ಸಾನಿಯಾ ಮಿರ್ಜಾ ಜೊತೆ ಮದುವೆ ವದಂತಿ; ಮೌನ ಮುರಿದ ಮೊಹಮ್ಮದ್ ಶಮಿ ಹೇಳಿದ್ದೇನು?

Date:

ಟೆನಿಸ್ ತಾರೆ ಸಾನಿಯಾ ಮಿರ್ಜಾ ಜೊತೆ ತನ್ನ ಮದುವೆಯ ವದಂತಿ ಬಗ್ಗೆ ಭಾರತ ಕ್ರಿಕೆಟ್ ತಂಡದ ವೇಗಿ ಬೌಲರ್ ಮೊಹಮ್ಮದ್ ಶಮಿ ಕೊನೆಗೂ ಮೌನ ಮುರಿದಿದ್ದಾರೆ. ವದಂತಿಗಳನ್ನು ಹಬ್ಬಿಸುತ್ತಿರುವವರಿಗೆ ‘ತಾಕತ್ತಿದ್ದರೆ ಪರಿಶೀಲಿಸಿದ (ವೆರಿಫೈಡ್) ಖಾತೆಯ ಮೂಲಕ ಈ ಪೋಸ್ಟ್‌ಗಳನ್ನು ಮಾಡಿ’ ಎಂದು ಸವಾಲೆಸೆದಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಆನ್‌ಲೈನ್‌ನಲ್ಲಿ ಮ್ಯಾನಿಪುಲೇಟ್ ಮಾಡಿದ ಚಿತ್ರಗಳನ್ನು ಹಂಚಿಕೊಂಡು ಮೊಹಮ್ಮದ್ ಶಮಿ ಮತ್ತು ಸಾನಿಯಾ ಮಿರ್ಜಾ ಮದುವೆಯಾಗಲಿದ್ದಾರೆ ಎಂದು ಹೇಳಿಕೊಂಡಿವೆ.

ಯೂಟ್ಯೂಬ್‌ನಲ್ಲಿ ಶುಭಂಕರ್ ಮಿಶ್ರಾ ಜೊತೆಗಿನ ಇತ್ತೀಚಿನ ಸಂವಾದದಲ್ಲಿ ಈ ವದಂತಿಗಳ ಬಗ್ಗೆ ಶಮಿ ಅವರನ್ನು ಪ್ರಶ್ನಿಸಲಾಗಿದ್ದು, ಊಹಾಪೋಹದ ಸುದ್ದಿಗಳನ್ನು ಹರಡುವವರ ವಿರುದ್ಧ ಶಮಿ ಸಿಡಿಮಿಡಿಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಮೇಮ್‌ಗಳು ಜನರಿಗೆ ಮನರಂಜನೆ ನೀಡಬಹುದಾದರೂ ಇದು ಒಬ್ಬರ ವ್ಯಕ್ತಿತ್ವಕ್ಕೆ ಹಾನಿಕಾರಕವೂ ಆಗಬಹುದು. ಸಾಮಾಜಿಕ ಜಾಲತಾಣ ಬಳಸುವಾಗ ಎಲ್ಲರೂ ಜವಾಬ್ದಾರರಾಗಿರಬೇಕು. ಇಂತಹ ಆಧಾರರಹಿತ ಸುದ್ದಿಗಳನ್ನು ಹರಡಬಾರದೆಂದು ನಾನು ಮನವಿ ಮಾಡುತ್ತೇನೆ” ಎಂದು ಶಮಿ ಹೇಳಿದರು.

ಇದನ್ನು ಓದಿದ್ದೀರಾ?  ಮೊಹಮ್ಮದ್ ಶಮಿಗೆ ರಾಷ್ಟ್ರಪತಿಯಿಂದ ಅರ್ಜುನ ಪ್ರಶಸ್ತಿ ಪುರಸ್ಕಾರ

“ಇದು ವಿಚಿತ್ರವಾಗಿದೆ, ಉದ್ದೇಶಪೂರ್ವಕವಾಗಿ ಕೆಲವು ಕೀಳುಮಟ್ಟದ ವಿನೋದಕ್ಕಾಗಿ ಮಾಡಲಾಗಿದೆ. ಆದರೆ ಏನು ಮಾಡಬಹುದು? ನಾನು ನನ್ನ ಫೋನ್ ತೆರೆದರೆ ಆ ಮೇಮ್‌ಗಳೇ ಕಾಣಿಸುತ್ತದೆ” ಎಂದಿದ್ದಾರೆ.

“ಈ ಮೇಮ್‌ಗಳನ್ನು ಮೋಜಿಗಾಗಿ ಮಾಡಲಾಗಿದೆ ಎಂದು ನಾನು ಅಂದುಕೊಂಡಿದ್ದೇನೆ. ಆದರೆ ಇದು ಇನ್ನೊಬ್ಬರ ಜೀವನಕ್ಕೆ ಸಂಬಂಧಿಸಿದೆ. ಹಾಗಿರುವಾಗ ನೀವು ಇನ್ನೊಬ್ಬರ ಜೀವನದ ಬಗ್ಗೆ ಯೋಚಿಸಬೇಕು” ಎಂದು ತಿಳಿಸಿದ್ದಾರೆ.

“ಈ ಜನರು ಪರಿಶೀಲಿಸದ (ವೆರಿಫೈ ಮಾಡದ) ಪೇಜ್‌ಗಳಿಂದ ಈ ಮೇಮ್‌ಗಳನ್ನು ಹಂಚಿಕೊಳ್ಳುತ್ತಾರೆ. ಏನೂ ಬೇಕಾದರೂ ಹೇಳಿ ಸುಮ್ಮನಾಗುತ್ತಾರೆ. ಆದರೆ ನಾನು ಒಂದು ವಿಷಯವನ್ನು ಹೇಳಲು ಬಯಸುತ್ತೇನೆ. ನಿಮಗೆ ತಾಕತ್ತಿದ್ದರೆ ಪರಿಶೀಲಿಸಿದ (ವೆರಿಫೈ ಮಾಡಿರುವ) ಪೇಜ್‌ನಿಂದ ಈ ಪೋಸ್ಟ್‌ಗಳನ್ನ ಮಾಡಿ. ಆಗ ನಾನು ಉತ್ತರಿಸುತ್ತೇನೆ. ಯಶಸ್ಸನ್ನು ಸಾಧಿಸಲು ಪ್ರಯತ್ನಿಸಿ, ಜನರಿಗೆ ಸಹಾಯ ಮಾಡಿ ಮತ್ತು ನಿಮ್ಮನ್ನು ನೀವು ಬದಲಾಯಿಸಿಕೊಳ್ಳಿ. ಆಗ ನೀವು ಒಳ್ಳೆಯ ವ್ಯಕ್ತಿ ಎಂದು ನಾನು ನಂಬುತ್ತೇನೆ” ಎಂದೂ ಕೂಡಾ ಮೊಹಮ್ಮದ್ ಶಮಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...