SIR ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಚುನಾವಣಾ ಆಯೋಗ ಸಮನ್ಸ್

Date:

ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತು ಅವರ ಸಹೋದರ ಮುಹಮ್ಮದ್ ಕೈಫ್ ಅವರಿಗೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ವಿಚಾರಣೆಗೆ ಹಾಜರಾಗುವಂತೆ ಚುನಾವಣಾ ಆಯೋಗ ಸಮನ್ಸ್ ಜಾರಿಗೊಳಿಸಿದೆ.

ದಕ್ಷಿಣ ಕೋಲ್ಕತ್ತಾದ ಜಾದವ್‌ಪುರ ಪ್ರದೇಶದಲ್ಲಿರುವ ಕರ್ಟ್ಜು ನಗರ ಶಾಲೆಯಿಂದ ಸೋಮವಾರ ಅಧಿಕೃತವಾಗಿ ನೋಟಿಸ್ ನೀಡಲಾಗಿದೆ. ಶಮಿ ಕೋಲ್ಕತ್ತಾ ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ 93ರ ಮತದಾರರಾಗಿದ್ದು, ಈ ವಾರ್ಡ್ ರಾಶ್‌ಬೆಹಾರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರಿದೆ. ಶಮಿ ಅವರ ವಿಚಾರಣೆಯನ್ನು ಜನವರಿ 9 ರಿಂದ 11ರ ನಡುವೆ ನಿಗದಿಪಡಿಸಲಾಗಿದೆ.

ಮೂಲಗಳ ಪ್ರಕಾರ, ಮತದಾರರ ಎಣಿಕೆ ಫಾರ್ಮ್ ಸರಿಯಾಗಿ ಭರ್ತಿ ಆಗಿಲ್ಲ ಎಂಬ ಕಾರಣದಿಂದ ಸಮನ್ಸ್ ನೀಡಲಾಗಿದೆ. ವಿಜಯ್ ಹಜಾರೆ ಟ್ರೋಫಿಯಲ್ಲಿ ರಾಜ್‌ಕೋಟ್‌ನಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ನಿಗದಿಯಾಗಿದ್ದ ವಿಚಾರಣೆಗೆ ಶಮಿ ಹಾಜರಾಗಲು ಸಾಧ್ಯವಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂಲತಃ ಉತ್ತರ ಪ್ರದೇಶದವರಾದ ಶಮಿ, ಕ್ರಿಕೆಟ್ ವೃತ್ತಿಜೀವನದ ಆರಂಭದಲ್ಲೇ ಕೋಲ್ಕತ್ತಾಗೆ ತೆರಳಿದ್ದರು. ತರಬೇತುದಾರ ಸಂಬರನ್ ಬ್ಯಾನರ್ಜಿ ಅವರ ಗಮನ ಸೆಳೆದ ಅವರು ಬಂಗಾಳ ಅಂಡರ್–22 ತಂಡದಲ್ಲಿ ಸ್ಥಾನ ಪಡೆದು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಪಯಣ ಆರಂಭಿಸಿದ್ದರು. ಮೋಹನ್ ಬಗಾನ್ ಕ್ರಿಕೆಟ್ ಕಪ್‌ನಲ್ಲೂ ಅವರು ಆಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ, ಜ.11 ರಿಂದ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಹಾಗೂ ಟಿ20I ಸರಣಿಗೆ ಶಮಿ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲ.

ಇದನ್ನು ಓದಿದ್ದೀರಾ? ರೋಹಿತ್- ಕೊಹ್ಲಿ ನಿವೃತ್ತಿ ನಂತರ ಏಕದಿನ ಕ್ರಿಕೆಟ್ ಅಂತ್ಯ: ಆರ್ ಅಶ್ವಿನ್ ಕಳವಳ

ಇದೇ ವೇಳೆ, ನಟ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದ ದೇವ್ (ದೀಪಕ್ ಅಧಿಕಾರಿ) ಅವರಿಗೂ ಎಸ್‌ಐಆರ್ ವಿಚಾರಣೆಗೆ ಸಂಬಂಧಿಸಿದಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ದೇವ್ ಅವರ ಕುಟುಂಬದ ಇನ್ನೂ ಮೂವರು ಸದಸ್ಯರಿಗೂ ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿದೆ. ಆದರೆ, ವಿಚಾರಣೆಗೆ ಹಾಜರಾಗಬೇಕಾದ ದಿನಾಂಕ ಮತ್ತು ಸಮಯ ಇನ್ನೂ ಸ್ಪಷ್ಟವಾಗಿಲ್ಲ.

ಸಮನ್ಸ್ ಕುರಿತು ದೇವ್ ಅಥವಾ ಅವರ ಕುಟುಂಬದಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಆದರೆ, ನಟ ಹಾಗೂ ಜನಪ್ರತಿನಿಧಿಗೆ ಈ ರೀತಿಯ ನೋಟಿಸ್ ನೀಡಿರುವುದು ಕಿರುಕುಳದ ಕ್ರಮ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.

ದೇವ್ ಅವರ ಪೂರ್ವಜರ ಮನೆ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಘಾಟಲ್‌ನಲ್ಲಿ ಇದ್ದು, ಅವರು ಅಲ್ಲಿ ಜನಿಸಿದ್ದಾರೆ. ತಂದೆಯ ಉದ್ಯೋಗದ ಹಿನ್ನೆಲೆ ಕುಟುಂಬ ಮುಂಬೈಗೆ ಸ್ಥಳಾಂತರಗೊಂಡಿದ್ದು, ನಂತರ ನಟನಾ ವೃತ್ತಿಜೀವನದ ಕಾರಣದಿಂದ ಕೋಲ್ಕತ್ತಾದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಸೌತ್ ಸಿಟಿ ವಸತಿ ಸಂಕೀರ್ಣದಲ್ಲಿರುವುದೇ ಅವರ ಶಾಶ್ವತ ವಿಳಾಸ. ಟಾಲಿವುಡ್‌ನ ಪ್ರಮುಖ ನಟರಾಗಿರುವ ದೇವ್, ಘಾಟಲ್‌ನಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...