ವಿಶ್ವ ಚಾಂಪಿಯನ್‌ಶಿಪ್‌, ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದ ಕೇರಳದ ಮುರಳಿ ಶ್ರೀಶಂಕರ್

Date:

ಕೇರಳದ ಯುವ ಲಾಂಗ್‌ ಜಂಪ್‌ ಪಟು ಮುರಳಿ ಶ್ರೀಶಂಕರ್, ಆಗಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ.

ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲೇ 8.41 ಮೀ. ದೂರ ಜಿಗಿಯುವಲ್ಲಿ 24 ವರ್ಷದ ಮುರಳಿ ಯಶಸ್ವಿಯಾದರು. ಆ ಮೂಲಕ  ವಿಶ್ವ ಚಾಂಪಿಯನ್‌ಶಿಪ್‌  ಮತ್ತು  ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾದರು. ವೃತ್ತಿ ಜೀವನದ ಇದುರೆಗಿನ ಸ್ಪರ್ಧೆಯಲ್ಲಿ, 8.41 ಮೀ.  ದೂರ ಜಿಗಿತ ಶ್ರೀಶಂಕರ್ ಅವರ ವೈಯಕ್ತಿಕ ಶ್ರೇಷ್ಠಸಾಧನೆಯಾಗಿದೆ.

ಆಗಸ್ಟ್ 19 ರಿಂದ ಆಗಸ್ಟ್ 27 ರವರೆಗೆ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ನ ಪುರುಷರ ಲಾಂಗ್ ಜಂಪ್‌ ವಿಭಾಗದಲ್ಲಿ ಅರ್ಹತೆ ಪಡೆಯಲು,  8.25 ಮೀ. ಮತ್ತು  ಏಷ್ಯನ್ ಗೇಮ್ಸ್‌ನಲ್ಲಿ 7.95 ಮೀ. ದೂರ ಜಿಗಿತ ಮಾನದಂಡವಾಗಿ ನಿಗದಿಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾಗಿಯೂ, ಈ ವರ್ಷದ ಆರಂಭದಲ್ಲಿ ಜೆಸ್ವಿನ್ ಆಲ್ಡ್ರಿನ್ ಸ್ಥಾಪಿಸಿದ್ದ ರಾಷ್ಟ್ರೀಯ ದಾಖಲೆಯನ್ನು (8.42) ದೂರವನ್ನು ಹಿಂದಿಕ್ಕಲು ಮುರಳಿ ಶ್ರೀಶಂಕರ್ ಅವರಿಗೆ ಸಾಧ್ಯವಾಗಲಿಲ್ಲ. ಕೇವಲ ಒಂದು ಸೆಂಟಿಮೀಟರ್ ದೂರದಲ್ಲಿ ಅವರಿಗೆ ಈ ಸಾಧನೆ ಸದ್ಯಕ್ಕೆ ಕೈತಪ್ಪಿದೆ.

ಭುವನೇಶ್ವರದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅಂತರ-ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನಲ್ಲಿ ಜೆಸ್ವಿನ್ ಆಲ್ಡ್ರಿನ್ 7.83 ಮೀ. ಜಿಗಿತದೊಂದಿಗೆ ಎರಡನೇ ಸ್ಥಾನ ಮತ್ತು ಮುಹಮ್ಮದ್ ಅನೀಸ್ ಯಾಹಿಯಾ (7.71 ಮೀಟರ್‌) ಮೂರನೇ ಸ್ಥಾನ ಪಡೆದರು. ಸೋಮವಾರ ನಡೆಯಲಿರುವ ಫೈನಲ್‌ ಸುತ್ತಿಗೆ ಒಟ್ಟು 12 ಲಾಂಗ್ ಜಂಪರ್‌ಗಳು ಅರ್ಹತೆ ಪಡೆದಿದ್ದಾರೆ.

ಡೈಮಂಡ್ ಲೀಗ್‌ನಲ್ಲಿ ಕಂಚಿನ ಪದಕ

ಜೂನ್ 9 ರಂದು, ಪ್ಯಾರಿಸ್‌ನಲ್ಲಿ ನಡೆದಿದ್ದ ಡೈಮಂಡ್ ಲೀಗ್‌ ಸ್ಪರ್ಧೆಯಲ್ಲಿ ಶ್ರೀಶಂಕರ್ ಕಂಚಿನ ಪದಕದ ಸಾಧನೆ ಮಾಡಿದ್ದರು. ಆ ಮೂಲಕ ಡೈಮಂಡ್ ಲೀಗ್‌ ಕೂಟದಲ್ಲಿ ಪದಕ ಗೆದ್ದ ಮೂರನೇ ಭಾರತೀಯ ಅಥ್ಲೀಟ್‌ ಎನ್ನುವ ಖ್ಯಾತಿಯನ್ನು ತನ್ನದಾಗಿಸಿಕೊಂಡಿದ್ದರು.

ಒಲಿಂಪಿಕ್ ಚಾಂಪಿಯನ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಮತ್ತು ಮಾಜಿ ಡಿಸ್ಕಸ್ ಎಸೆತಗಾರ ವಿಕಾಸ್ ಗೌಡ ಬಳಿಕ ಈ ಸಾಧನೆ ಮಾಡಿದ ಭಾರತದ ಮೂರನೇ ಅಥ್ಲೀಟ್‌ ಎನಿಸಿಕೊಂಡರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...