ರೋಚಕ ಘಟ್ಟದತ್ತ ಲಾರ್ಡ್ಸ್‌ ಟೆಸ್ಟ್‌; 4 ವಿಕೆಟ್‌ ಕಳೆದುಕೊಂಡ ಭಾರತದ ಗೆಲುವಿಗೆ ಬೇಕು 135 ರನ್‌

Date:

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್‌ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಈ ಟೆಸ್ಟ್‌ ಪಂದ್ಯವನ್ನು ಗೆಲ್ಲಲು ಟೀಮ್ ಇಂಡಿಯಾಕ್ಕೆ 193 ರನ್‌ಗಳ ಗುರಿಯನ್ನು ಇಂಗ್ಲೆಂಡ್‌ ನೀಡಿದೆ. ಆತಿಥೇಯರು ನೀಡಿದ್ದ ಗುರಿಯನ್ನು ಬೆನ್ನಟ್ಟಿದ ಭಾರತದ ಆಟಗಾರರು ನಾಲ್ಕನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 58 ರನ್‌‌ ಕಲೆ ಹಾಕಿದ್ದಾರೆ. ಅಂತಿಮ ದಿನ ಭಾರತದ ಗೆಲುವಿಗೆ 135 ರನ್‌ಗಳು ಬೇಕಿದೆ.

ಭಾನುವಾರ ಎರಡನೇ ಇನಿಂಗ್ಸ್‌ನ್ನು 2 ರನ್‌ಗಳಿಗೆ ವಿಕೆಟ್‌ ನಷ್ಟವಿಲ್ಲದೆ ಆರಂಭಿಸಿದ ಇಂಗ್ಲೆಂಡ್‌ 192 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡದ ಪರ ಜೋ ರೂಟ್‌ 40, ನಾಯಕ ಬೆನ್‌ ಸ್ಟೋಕ್ಸ್‌ 33, ಹ್ಯಾರಿ ಬ್ರೂಕ್‌ 23 ರನ್‌ ಬಾರಿಸಿದರು. ಭಾರತದ ಪರ ವಾಷಿಂಗ್ಟನ್‌ ಸುಂದರ್ 4, ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್‌ ಬುಮ್ರಾ ತಲಾ 2 ವಿಕೆಟ್‌ ಪಡೆದು ತಂಡಕ್ಕೆ ಆಧಾರವಾದರು.

ಗುರಿಯನ್ನು ಬೆನ್ನಟ್ಟಿದ ಭಾರತ ಉತ್ತಮ ಆರಂಭವನ್ನು ಪಡೆಯುವಲ್ಲಿ ವಿಫಲರಾದರು. ಆರಂಭಿಕ ಯಶಸ್ವಿ ಜೈಸ್ವಾಲ್‌ ಸೊನ್ನೆ ಸುತ್ತಿದರು. ಇವರು ಜೋಫ್ರಾ ಆರ್ಚರ್ ಎಸೆದ ಬ್ಯಾಕ್‌ ಆಫ್‌ ಲೆಂಥ್ ಎಸೆತವನ್ನು ಪುಲ್ ಮಾಡಲು ಹೋದರು. ಆದರೆ ಇವರು ಬಾರಿಸಿದ ಚೆಂಡು ಇವರ ಬ್ಯಾಟನ್ ಅಂಚಿಗೆ ಬಡಿದು ಆಗಸದೆತ್ತರಕ್ಕೆ ಸಾಗಿತು. ವಿಕೆಟ್‌ ಕೀಪರ್‌ ಜೇಮಿ ಸ್ಮಿತ್‌ ಹಿಡಿದ ಕ್ಯಾಚ್‌ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2ನೇ ವಿಕೆಟ್‌ಗೆ 36 ರನ್ ಜೊತೆಯಾಟ ಎರಡನೇ ವಿಕೆಟ್‌ಗೆ ಕನ್ನಡಿಗರಾದ ಕರುಣ್ ನಾಯರ್‌ ಹಾಗೂ ಕೆಎಲ್ ರಾಹುಲ್‌ ಇನಿಂಗ್ಸ್‌ ಬೆಳೆಸುವ ಜವಾಬ್ದಾರಿಯನ್ನು ಹೊತ್ತುಕೊಂಡಿತು. ಈ ಜೋಡಿ 5 ರನ್‌ಗಳಿಗೆ 1 ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತಕ್ಕೆ ಕನ್ನಡದ ಜೋಡಿ ಕೊಂಚ ಆಧಾರವಾಯಿತು. ಈ ಜೋಡಿ ಎರಡನೇ ವಿಕೆಟ್‌ಗೆ 66 ಎಸೆತಗಳಲ್ಲಿ 36 ರನ್‌ ಸೇರಿಸಿತು. ಈ ವೇಳೆ ಕರುಣ್ ನಾಯರ್‌ (14) ಮತ್ತೊಮ್ಮೆ ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ಸಫಲರಾದರು. ಬ್ರೈಡನ್ ಕಾರ್ಸೆ ಎಸೆತದಲ್ಲಿ ಔಟ್ ಆದರು.

ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಶುಭಮನ್‌ ಗಿಲ್‌ (6) ಸಹ ಜವಾಬ್ದಾರಿಯನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲರಾದರು. ಗಿಲ್‌ ಔಟ್ಆದ ನಂತರ ನೈಟ್‌ ವಾಚ್‌ಮೆನ್ ಆಗಿ ಆಕಾಶ್ ದೀಪ್‌ ಮೈದಾನಕ್ಕೆ ಇಳಿದರು. ಆದರೆ ಇವರು ತಮ್ಮ ಜವಾಬ್ದಾರಿಯನ್ನು ಅರಿತು ಆಡುವಲ್ಲಿ ವಿಫಲರಾದರು.

ಸೋಮವಾರ ಕೊನೆಯ ದಿನದಾಟದಲ್ಲಿ ಭಾರತ ತಂಡ ಮೊದಲಾವಧಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿ ವಿಕೆಟ್‌ ಬೀಳದಂತೆ ಕಾಯ್ದುಕೊಳ್ಳುವ ಅವಶ್ಯಕತೆ ಇದೆ. ಅಂದಾಗ ಮಾತ್ರ ಟೀಮ್ ಇಂಡಿಯಾ ಗೆಲುವಿನ ಕನಸು ನನಸಾಗುತ್ತದೆ. ಟೀಮ್ ಇಂಡಿಯಾದ ಆರಂಭಿಕ ಆಟಗಾರ ಕೆಎಲ್ ರಾಹುಲ್ (ಅಜೇಯ 33 ರನ್) ಕೊನೆಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...