ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆ ಗಾಲ್ಫ್ ಆಟವಾಡಿದ ಧೋನಿ

Date:

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ ಎಸ್ ಧೋನಿ ಅವರು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ಗಾಲ್ಫ್ ಆಟವಾಡಿರುವ ದೃಶ್ಯ ಹಾಗೂ ಭಾವಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.

ದುಬೈ ಮೂಲದ ಉದ್ಯಮಿಯಾಗಿರುವ ಸಾಂಘ್ವಿ ಅವರು ಎಂ ಎಸ್ ಧೋನಿ ಜೊತೆಗಿದ್ದರು ಮತ್ತು ಅವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಧೋನಿ ಹಾಗೂ ಟ್ರಂಪ್‌ ಅವರ ಹಲವಾರು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಒಂದು ದಿನದ ಹಿಂದೆ, ಧೋನಿ ಮತ್ತು ಸಾಂಘ್ವಿ ಇಬ್ಬರು ಯುಎಸ್ ಓಪನ್‌ ಟೆನಿಸ್‌ನಲ್ಲಿ ಕಾಣಿಸಿಕೊಂಡರು.

ಧೋನಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ ಎಂಬುದನ್ನು ಅರಿತು ಸ್ವತಃ ಟ್ರಂಪ್ ಅವರೇ ಧೋನಿಯನ್ನು ಗಾಲ್ಫ್ ಆಟಕ್ಕೆ ಆಹ್ವಾನಿಸಿದ್ದರು. ಸೆಪ್ಟೆಂಬರ್ 6 ರಂದು, ಪುರುಷರ ಸಿಂಗಲ್ಸ್ ಕ್ವಾರ್ಟರ್‌ ಫೈನಲ್ ಪಂದ್ಯದ ವೇಳೆ ಕಾರ್ಲೋಸ್ ಅಲ್ಕರಾಜ್ ಮತ್ತು ಅಲೆಕ್ಸಾಂಡರ್ ಜ್ವೆರೆವ್ ನಡುವಿನ ಟೆನಿಸ್ ಆಟವನ್ನು ವೀಕ್ಷಿಸಲು ಧೋನಿ ಆರ್ಥರ್ ಆ್ಯಶ್ ಸ್ಟೇಡಿಯಂನಲ್ಲಿ ಹಾಜರಿದ್ದರು. ಇದರ ವಿಡಿಯೋ ಕೂಡ ಎರಡು ದಿನಗಳ ಹಿಂದೆ ವೈರಲ್ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಏಷ್ಯಾ ಕಪ್ ಕ್ರಿಕೆಟ್ | 10 ವಿಕೆಟ್ ಗೆಲುವಿನೊಂದಿಗೆ ಸೂಪರ್‌ 4 ಪ್ರವೇಶಿಸಿದ ಭಾರತ

ಎಂ ಎಸ್ ಧೋನಿ ಅಮೆರಿಕಾ ಪ್ರವಾಸದಿಂದ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದು, ಐಪಿಎಲ್‌ನ 2024ನೇ ಆವೃತ್ತಿಗಾಗಿ ತಯಾರಿ ಆರಂಭಿಸಲಿದ್ದಾರೆ. 2023 ರಲ್ಲಿ ಐದನೇ ಐಪಿಎಲ್ ಟ್ರೋಪಿಯನ್ನು ಗೆದ್ದ ನಂತರ, ಧೋನಿ ಅವರು ಲೀಗ್‌ನಿಂದ ಇನ್ನೂ ನಿವೃತ್ತಿಯಾಗಿಲ್ಲ ಎಂದು ಹೇಳಿದ್ದರು.

ಈ ವರ್ಷದ ಆರಂಭದಲ್ಲಿ, ಮಹೇಂದ್ರ ಸಿಂಗ್ ಧೋನಿ ಮುಂಬೈ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಐದನೇ ಐಪಿಎಲ್ ಪ್ರಶಸ್ತಿ ದೊರಕಿಸಿಕೊಟ್ಟ ನಂತರ ಧೋನಿ ಅಹಮದಾಬಾದ್‌ನಿಂದ ಮುಂಬೈಗೆ ತೆರಳಿದ್ದರು. ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ. ದಿನ್ಶಾ ಪಾರ್ದಿವಾಲಾ ಅವರನ್ನು ಭೇಟಿಯಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಪಾರ್ದಿವಾಲಾ ಅವರು ರಿಷಬ್ ಪಂತ್ ಸೇರಿದಂತೆ ಹಲವು ಕ್ರಿಕೆಟರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುದ್ಧ ಪರಿಣಾಮ: ಶ್ರೀಲಂಕಾದಲ್ಲಿ ಇಂಧನ ದರ 25% ಏರಿಕೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ....

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...