ಆರ್‌ಸಿಬಿ Vs ಚೆನ್ನೈ ಪಂದ್ಯದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿದ್ದವ ಪೊಲೀಸ್ ಅತಿಥಿ!

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಾಕಿ ಇರುವ ಒಂದು ಪ್ಲೇ-ಆಫ್ ಸ್ಥಾನಕ್ಕಾಗಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ‘ನಾಕೌಟ್’ ಪಂದ್ಯ ನಡೆಯಲಿದೆ. ಈ ಪಂದ್ಯದ ವೇಳೆಯಲ್ಲಿ ಸ್ಟೇಡಿಯಂಗೆ ನುಗ್ಗೋದಾಗಿ ಹೇಳಿ, ಪೊಲೀಸರಿಗೆ ಚಾಲೆಂಜ್ ಹಾಕಿದ್ದವ ಈಗ ಪೊಲೀಸರ ಅತಿಥಿಯಾಗಿದ್ದಾನೆ.

‘ಕ್ಲೌಟ್ ಚೇಸರ್ಸ್‌’ನ ಸಹ ಸಂಸ್ಥಾಪಕರಾಗಿರುವ ಬೆಂಗಳೂರಿನ ನಿತಿನ್ ಸಿಕ್ವೇರಾ ಎಂಬ ನೆಟ್ಟಿಗನೋರ್ವ, ” ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯೆ ಮೇ 18 ರಂದು ನಡೆಯಲಿರುವ ಐಪಿಎಲ್ ಪಂದ್ಯದ ಟಿಕೆಟ್ ನನಗೆ ಸಿಕ್ಕಿದೆ. ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಾದ್ಯಂತ ಓಡುತ್ತೇನೆ” ಎಂದು ಪೊಲೀಸರಿಗೆ ಸವಾಲೆಸೆದಿದ್ದ. ಆತನ ಈ ಪೋಸ್ಟ್‌ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆ ಬಳಿಕ ಅದು ಸುದ್ದಿಯಾಗಿತ್ತು.

ಈ ಪೋಸ್ಟ್‌ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಆತನ ವೈರಲ್ ಪೋಸ್ಟ್ ಆಧರಿಸಿ ಮುನ್ನೆಚ್ಚರಿಕೆ ವಹಿಸಿ, ಆತನನ್ನು ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸರು, “ಒಳ್ಳೆಯ ಪ್ರಯತ್ನ, ಗೆಳೆಯ. ಆದರೆ ಐಪಿಎಲ್ ಪಂದ್ಯದ ಸಮಯದಲ್ಲಿ ಭದ್ರತೆಯನ್ನು ಉಲ್ಲಂಘಿಸಲು ಪ್ರಯತ್ನಿಸಿದರೆ ನೇರವಾಗಿ ಹೊಡೆಯುವ ಸಿಕ್ಸ್‌ ನಮ್ಮ ಕಸ್ಟಡಿಗೆ ಬರಲಿದೆ ಎಂಬುದು ಗ್ಯಾರಂಟಿ. ಕ್ಷಮಿಸು ಸಂಗಾತಿ, ನೀನು ಸ್ಟಂಪ್‌ ಆಗಿದ್ದೀಯಾ” ಎಂದು ಟ್ರೋಲ್‌ ಶೈಲಿಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಪೊಲೀಸರ 30 ಸೆಕೆಂಡ್‌ನ ವಿಡಿಯೋ ಪೋಸ್ಟ್‌ ಈಗ ವೈರಲ್ ಆಗಿದೆ.

ಯುವಕ ನಿತಿನ್ ಸಿಕ್ವೇರಾನನ್ನು ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ಬೆಳಗ್ಗೆ ಬಂಧಿಸಿರುವುದಾಗಿ ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಪೊಲೀಸರ ಈ ಮುನ್ನೆಚ್ಚರಿಕಾ ಕ್ರಮಕ್ಕೆ ಹಲವು ಮಂದಿ ಶ್ಲಾಘಿಸಿದ್ದು, “ಭದ್ರತೆಗೆ ಸವಾಲೆಸೆಯುವವರಿಗೆ ತಕ್ಕಪಾಠ ಕಲಿಸಿದ್ದೀರಿ” ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ನೀಡಲಾಗಿದೆ. ಐಪಿಎಲ್ ಪಂದ್ಯ ಬಂದೋಬಸ್ತ್‌ಗೆ 1,200 ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನು ಓದಿದ್ದೀರಾ? ಐಪಿಎಲ್ | ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು, ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್‌

ನಾಲ್ವರು ಡಿಸಿಪಿಗಳು, 12 ಎಸಿಪಿ, 28 ಇನ್ಸ್ಪೆಕ್ಟರ್, 80 ಸಬ್ ಇನ್ಸ್ಪೆಕ್ಟರ್ ಸೇರಿ ಒಟ್ಟು 1,200 ಪೊಲೀಸರನ್ನು ಕ್ರೀಡಾಂಗಣದ ಸುತ್ತಮುತ್ತ ನಿಯೋಜಿಸಲಾಗಿದೆ. 4 ಕೆಎಸ್‌ಆರ್‌ಪಿ ತುಕಡಿ, ಹೋಂ ಗಾರ್ಡ್ ಸಹ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...