ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

Date:

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಅಮೋಘ ಗೆಲುವು ಸಾಧಿಸಿದೆ.

ಮುಂಬೈ ಪರ ಇಶಾನ್ ಕಿಶನ್ (69), ರೋಹಿತ್​ ಶರ್ಮಾ(38) ಮತ್ತು ಸೂರ್ಯಕುಮಾರ್​ ಯಾದವ್(52) ಆರ್ಭಟಕ್ಕೆ ಆರ್​ಸಿಬಿ ನೀಡಿದ್ದ 197 ರನ್​ ಗುರಿ ಸಾವಾಲಾಗಲಿಲ್ಲ. ಆರ್​ಸಿಬಿ 5ನೇ ಸೋಲಿಗೆ ಶರಣಾದರೆ, ಮುಂಬೈ ಸತತ ಎರಡನೇ ಜಯದ ನಗೆ ಬೀರಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್​​ ಬೆಂಗಳೂರು ಪರ ಮೂವರು ಅರ್ಧಶತಕ ಸಿಡಿಸಿ ಸವಾಲಿನ ಮೊತ್ತ ಪೇರಿಸಲು ನೆರವಾದರು. ಇದರ ನಡುವೆಯೂ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿ 200ರ ಗಡಿ ದಾಟಬೇಕಿದ್ದ ಮೊತ್ತಕ್ಕೆ ಕಡಿವಾಣ ಹಾಕಿದರು. ಆರ್​ಸಿಬಿ 20 ಓವರ್​​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಕಲೆ ಹಾಕಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರ್​ಸಿಬಿ ನೀಡಿದ್ದ 197 ರನ್​​ಗಳ ಗುರಿಗೆ ಮುಂಬೈ ಇಂಡಿಯನ್ಸ್​ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್​ ಯಾದವ್ ಅವರ ಆಕ್ರಮಣಕಾರಿ ಆಟದ ಮುಂದೆ ರಾಯಲ್ ಚಾಲೆಂಜರ್ಸ್ ಬೌಲರ್‌ಗಳು ಸುಸ್ತಾದರು. ಬ್ಯಾಟರ್​​ಗಳು ಬೌಂಡರಿ, ಸಿಕ್ಸರ್​​ಗಳ ಸುರಿಮಳೆಗೈಯುತ್ತಿದ್ದರೆ, ಬೌಲರ್​​ಗಳು ವಿಕೆಟ್​ಗಾಗಿ ಪರದಾಟ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಇಶಾನ್ ಕಿಶನ್ ಮತ್ತು ರೋಹಿತ್​ ಶರ್ಮಾ ಉತ್ತಮ ಆರಂಭ ನೀಡಿ ಮೊದಲ ವಿಕೆಟ್​ಗೆ ಶತಕದ ಜೊತೆಯಾಟವಾಡಿದರು. ಈ ಸ್ಕೋರ್​​ನಲ್ಲಿ ಇಶಾನ್ ಕಿಶನ್ 69 ರನ್ ಬಾರಿಸಿದರು. ಅವರ ಇನಿಂಗ್ಸ್​ನಲ್ಲಿ 7 ಬೌಂಡರಿ, 5 ಸಿಕ್ಸರ್‌ಗಳಿದ್ದವು. ರೋಹಿತ್​ 38 ರನ್ ಚಚ್ಚಿದರೆ, ಸೂರ್ಯಕುಮಾರ್​ ಕೇವಲ 19 ಎಸೆತಗಳಲ್ಲೇ 5 ಬೌಂಡರಿ, 4 ಸಿಕ್ಸರ್ ಸಹಿತ 52 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ 6 ಎಸೆತಗಳಲ್ಲಿ 21 ರನ್ (3 ಸಿಕ್ಸರ್​) ಗಳಿಸಿದರೆ, 10 ಎಸೆತಗಳಲ್ಲಿ 16 ರನ್ ಗಳಿಸಿದ್ದಾರೆ.

