ಅಡಿಲೇಡ್‌ನಲ್ಲಿ ಇಂದಿನಿಂದ ಭಾರತ – ಆಸ್ಟ್ರೇಲಿಯಾ ಪಿಂಕ್‌ ಬಾಲ್‌ ಟೆಸ್ಟ್

Date:

ಬಾರ್ಡರ್-ಗವಾಸ್ಕರ್ ಟ್ರೋಫಿಯ ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಕ್ರಿಕೆಟ್‌ ಟೆಸ್ಟ್​ ಪಂದ್ಯ ಇಂದಿನಿಂದ ಅಡಿಲೇಡ್‌ನ ಓವಲ್‌ನಲ್ಲಿ ಆರಂಭವಾಗಲಿದೆ. ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯ ಗೆದ್ದಿರುವ ಭಾರತ ಇದೀಗ ಪಿಂಕ್‌ ಬಾಲ್‌ ಟೆಸ್ಟ್​ ಮೇಲೆ ಕಣ್ಣಿಟ್ಟಿದ್ದು, ಸರಣಿ ಮುನ್ನಡೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮೊದಲ ಟೆಸ್ಟ್​ನಿಂದ ಹೊರಗುಳಿದಿದ್ದ ನಾಯಕ ರೋಹಿತ್​ ಶರ್ಮಾ ತಂಡಕ್ಕೆ ವಾಪಸ್​ ಆಗಿದ್ದಾರೆ. ಮತ್ತೊಂದೆಡೆ, ಕೈ ಬೆರಳ ಗಾಯಕ್ಕೆ ತುತ್ತಾಗಿದ್ದ ಶುಭಮನ್​ ಗಿಲ್​ ಕೂಡ ಚೇತರಿಸಿಕೊಂಡು ನೆಟ್ಸ್​ನಲ್ಲಿ ಅಭ್ಯಾಸ ನಡೆಸಿದ್ದಾರೆ. ಇದರಿಂದಾಗಿ ಈ ಇಬ್ಬರು ಆಟಗಾರರು ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಮೊದಲ ಪಂದ್ಯವನ್ನಾಡಿದ್ದ ದೇವದತ್​ ಪಡಿಕ್ಕಲ್​ ಮತ್ತು ಧ್ರುವ್​ ಜುರೇಲ್​ 2ನೇ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ.

ಜೈಸ್ವಾಲ್​ ಜೊತೆ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದ್ದು, ಇದಕ್ಕೆ ನಾಯಕ ರೋಹಿತ್​ ಶರ್ಮಾ ಉತ್ತರ ನೀಡಿದ್ದಾರೆ. ಅಡಿಲೇಡ್​ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎರಡನೇ ಟೆಸ್ಟ್​ನಲ್ಲಿ ನಾನು ಆರಂಭಿಕನಾಗಿ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರ್ತ್ ಟೆಸ್ಟ್ ಪಂದ್ಯದಂತೆ ಕೆ.ಎಲ್.ರಾಹುಲ್ ಮತ್ತು ಜೈಸ್ವಾಲ್​ ಆರಂಭಿಕರಾಗಿರಲಿದ್ದಾರೆ. ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಅಗ್ರ ಕ್ರಮಾಂಕದ ಆಟಗಾರರು ಮಿಂಚಿದರೆ ತಂಡ ಒಳ್ಳೆಯ ಸ್ಕೋರ್​ ಕಲೆಹಾಕಬಹುದು. ಈ ಹಿನ್ನೆಲೆಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡುವುದಾಗಿ ರೋಹಿತ್​ ಶರ್ಮಾ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇಂಡಿಯಾ-ಆಸ್ಟ್ರೇಲಿಯಾ ಕ್ರಿಕೆಟ್ | ರಾಹುಲ್ ಆಟಕ್ಕೆ ಹತ್ತು ವರ್ಷ ಮತ್ತು ಪಿಂಕ್ ಬಾಲ್ ಟೆಸ್ಟ್

ಅಡಿಲೇಡ್‌ ಓವಲ್‌ ಭಾರತದ ಪಾಲಿಗೆ ಸೋಲುಗೆಲುವಿನ ಕಣವಾಗಿದೆ. 2001ರಿಂದೀಚೆ ಭಾರತ ಇಲ್ಲಿ ಎರಡು ಟೆಸ್ಟ್‌ಗಳನ್ನು ಗೆದ್ದು ಪ್ರವಾಸಿ ತಂಡಗಳ ಪೈಕಿ ಅತಿ ಹೆಚ್ಚು ಯಶಸ್ಸು ಪಡೆದಿದೆ. ಇದೇ ಅವಧಿಯಲ್ಲಿ ಆಸ್ಟ್ರೇಲಿಯಾ ಇಲ್ಲಿ ಮೂರು ಪಂದ್ಯಗಳನ್ನು ಮಾತ್ರ ಸೋತಿದೆ.

