ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ನರೇಂದ್ರ ಮೋದಿ, ಅಮಿತ್ ಶಾ, ಸಚಿನ್ !

Date:

ಟೀ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಕರೆಯಲಾಗಿದ್ದ ಅರ್ಜಿಯ ಅವಧಿ ಮುಗಿದಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ 3 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಆದಾಗ್ಯೂ ಭಾರತ ತಂಡದ ಮಾಜಿ ಆಟಗಾರ ಗೌತಮ್‌ ಗಂಭೀರ್‌ ಕೋಚ್‌ ಹುದ್ದೆಯ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ.

ಅರ್ಜಿ ಸಲ್ಲಿಸಿದವರಲ್ಲಿ ನರೇಂದ್ರ ಮೋದಿ, ಅಮಿತ್‌ ಶಾ ಹಾಗೂ ಸಚಿನ್‌ ತೆಂಡೂಲ್ಕರ್‌ ಅವರ ಹೆಸರುಗಳು ಇವೆ. ಬಿಸಿಸಿಐ ಟೀಂ ಇಂಡಿಯಾ ಮುಖ್ಯ ಕೋಚ್‌ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ಹೆಸರುಗಳನ್ನು ಸಾರ್ವಜನಿಕಗೊಳಿಸಲು ನಿರ್ಧರಿಸಿದ್ದು, ಹಲವರು ಖ್ಯಾತ ಸೆಲಬ್ರಿಟಿಗಳು ಹಾಗೂ ರಾಜಕೀಯ ನಾಯಕರ ನಕಲಿ ಹೆಸರನ್ನು ಬಳಸಿಕೊಂಡು ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿ ಸಲ್ಲಿಸಿರುವ ನಕಲಿ ಹೆಸರುಗಳಲ್ಲಿ ಮಾಜಿ ಕ್ರಿಕೆಟರುಗಳಾದ ಸಚಿನ್‌ ತೆಂಡೂಲ್ಕರ್, ಮಹೇಂದ್ರ ಸಿಂಗ್‌ ಧೋನಿ, ಹರ್‌ಭಜನ್‌ ಸಿಂಗ್‌, ವೀರೇಂದ್ರ ಸೆಹ್ವಾಗ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ ಕಳೆದ ವರ್ಷ ಕೂಡ ಟೀಂ ಇಂಡಿಯಾ ಮುಖ್ಯ ಕೋಚ್‌ ಹುದ್ದೆಗೆ ಬಿಸಿಸಿಐ ಇದೇ ರೀತಿ ಸುಳ್ಳು ಹೆಸರುಗಳನ್ನು ಬಳಸಿ ಅರ್ಜಿಗಳನ್ನು ಸ್ವೀಕರಿಸಿತ್ತು.ಗೂಗಲ್‌ ಫಾರ್ಮ್‌ಗಳಲ್ಲಿ ಅರ್ಜಿಗಳನ್ನು ಆಹ್ವಾನಿಸುವ ಕಾರಣ ಅರ್ಜಿದಾರರ ಹೆಸರುಗಳನ್ನು  ಸುಲಭವಾಗಿ ಪರಿಶೀಲಸಬಹುದಾಗಿದೆ” ಎಂದು ಬಿಸಿಸಿಐ ಅಧಿಕಾರಿಗಳು ಹೇಳುತ್ತಾರೆ.

ಪ್ರಸ್ತುತ ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್‌ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸುತ್ತಿದ್ದು, 2023ರ ಏಕದಿನ ವಿಶ್ವಕಪ್‌ ವೇಳೆಗೆ ರಾಹುಲ್ ದ್ರಾವಿಡ್‌ ಅವರ ಅವಧಿ ಮುಗಿದಿದೆ. ಬಿಸಿಸಿಐ ದ್ರಾವಿಡ್ ಅವರ ಅವಧಿಯನ್ನುಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್‌ ತನಕ ಮುಂದುವರೆಸಿದೆ.

ಬಿಸಿಸಿಐ ಹುದ್ದೆಯ ವಿವರವನ್ನು ತನ್ನ ವೆಬ್‌ಸೈಟ್‌ನಲ್ಲಿ ಹಂಚಿಕೊಂಡಿತ್ತು. ಫುರುಷರ ಹಿರಿಯರ ಮುಖ್ಯ ಕೋಚ್‌ ಹುದ್ದೆಯ ಅವಧಿಯು 3.5 ವರ್ಷಗಳವರೆಗೆ ಇರಲಿದ್ದು, 2024, ಜುಲೈ 1ರಿಂದ ಡಿಸೆಂಬರ್‌ 31 2027ರವರೆಗೂ ಕಾರ್ಯನಿರ್ವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತ – ಪಾಕ್ ಟಿ20 ವಿಶ್ವಕಪ್ ಪಂದ್ಯದ ಪ್ರತಿ ಟಿಕೆಟ್ ಬೆಲೆ ಬರೋಬ್ಬರಿ 17 ಲಕ್ಷ ರೂ!

