ಬರೋಬ್ಬರಿ 2 ವರ್ಷದ ಬಳಿಕ ‘ಟೀಮ್ ಇಂಡಿಯಾ’ಗೆ ಮೊಹಮ್ಮದ್ ಶಮಿ ಕಮ್‌ ಬ್ಯಾಕ್‌

Date:

ಭಾರತದ ಟಿ20 ತಂಡಕ್ಕೆ ವೇಗಿ ಬೌಲರ್ ಮೊಹಮ್ಮದ್ ಶಮಿ ಅವರು ಬರೊಬ್ಬರಿ 2 ವರ್ಷದ ಬಳಿಕ ಮತ್ತೆ ಆಯ್ಕೆಯಾಗಿದ್ದಾರೆ. 2022ರಿಂದ ಟಿ20 ಪಂದ್ಯಗಳಲ್ಲಿ ಆಡಿದ್ದು ಶಮಿ, ಆ ಬಳಿಕ ತಂಡದಿಂದ ಹೊರಗುಳಿದಿದ್ದರು. ಇದೀಗ, ಮತ್ತೆ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.

2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪಂದ್ಯ ಅವರ ಕೊನೆಯ ಪಂದ್ಯವಾಗಿತ್ತು. ಅಡಿಲೇಡ್‌ನಲ್ಲಿ ನಡೆದ ಆ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದ ಶಮಿ, 3 ಓವರ್‌ಗಳ ಬೌಲಿಂಗ್‌ ಮಾಡಿ, 39 ರನ್‌ ನೀಡಿದ್ದರು. ಆ ಬಳಿಕ ತಂಡದಿಂದ ಹೊರಗುಳಿದಿದ್ದರು.

ಮೂರು ಓವರ್‌ಗೆ 39 ರನ್‌ ನೀಡಿದ್ದನ್ನು ಕಳಪೆ ಪ್ರದರ್ಶನವೆಂದು ಪರಿಗಣಿಸಿದ್ದ ಬಿಸಿಸಿಐ, ಆ ಬಳಿಕ ಅವರನ್ನು ಟಿ20 ತಂಡದಿಂದ ಹೊರಗಿಟ್ಟಿತ್ತು. ಆ ನಂತರದ ಯಾವುದೇ ಟಿ20 ಟೂರ್ನಿಗಳಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ, ಮತ್ತೆ ಟಿ20 ತಂಡಕ್ಕೆ ಪುನರ್‌ ಆಯ್ಕೆಯಾಗಿದ್ದಾರೆ. ಅದೂ, 790 ದಿನಗಳ (2ವರ್ಷ 3 ತಿಂಗಳ) ಬಳಿಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಈ ಎರಡು ವರ್ಷಗಳಲ್ಲಿ ಏಕದಿನ ಮತ್ತು ಟೆಸ್ಟ್‌ ಕ್ರಿಕೆಟ್‌ಗಳಲ್ಲಿ ಶಮಿ ತಂಡದಲ್ಲಿದ್ದರು. ಉತ್ತಮ ಪ್ರದರ್ಶನವನ್ನೂ ನೀಡಿದ್ದರು. ಈಗ ಅವರು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಮ್‌ ಇಂಡಿಯಾ ಪರವಾಗಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ದದ ಪಂದ್ಯಗಳಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದರೆ, ಅವರನ್ನು ಮುಂದಿನ ಚಾಂಪಿಯನ್‌ಶಿಪ್ ಟ್ರೋಫಿಯ ಟೂರ್ನಿಗೂ ಆಯ್ಕೆ ಮಾಡುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಭಾರತದ ತಂಡದ ನಾಯಕತ್ವವನ್ನು ಸೂರ್ಯಕುಮಾರ್ ಯಾದವ್ ವಹಿಸಲಿದ್ದಾರೆ. ಅಕ್ಷರ್ ಪಟೇಲ್ (ಉಪಾನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್) ಇರಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...