ವಿಲ್ ಜಾಕ್ಸ್, ವಿಜಯ್ ಕುಮಾರ್ ವೈಶಾಕ್, ಆಕಾಶ್ ದೀಪ್ ಒಂದೊಂದು ವಿಕೆಟ್ ಪಡೆದರಾದರೂ ಮುಂಬೈ ಗೆಲುವಿಗೆ ತಡೆ ನೀಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಮುಂಬೈ 15.3 ಓವರ್​ಗಳಲ್ಲೇ ಗೆಲುವಿನ ನಗೆ ಬೀರಿತು.

ಡು ಪ್ಲೆಸಿಸ್, ಪಾಟೀದಾರ್​ ಅರ್ಧ ಶತಕ

ಮುಂಬೈ ವಿರುದ್ಧದ ಪಂದ್ಯಕ್ಕೂ ಮುನ್ನ ಕಳಪೆ ಫಾರ್ಮ್​ನಲ್ಲಿದ್ದ ಡು ಪ್ಲೆಸಿಸ್ ಮತ್ತು ರಜತ್ ಪಾಟೀದಾರ್ ಈ ಪಂದ್ಯದಲ್ಲಿ ಉತ್ತಮವಾಗಿ ಆಡಿದ್ದಾರೆ. ವಿರಾಟ್ ಕೊಹ್ಲಿ(3) ಈ ಪಂದ್ಯದಲ್ಲಿ ನಿರಾಸೆ ಮೂಡಿಸಿದರೆ, ಪ್ಲೆಸಿಸ್ 40 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್​ ಸಹಿತ 61 ರನ್ ಗಳಿಸಿದರು. ಕ್ಯಾಮರೂನ್ ಗ್ರೀನ್​ ಜಾಗದಲ್ಲಿ ತಂಡವನ್ನು ಸೇರಿದ ವಿಲ್ ಜಾಕ್ಸ್ 2 ಬೌಂಡರಿ ಗಳಿಸಿ ಔಟಾದರು. ಪಾಟೀದಾರ್ 26 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಿತ 50 ರನ್ ಗಳಿಸಿದರು. ಆದರೆ ಗ್ಲೆನ್ ಮ್ಯಾಕ್ಸ್​ವೆಲ್ ಮತ್ತೊಮ್ಮೆ ಶೂನ್ಯಕ್ಕೆ ಔಟ್‌ ಆಗಿ ನಿರಾಸೆ ಮೂಡಿಸಿದರು.

ಅಬ್ಬರಿಸಿದ ದಿನೇಶ್ ಕಾರ್ತಿಕ್

ಕೊನೆಯಲ್ಲಿ ಬುಮ್ರಾ 5 ವಿಕೆಟ್ ಉರುಳಿಸಿ ಆರ್​​ಸಿಬಿಗೆ ಕಡಿವಾಣ ಹಾಕಿದರೂ ಕೊನೆಯಲ್ಲಿ ದಿನೇಶ್ ಕಾರ್ತಿಕ್ ಸ್ಫೋಟಕ ಇನಿಂಗ್ಸ್​ ಕಟ್ಟಿದರು. 23 ಎಸೆತಗಳಲ್ಲಿ ಅಜೇಯ 53 ರನ್ ಗಳಿಸಿದರು. 5 ಬೌಂಡರಿ, 4 ಸಿಕ್ಸರ್​ಗಳು ಅವರ ಇನಿಂಗ್ಸ್​​ನಲ್ಲಿದ್ದವು. ಮಹಿಪಾಲ್ ಲೊಮ್ರೋರ್ 0, ಸೌರಭ್ ಚೌಹಾಣ್ 9, ವಿಜಯ್ ಕುಮಾರ್​ 0, ಆಕಾಶ್ ದೀಪ್ 2 ರನ್ ಗಳಿಸಿದರು. ಜಸ್ಪ್ರೀತ್ ಬುಮ್ರಾ 4 ಓವರ್​​ಗಳಲ್ಲಿ 21 ರನ್ ನೀಡಿ 5 ವಿಕೆಟ್ ಪಡೆದರು. ಜೆರಾಲ್ಡ್ ಕೊಯೆಟ್ಜಿ, ಆಕಾಶ್ ಮಧ್ವಾಲ್, ಶ್ರೇಯಸ್ ಗೋಪಾಲ್ ತಲಾ ಒಂದೊಂದು ವಿಕೆಟ್ ಪಡೆದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...