ಮುಖ್ಯ ಕೋಚ್‌ ಹುದ್ದೆಯು ಭಾರತ ಕ್ರಿಕೆಟ್‌ ತಂಡವನ್ನು ಟಿ20, ಏಕದಿನ ಹಾಗೂ ಟೆಸ್ಟ್‌ ಒಳಗೊಂಡು ಎಲ್ಲ ಮಾದರಿಯಲ್ಲೂ ‘ವಿಶ್ವದ ಅತ್ಯುತ್ತಮ ತಂಡವಾಗಿ’ ಅಭಿವೃದ್ಧಿಪಡಿಸುವುದು ಹಾಗೂ ನಿರ್ವಹಿಸುವುದು. ಸಹಾಯಕ ಕೋಚ್‌ಗಳು ಹಾಗೂ ಸಿಬ್ಬಂದಿ ತರಬೇತುದಾರರನ್ನು ನಿರ್ವಹಿಸುವುದು ಮತ್ತು ಅಭಿವೃದ್ಧಿಪಡಿಸುವುದಾಗಿರುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ರಿಕೆಟ್‌ನಲ್ಲಿ ಗಮನಾರ್ಹ ಅನುಭವವನ್ನು ಹೊಂದಿರಬೇಕು. ಕನಿಷ್ಠ 30 ಟೆಸ್ಟ್‌ಗಳು ಅಥವಾ 50 ಏಕದಿನ ಆಡಿರಬೇಕು ಅಥವಾ ಎರಡು ವರ್ಷ ಟೆಸ್ಟ್‌ ಆಡಿರುವ ರಾಷ್ಟ್ರೀಯ ತಂಡದ ಕೋಚ್‌ ಹುದ್ದೆಯನ್ನು ನಿರ್ವಹಿಸಿರಬೇಕು.

ಇದರ ಜೊತೆ ಐಪಿಎಲ್ ತಂಡ ಅಥವಾ ಅದಕ್ಕೆ ಸಮನಾರ್ಹ ಮಾದರಿಗಳಲ್ಲಿ ಮುಖ್ಯ ಕೋಚ್‌ ಆಗಿರುವವರ ಬಳಿ ಸಹಾಯಕ ಸದಸ್ಯರಾಗಿ ಮೂರು ವರ್ಷ ಅನುಭವ ಹೊಂದಿರಬೇಕು. ಬಿಸಿಸಿಐ ಮಟ್ಟದ 3 ಪ್ರಮಾಣಪತ್ರ ಅಥವಾ ಸಮಾನಾರ್ಹವಾದುದನ್ನು ಒಳಗೊಂಡಿರಬೇಕು. ಅಭ್ಯರ್ಥಿಗಳು ವಯಸ್ಸಿನಲ್ಲಿ 60 ವರ್ಷಕ್ಕಿಂತ ಕೆಳಗಿರಬೇಕು.

ಪುರುಷರ ಭಾರತದ ಕ್ರಿಕೆಟ್ ತಂಡದ ಮುಖ್ಯ ಕೋಚ್‌ನ ವೇತನದ ಬಗ್ಗೆ ವಿವರಿಸಿರುವ ಬಿಸಿಸಿಐ, ವೇತನವು ನೆಗೋಶಿಯಬಲ್(ಮಾತುಕತೆ ಮೂಲಕ ಹೆಚ್ಚು ಕಡಿಮೆ ಮಾಡಿಕೊಳ್ಳುವುದು) ಹಾಗೂ ಅನುಭವಕ್ಕೆ ಅನುಗುಣವಾಗಿ ನೀಡಲಾಗುತ್ತದೆ” ಎಂದು ತಿಳಿಸಲಾಗಿದೆ.

ಈಗ ಕಾರ್ಯ ನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರಿಗೆ ವಾರ್ಷಿಕವಾಗಿ 12 ಕೋಟಿ ರೂ. ವೇತನ ನೀಡಲಾಗುತ್ತಿದೆ. ಹಿಂದೆ ರವಿ ಶಾಸ್ತ್ರಿ ಅವರಿಗೆ 9 ರಿಂದ 10 ಕೋಟಿ ವೇತನ ನೀಡಲಾಗುತ್ತಿತ್ತು. ನೂತನ ಕೋಚ್‌ಗೆ 12 ಕೋಟಿಗೂ ಹೆಚ್ಚು ವೇತನ ನೀಡುವ ಸಾಧ್ಯತೆಯಿದೆ ಎನ್ನುತ್ತಿವೆ ಮೂಲಗಳು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...