆ ಎಂದು ಸಮರ್ಥಿಸಿಕೊಂಡರೆ, ಇನ್ನು ಕೆಲವರು ಕುಲದೀಪ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಆಟಗಾರರು ಕಪಾಳಮೋಕ್ಷ ಮಾಡಿಕೊಳ್ಳುವುದು ಇದೇ ಮೊದಲ ಘಟನೆಯೇನು ಅಲ್ಲ. ಈ ಹಿಂದೆ ಮುಂಬೈ ಇಂಡಿಯನ್ಸ್ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ಪಂಜಾಬ್ ಕಿಂಗ್ಸ್ ಮಾಜಿ ಆಟಗಾರ ಎಸ್ ಶ್ರೀಶಾಂತ್ ಅವರಿಗೆ ಮೈದಾನದಲ್ಲೇ ಕಪಾಳಕ್ಕೆ ಬಾರಿಸಿ ಸುದ್ದಿಯಾಗಿದ್ದರು. ಶ್ರೀಶಾಂತ್ ಕಣ್ಣೀರಿಡುತ್ತಾ ಸಾಗುತ್ತಿದ್ದ ದೃಶ್ಯಗಳು ಎಲ್ಲಡೆ ಹರಿದಾಡಿತ್ತು. ಈ ಘಟನೆಯ ವಿರುದ್ಧ ಬಿಸಿಸಿಐ ಕೂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹರ್ಭಜನ್ ಸಿಂಗ್ ಅವರಿಗೆ 11 ಪಂದ್ಯಗಳಿಗೆ ನಿಷೇಧ ವಿಧಿಸಿತ್ತು. ಆ ಬಳಿಕ ಹರ್ಭಜನ್ ಸಿಂಗ್ ತಮ್ಮ ತಪ್ಪನ್ನು ಒಪ್ಪಿಕೊಂಡು ವಿಷಾದ ವ್ಯಕ್ತಪಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...