ಭಾರತ ಪಿಂಕ್‌ಬಾಲ್‌ ಟೆಸ್ಟ್‌ಗಳಲ್ಲಿ ಆಡಿದ ನಾಲ್ಕರಲ್ಲಿ ಮೂರು ಗೆದ್ದು ಉತ್ತಮ ಸಾಧನೆ ದಾಖಲಿಸಿದೆ. ಆದರೆ ಆಸ್ಟ್ರೇಲಿಯಾದ ದಾಖಲೆಯೂ ಅದಕ್ಕಿಂತ ಉತ್ತಮವಾಗಿದೆ. 12 ಟೆಸ್ಟ್‌ ಪಂದ್ಯಗಳಲ್ಲಿ 11 ರಲ್ಲಿ ಗೆದ್ದಿದೆ. ಆ ಏಕೈಕ ಸೋಲನ್ನು ಈ ವರ್ಷದ ಜನವರಿಯಲ್ಲಿ ವೆಸ್ಟ್‌ ಇಂಡೀಸ್ ಎದುರು ಅನುಭವಿಸಿತ್ತು. ಭಾರತಕ್ಕೆ ಸ್ವಲ್ಪ ಆತಂಕದ ವಿಷಯವೆಂದರೆ ಅಡಿಲೇಡ್‌ನಲ್ಲಿ ಆಡಿರುವ ಪಿಂಕ್‌ಬಾಲ್‌ ಟೆಸ್ಟ್‌ಗಳಲ್ಲಿ ಆತಿಥೇಯರು ಎಲ್ಲವನ್ನೂ ಗೆದ್ದಿದ್ದಾರೆ.

ಇದೇ ಕ್ರೀಡಾಂಗಣದಲ್ಲಿ ರಾಹುಲ್‌ ದ್ರಾವಿಡ್ 2003ರ ಸರಣಿಯಲ್ಲಿ ಅತಿ ಶ್ರೇಷ್ಠ ಇನಿಂಗ್ಸ್‌ (233) ಕಟ್ಟಿದ್ದರು. ಅದೇ ಪಂದ್ಯದಲ್ಲಿ ಅಜೇಯ 72 ರನ್‌ಗಳೊಂದಿಗೆ ಭಾರತ ಗುರಿಯನ್ನು ಬೆನ್ನಟ್ಟುವಲ್ಲೂ ಅವರ ಪಾತ್ರ ಪ್ರಮುಖವಾಗಿತ್ತು. ವಿರಾಟ್‌ ಕೊಹ್ಲಿ ಇಲ್ಲಿ ಗಳಿಸಿದ್ದ ಶತಕಗಳು (115 ಮತ್ತು 141) ಭಾರತವನ್ನು ಬಹುತೇಕ ಗೆಲುವಿನ ಹಳಿಗೆ ತಲುಪಿಸಿದ್ದವು.

ಆದರೆ ಇದೇ ಕ್ರೀಡಾಂಗಣದ ಹಗಲು ರಾತ್ರಿ ಟೆಸ್ಟ್‌ನಲ್ಲಿ ಭಾರತಕ್ಕೆ ಹಿಂದೆಂದೂ ಅನುಭವಿಸದ ಮುಖಭಂಗ ಎದುರಾಯಿತು. ಟೆಸ್ಟ್‌ ಇತಿಹಾಸದಲ್ಲೇ ತನ್ನ ಅತಿ ಕಡಿಮೆ ಮೊತ್ತವಾದ 36 ರನ್‌ಗೆ ಉರುಳಿದ್ದು ಇಲ್ಲಿಯೇ. ಆ ಟೆಸ್ಟ್‌ ನಂತರ ಭಾರತ ಅಮೋಘವಾಗಿ ತಿರುಗಿಬಿದ್ದು ಸರಣಿ ಗೆದ್ದಿದ್ದು ಇತಿಹಾಸ.

ಪಂದ್ಯವಾಡುವ ಉಭಯ ತಂಡಗಳು

ಆಸ್ಟ್ರೇಲಿಯಾ ತಂಡ: ಪ್ಯಾಟ್‌ ಕಮಿನ್ಸ್ (ನಾಯಕ), ಉಸ್ಮಾನ್ ಖ್ವಾಜಾ, ನಥಾನ್ ಮೆಕ್‌ಸ್ವೀನಿ, ಟ್ರಾವಿಸ್‌ ಹೆಡ್‌, ಸ್ವೀವ್‌ ಸ್ಮಿತ್‌, ಮಾರ್ನಸ್‌ ಲಾಬುಷೇನ್‌, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್‌), ಮಿಚೆಲ್‌ ಮಾರ್ಷ್‌, ಮಿಚೆಲ್‌ ಸ್ಟಾರ್ಕ್, ಸ್ಕಾಟ್‌ ಬೋಲ್ಯಾಂಡ್‌, ನಥಾನ್ ಲಯನ್.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಜಸ್‌ಪ್ರೀತ್ ಬೂಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್‌, ಕೆ.ಎಲ್‌.ರಾಹುಲ್, ಶುಭಮನ್ ಗಿಲ್‌, ವಿರಾಟ್‌ ಕೊಹ್ಲಿ, ರಿಷಬ್‌ ಪಂತ್‌ (ವಿಕೆಟ್‌ ಕೀಪರ್‌), ವಾಷಿಂಗ್ಟನ್ ಸುಂದರ್‌, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್‌, ಹರ್ಷಿತ್‌ ರಾಣಾ.

ಪಂದ್ಯ ಆರಂಭ: ಬೆಳಿಗ್ಗೆ 9.30.

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...