ಎಟಿಕೆ ಮೋಹನ್‌ ಬಗಾನ್‌ ಮಡಿಲಿಗೆ ಚೊಚ್ಚಲ ಐಎಸ್‌ಎಲ್‌ ಕಿರೀಟ, ಶೂಟೌಟ್‌ನಲ್ಲಿ ಮುಗ್ಗರಿಸಿದ ಬೆಂಗಳೂರು

Date:

    • ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿದ ಸುನಿಲ್‌ ಛೆಟ್ರಿ ಪಡೆ
    • 2ನೇ ಬಾರಿ ಚಾಂಪಿಯನ್‌ ಆಗುವ ಬಿಎಫ್‌ಸಿ ಕನಸು ಭಗ್ನ

    ಬೆಂಗಳೂರು ಎಫ್‌ಸಿ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿದ ಎಟಿಕೆ ಮೋಹನ್‌ ಬಗಾನ್‌ ಕ್ಲಬ್‌, 9ನೇ ಆವೃತ್ತಿಯ ಐಎಸ್‌ಎಲ್‌ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ಪಟ್ಟ ಅಲಂಕರಿಸಿದೆ.

    ಗೋವಾದ ಫಟೋರ್ಡಾದ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಪ್ರಶಸ್ತಿ ಸುತ್ತಿನ ಹಣಾಹಣಿಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿತ್ತು. ಎಟಿಕೆ ಪರ ಡಿಮಿಟ್ರಿ ಪೆಟ್ರಾಟೋಸ್ 14 ಮತ್ತು 85ನೇ ನಿಮಿಷದಲ್ಲಿ ಪೆನಾಲ್ಟಿ ಮೂಲಕ ಗೋಲು ದಾಖಲಿಸಿದರೆ, ಬೆಂಗಳೂರು ಪರ ನಾಯಕ ಸುನಿಲ್ ಛೆಟ್ರಿ 45+5ನೇ ನಿಮಿಷ (ಪೆನಾಲ್ಟಿ) ಮತ್ತು 78ನೇ ನಿಮಿಷದಲ್ಲಿ ರಾಯ್ ಕೃಷ್ಣ  ಗೋಲು ದಾಖಲಿಸಿದ್ದರು.

    ಪೂರ್ಣಾವಧಿಯ ವೇಳೆಗೆ ಉಭಯ ತಂಡಗಳು 2-2 ಗೋಲುಗಳಿಂದ ಸಮಬಲ ಸಾಧಿಸಿದ್ದರಿಂದ ಪಂದ್ಯ ಹೆಚ್ಚುವರಿ ಅವಧಿಗೆ ಮುಂದೂಡಲ್ಪಟ್ಟಿತು. ಹೆಚ್ಚುವರಿ ಅವಧಿಯ 30 (15+15) ನಿಮಿಷಗಳ ಆಟದಲ್ಲಿ ಯಾವುದೇ ಗೋಲು ದಾಖಲಾಗಲಿಲ್ಲ. ಹೀಗಾಗಿ ಫಲಿತಾಂಶಕ್ಕಾಗಿ ಪೆನಾಲ್ಟಿ ಶೂಟ್‌ಟ್‌ ಮೊರೆ ಹೋಗಲಾಯಿತು.

    ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

    ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

    ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

    ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

    ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

    ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

    ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

    ಪೆನಾಲ್ಟಿ ಶೂಟೌಟ್‌ನಲ್ಲಿ ದೊರೆತ 5 ಅವಕಾಶಗಳಲ್ಲಿ ನಾಲ್ಕನ್ನು ಮೋಹನ್‌ ಬಗಾನ್‌ ಆಟಗಾರರು ಗೋಲಾಗಿ ಪರಿವರ್ತಿಸಿದ್ದರು. ಆದರೆ ಕೇವಲ ಮೂರು ಬಾರಿಯಷ್ಟೇ ಗುರಿ ತಲುಪಲು ಬಿಎಫ್‌ಸಿಗೆ ಸಾಧ್ಯವಾಯಿತು. ಆ ಮೂಲಕ ಕೋಲ್ಕತ್ತಾದ ಎಟಿಕೆ ಮೋಹನ್‌ ಬಗಾನ್‌ ತಂಡದ ಚೊಚ್ಚಲ ಐಎಸ್‌ಎಲ್ ಕಿರೀಟದ ಕನಸು ಗೋವಾದ ಮಣ್ಣಿನಲ್ಲಿ ನನಸಾಯಿತು.

    ಮಾರ್ಚ್‌ 12ರಂದು ಕಂಠೀರವ ಸ್ಟೇಡಿಯಂನಲ್ಲಿ ನಡೆದಿದ್ದ ಎರಡನೇ ಚರಣದ ಸೆಮಿಫೈನಲ್‌ ಪಂದ್ಯದಲ್ಲಿ ಮುಂಬೈ ಸಿಟಿ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ ಮಣಿಸಿ ಬಿಎಫ್‌ಸಿ ನಾಲ್ಕು ವರ್ಷಗಳ ಬಳಿಕ ಒಟ್ಟಾರೆ 3ನೇ ಬಾರಿಗೆ ಐಎಸ್‌ಎಲ್‌ ಫೈನಲ್‌ ಪ್ರವೇಶಿಸಿತ್ತು.

    2017-18ನೇ ಆವೃತ್ತಿಯಲ್ಲಿ ಮೊದಲ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಬಿಎಫ್‌ಸಿ, ಚೆನ್ನೈ ಎಫ್‌ಸಿ ತಂಡಕ್ಕೆ 2-3 ಗೋಲುಗಳ ಅಂತರದಲ್ಲಿ ಶರಣಾಗಿತ್ತು. ಮುಂದಿನ ಆವೃತ್ತಿಯಲ್ಲಿ (2018-19) ಸತತ ಎರಡನೇ ಬಾರಿ ಫೈನಲ್‌ ಪ್ರವೇಶಿಸಿ, ಗೋವಾ ತಂಡವನ್ನು ಮಣಿಸಿ ಬೆಂಗಳೂರು ಚೊಚ್ಚಲ ಚಾಂಪಿಯನ್‌ ಪಟ್ಟವನ್ನೇರಿತ್ತು. ಆದರೆ ಮೂರನೇ ಬಾರಿ  ಫೈನಲ್‌ ಪ್ರವೇಶಿಸಿ 2ನೇ ಬಾರಿ ಚಾಂಪಿಯನ್‌ ಆಗುವ ಹುಮ್ಮಸ್ಸಿನಲ್ಲಿದ್ದ ಬಿಎಫ್‌ಸಿಗೆ ನಿರಾಸೆಯಾಗಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...