ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

Date:

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಫೈನಲ್ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ ಆರಂಭಿಕ ಆಘಾತ ನೀಡಿದ್ದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್, ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಕಿತ್ತು ಐತಿಹಾಸಿಕ ಸಾಧನೆ ಮಾಡಿದ್ದಲ್ಲದೇ, ಒಟ್ಟು 21 ರನ್‌ ನೀಡಿ 6 ವಿಕೆಟ್ ಗಳಿಸಿದ್ದರು. ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.

ಬಳಿಕ ತನಗೆ ದೊರೆತ 5 ಸಾವಿರ ಡಾಲರ್ ಮೌಲ್ಯದ(ಅಂದಾಜು 4.15 ಲಕ್ಷ) ನಗದು ಮೊತ್ತವನ್ನು ಶ್ರೀಲಂಕಾದ ಮೈದಾನದ ಸಿಬ್ಬಂದಿಗೆ ಅರ್ಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ಸ್ವೀಕರಿಸಿದ ಬಳಿಕ ತನ್ನ ಸಾಧನೆಯ ಬಗ್ಗೆ ಮಾತನಾಡಿದ ಮೊಹಮ್ಮದ್ ಸಿರಾಜ್, “ಇಂದಿನ ಫೈನಲ್ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಲಯ ಕಂಡುಕೊಂಡಿದ್ದೇನೆ. ನನಗೆ ಸಿಕ್ಕಿರುವ ಈ ನಗದು ಬಹುಮಾನವನ್ನು ಮೈದಾನದವರಿಗೆ ನೀಡಲು ಬಯಸುತ್ತೇನೆ. ಅವರು ಅದಕ್ಕೆ ಅರ್ಹರು. ಅವರು ಇಲ್ಲದೇ ಇರುತ್ತಿದ್ದರೆ, ಈ ಪಂದ್ಯಾಕೂಟ ಯಶಸ್ವಿಯಾಗುತ್ತಿರಲಿಲ್ಲ” ಎಂದು ತಿಳಿಸಿ, ಚೆಕ್‌ ಅನ್ನು ಸಿಬ್ಬಂದಿಗಳಿಗೆ ನೀಡಿದರು.

ಸಿರಾಜ್ ಅವರ ಈ ನಡೆಗೆ ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು,’ಮಾದರಿ ನಡೆ” ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ.

ಪಂದ್ಯಾವಳಿಯುದ್ದಕ್ಕೂ ಮಳೆ ಕಾಟ ನೀಡಿದರೂ ಪಂದ್ಯಗಳು ಸುಗಮವಾಗಿ ಸಾಗಲು ಶ್ರಮಿಸಿದ ಶ್ರೀಲಂಕಾದ ಪೆಲ್ಲೆಕೆಲೆ ಮತ್ತು ಆರ್ ಪ್ರೇಮದಾಸ ಸ್ಟೇಡಿಯಂ ಮೈದಾನ ಸಿಬ್ಬಂದಿಗಳಿಗೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಕೂಡ 50 ಸಾವಿರ ಡಾಲರ್ ಮೊತ್ತದ ಬಹುಮಾನ ನೀಡಿ ಗೌರವಿಸಿದೆ. ರಾಷ್ಟ್ರೀಯ ಕ್ಯುರೇಟರ್ ಗಾಡ್ಫ್ರೇ ದಬ್ರೇರೆ ಏಷ್ಯನ್ ಕ್ರಿಕೆಟ್‌ ಕೌನ್ಸಿಲ್‌ನ ಅಧ್ಯಕ್ಷ ಜಯ್ ಶಾ ಅವರಿಂದ ಸ್ವೀಕರಿಸಿದರು.

ಟೂರ್ನಿಯಲ್ಲಿ ಒಂಭತ್ತು ವಿಕೆಟ್‌ಗಳನ್ನು ಗಳಿಸಿದ್ದ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್‌ದೀಪ್ ಯಾದವ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಉತ್ತಮ ಕ್ಯಾಚ್‌ ಪಡೆದದ್ದಕ್ಕೆ ರವೀಂದ್ರ ಜಡೇಜಾ, ‘ಉತ್ತಮ ಕ್ಷೇತ್ರ ರಕ್ಷಕ ಪ್ರಶಸ್ತಿ’ಗೆ ಭಾಜನರಾದರು. ಚಾಂಪಿಯನ್ ಆದ ಟೀಮ್ ಇಂಡಿಯಾ ತಂಡಕ್ಕೆ 150(ಅಂದಾಜು 1.26 ಕೋಟಿ) ಡಾಲರ್ ನಗದು ಬಹುಮಾನ ದೊರೆಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...